AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪತ್ನಿಗೆ ಅನೈತಿಕ ಸಂಬಂಧ ಇದೆ, ಡ್ರಗ್ಸ್ ತೆಗೆದುಕೊಳ್ಳುತ್ತಾಳೆ’; ಕನ್ನಡ ನಟ, ನಿರ್ಮಾಪಕನ ದೂರು

ಡ್ರಗ್ ಪೆಡ್ಲರ್ ಜೊತೆ ದೈಹಿಕ ಸಂಪರ್ಕ ನಡೆಸುವಾಗಲೇ ಪತ್ನಿ ಸಿಕ್ಕಿ ಬಿದ್ದಿದ್ದಾಳೆ ಎಂಬುದು ನಿರ್ಮಾಪಕನ ಆರೋಪ. ಈ ಸಂಬಂಧ ದೂರು ದಾಖಲಾಗಿದೆ.

‘ಪತ್ನಿಗೆ ಅನೈತಿಕ ಸಂಬಂಧ ಇದೆ, ಡ್ರಗ್ಸ್ ತೆಗೆದುಕೊಳ್ಳುತ್ತಾಳೆ’; ಕನ್ನಡ ನಟ, ನಿರ್ಮಾಪಕನ ದೂರು
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on: Jun 26, 2023 | 9:28 AM

Share

ಚಿತ್ರರಂಗದಲ್ಲಿ ತೊಡಗಿಕೊಂಡಿದ್ದವರು ಸಣ್ಣ ಕಿರಿಕ್ ಮಾಡಿಕೊಂಡರೂ ಅದು ದೊಡ್ಡ ಸುದ್ದಿ ಆಗುತ್ತದೆ. ಈಗ ಚಿತ್ರರಂಗದಲ್ಲಿ ನಟನಾಗಿ, ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ಟಿ. ಚಂದ್ರಶೇಖರ್ (T. Chandrashekhar) ಕೌಟುಂಬಿಕ ಕಲಹ ಬೀದಿಗೆ ಬಂದಿದೆ. ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಪತ್ನಿ ಮಾದಕದ್ರವ್ಯ ವ್ಯಸನಿ ಆಗಿದ್ದು, ಡ್ರಗ್ಸ್​ ಪಡೆಯಲು ಪೆಡ್ಲರ್ ಜೊತೆಯೇ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಚಂದ್ರಶೇಖರ್ ದೂರಿದ್ದಾರೆ. ಸದ್ಯ ಈ ಸಂಬಂಧ ಬೆಂಗಳೂರಿನ (Bengaluru) ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಚಾರ ಗೊತ್ತಾಗಿದ್ದು ಹೇಗೆ?

ಚಂದ್ರಶೇಖರ್ ಹೊರಗೆ ತೆರಳಿದ್ದರು. ಈ ವೇಳೆ ಡ್ರಗ್ ಪೆಡ್ಲರ್ ಇವರ ಮನೆಗೆ ಬಂದಿದ್ದನಂತೆ. ಡ್ರಗ್ ಪೆಡ್ಲರ್ ಜೊತೆ ದೈಹಿಕ ಸಂಪರ್ಕ ನಡೆಸುವಾಗಲೇ ಪತ್ನಿ ಸಿಕ್ಕಿ ಬಿದ್ದಿದ್ದಾಳೆ ಎಂಬುದು ಚಂದ್ರಶೇಖರ್ ಆರೋಪ. ಇದನ್ನು ಚಂದ್ರಶೇಖರ್ ಪ್ರಶ್ನಿಸಿದ್ದರು. ಈ ವೇಳೆ ಪತ್ನಿ ಹಾಗೂ ಡ್ರಗ್ ಪೆಡ್ಲರ್ ಎನ್ನಲಾದ ಲಕ್ಷ್ಮೀಶ್ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಅವರು ತಿಳಿಸಿದ್ದಾರೆ. ಈ ಕಾರಣಕ್ಕೆ ಪತ್ನಿ ಹಾಗು ಆಕೆಯ ಪ್ರಿಯತಮ ಎಂದು ಆರೋಪಿಸಿರುವ ಲಕ್ಷ್ಮೀಶ್ ಪ್ರಭು ಮೇಲೆ ಚಂದ್ರಶೇಖರ್ ಕೇಸ್ ಹಾಕಿದ್ದಾರೆ.

ಡ್ರಗ್ ಬಿಡಿಸಲು ಚಂದ್ರಶೇಖರ್ ಪ್ರಯತ್ನ

‘ಪತ್ನಿ ಡ್ರಗ್ ಬಿಡಿಸಲು ಸಾಕಷ್ಟು ದಿನಗಳಿಂದ ಪ್ರಯತ್ನಿಸಿದೆ. ಆದರೆ, ಸಾಧ್ಯವಾಗಿಲ್ಲ ಆಕೆ ಡ್ರಗ್ ಪೆಡ್ಲರ್ ಜೊತೆಯೇ ಸಂಬಂಧ ಇರಿಸಿಕೊಂಡಿದ್ದಾಳೆ’ ಎಂದು ಚಂದ್ರಶೇಖರ್ ಆರೋಪಿಸಿದ್ದಾರೆ.

ಪ್ರತಿ ದೂರು ನೀಡಿದ ಪತ್ನಿ

ಇತ್ತ ಮಹಿಳೆ ಪತಿಯ ಮೇಲೆ ಪತ್ನಿ ಪ್ರತಿ ದೂರು ನೀಡಿದ್ದಾರೆ. ‘ಮನೆಯಲ್ಲಿ ಡ್ರಗ್ ಇಟ್ಟು ಅರೆಸ್ಟ್ ಮಾಡಿಸ್ತೀನಿ ಎಂದು ಚಂದ್ರಶೇಖರ್ ಬೆದರಿಕೆ ಹಾಕಿದ್ದಾರೆ. ಅಷ್ಟಲ್ಲದೆ ನನ್ನ ಸ್ನೇಹಿತ ಲಕ್ಷ್ಮೀಶ್ ಪ್ರಭುಗೆ ಥಳಿಸಲಾಗಿದೆ. ಚಾಕುವಿನಿಂದ ಹಲ್ಲೆ ಮಾಡಲಾಗಿದೆ’ ಎಂದು ಚಂದ್ರಶೇಖರ್ ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಲಾಗಿರುವ ನಿರ್ಮಾಪಕನ ಐಶಾರಾಮಿ ಬದುಕು ಹೀಗಿತ್ತು

ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಚಂದ್ರಶೇಖರ್

ಚಂದ್ರಶೇಖರ್ ಅವರು ನಟನಾಗಿ, ನಿರ್ಮಾಪಕನಾಗಿ ಗುರುತಿಸಿಕೊಂಡಿದ್ದಾರೆ. ‘ಹೀಗೊಂದು ದಿನ’ ಹಾಗೂ ‘ಅಪ್ಪುಗೆ’ ಹೆಸರಿನ ಚಿತ್ರಗಳನ್ನು ಅವರು ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು