AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actor Arjun Gowda: ಜನರ ಕಷ್ಟ ನೋಡಲಾಗದೇ ಆ್ಯಂಬುಲೆನ್ಸ್​ ಚಾಲಕನಾದ ಕನ್ನಡ ಸಿನಿಮಾ ನಟ ಅರ್ಜುನ್​​ ಗೌಡ

ನಟ ಅರ್ಜನ್​ ಗೌಡ ಅವರು ಆ್ಯಂಬುಲೆನ್ಸ್​ ಡ್ರೈವರ್​ ಆಗಿ ಕೆಲಸ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ಕೊರೊನಾ ವೈರಸ್​ ಹಾವಳಿಗೆ ಹೆದರಿಕೊಂಡು ಮನೆಯಲ್ಲಿ ಕುಳಿತಿರುವಾಗ ಅರ್ಜುನ್​ ಗೌಡ ಅವರು ದೇವರು ಮೆಚ್ಚುವ ಕೆಲಸ ಮಾಡುತ್ತಿದ್ದಾರೆ.

Actor Arjun Gowda: ಜನರ ಕಷ್ಟ ನೋಡಲಾಗದೇ ಆ್ಯಂಬುಲೆನ್ಸ್​ ಚಾಲಕನಾದ ಕನ್ನಡ ಸಿನಿಮಾ ನಟ ಅರ್ಜುನ್​​ ಗೌಡ
ನಟ ಅರ್ಜುನ್​ ಗೌಡ
Follow us
ಮದನ್​ ಕುಮಾರ್​
|

Updated on:Apr 30, 2021 | 12:45 PM

ಕೊರೊನಾ ವೈರಸ್​ನಿಂದಾಗಿ ಆಗುತ್ತಿರುವ ಕಷ್ಟಗಳು ಒಂದೆರಡಲ್ಲ. ಸರಿಯಾಗಿ ನಿರ್ವಹಣೆ ಇಲ್ಲದ ಕಾರಣ ರೋಗಿಗಳು ಆಸ್ಪತ್ರೆಯಲ್ಲಿ ಬೆಡ್​ ಸಿಗದೇ ಪರದಾಡುವಂತಾಗಿದೆ. ಸೂಕ್ತ ಸಮಯಕ್ಕೆ ಆಕ್ಸಿಜನ್​ ಸಿಗುತ್ತಿಲ್ಲ. ಇಂಥ ಕಠಿಣ ಸಂದರ್ಭದಲ್ಲಿ ಅನೇಕ ಸೆಲೆಬ್ರಿಟಿಗಳು ತಮ್ಮ ಐಷಾರಾಮಿ ಬಂಗಲೆಗಳಲ್ಲಿ ಹಾಯಾಗಿ ಕಾಲ ಕಳೆಯುತ್ತಿದ್ದಾರೆ. ಆದರೆ ಸ್ಯಾಂಡಲ್​ವುಡ್​ ನಟ ಅರ್ಜುನ್​ ಗೌಡ ಅವರು ಬರೀ ಬಾಯಿ ಮಾತಿನಲ್ಲಿ ಸ್ಟೇ ಹೋಮ್​ ಸ್ಟೇ ಸೇಫ್​ ಎಂಬುದನ್ನು ಬಿಟ್ಟು ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಕನ್ನಡದಲ್ಲಿ ಶಿವರಾಜ್​ಕುಮಾರ್, ಪುನೀತ್​ ರಾಜ್​ಕುಮಾರ್​, ದರ್ಶನ್​ ಮುಂತಾದ ಸ್ಟಾರ್​ ನಟರ ಚಿತ್ರಗಳಲ್ಲಿ ಅಭಿನಯಿಸಿರುವ ಅರ್ಜುನ್​ ಗೌಡ ಅವರಿಗೆ ಫಿಟ್​ನೆಸ್​ ಬಗ್ಗೆ ಅಪಾರ ಆಸಕ್ತಿ. ರುಸ್ತುಂ, ಒಡೆಯ, ಯುವರತ್ನ ಮುಂತಾದ ಚಿತ್ರಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಆದರೆ ಈಗ ಅವರು ಆ್ಯಂಬುಲೆನ್ಸ್​ ಡ್ರೈವರ್​ ಆಗಿ ಕೆಲಸ ಮಾಡುತ್ತಿದ್ದಾರೆ. ಬಹುತೇಕ ಸೆಲೆಬ್ರಿಟಿಗಳು ಕೊರೊನಾ ವೈರಸ್​ ಹಾವಳಿಗೆ ಹೆದರಿಕೊಂಡು ಮನೆಯಲ್ಲಿ ಕುಳಿತಿರುವಾಗ ಅರ್ಜುನ್​ ಗೌಡ ಅವರು ದೇವರು ಮೆಚ್ಚುವ ಕೆಲಸ ಮಾಡುತ್ತಿದ್ದಾರೆ.

ರೋಗಿಗಳನ್ನು ಮನೆಯಿಂದ ಆಸ್ಪತ್ರೆಗೆ ಕರೆದುಕೊಂಡು ಹೋಗುವುದು, ಮೃತ ರೋಗಿಗಳ ದೇಹವನ್ನು ಸ್ಮಶಾನಕ್ಕೆ ತಲುಪಿಸುವ ಕೆಲಸದಲ್ಲಿ ಅರ್ಜುನ್​ ಗೌಡ ಮಗ್ನರಾಗಿದ್ದಾರೆ. ಅವರು ಮಾಡುತ್ತಿರುವ ಈ ಕೆಲಸದ ಬಗ್ಗೆ ಸ್ವತಃ ಅವರ ಕುಟುಂಬದವರಿಗೆ ಗೊತ್ತೇ ಇರಲಿಲ್ಲ. ಆದರೆ ಈಗ ಈ ವಿಚಾರ ಜಗಜ್ಜಾಹೀರಾಗುತ್ತಿರುವುದರಿಂದ ಮನೆಯವರಿಗೆ ವಿಷಯ ಮುಟ್ಟಿದೆ. ಮೊದಲಿಗೆ ತೀವ್ರವಾಗಿ ವಿರೋಧಿಸಿದ್ದ ಕುಟುಂಬದವರು ಈಗ ಮಗನ ಕೆಲಸಕ್ಕೆ ಬೆಂಬಲ ಸೂಚಿಸಿದ್ದಾರೆ. ಅರ್ಜುನ್​ ಗೌಡ ಮಾಡುತ್ತಿರುವ ಈ ಕೆಲಸಕ್ಕೆ ಸ್ಯಾಂಡಲ್​ವುಡ್​ನ ಅನೇಕರು ಭೇಷ್​ ಎನ್ನುತ್ತಿದ್ದಾರೆ. ನಿರ್ದೇಶಕ ಪನ್ನಗ ಭರಣ, ನಟಿ ರಕ್ಷಿತಾ ಪ್ರೇಮ್ ಸೇರಿದಂತೆ ಹಲವರು ಅರ್ಜುನ್​ಗೆ ಮೆಚ್ಚುಗೆ ಸೂಚಿಸಿದ್ದಾರೆ.

ಸದ್ಯಕ್ಕಂತೂ ಕೊರೊನಾ ಕಾಟ ನಿಲ್ಲುವಂತೆ ಕಾಣುತ್ತಿಲ್ಲ. ಜನರ ಪರಿಸ್ಥಿತಿ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಲೇ ಇದೆ. ಹಾಗಾಗಿ ಅರ್ಜುನ್​ ಗೌಡ ಅವರಂತಹ ವ್ಯಕ್ತಿಗಳ ಸಹಾಯ ಈ ಸಮಾಜಕ್ಕೆ ಹೆಚ್ಚು ಅಗತ್ಯವಿದೆ. ಅದನ್ನು ಅರ್ಥ ಮಾಡಿಕೊಂಡಿರುವ ಅವರು ಇನ್ನೂ ಕೆಲವು ತಿಂಗಳ ಕಾಲ ಈ ಕೆಲಸವನ್ನು ಮುಂದುವರಿಸಲು ನಿರ್ಧರಿಸಿದ್ದಾರೆ. ಸದ್ಯಕ್ಕಂತೂ ಬೆಂಗಳೂರಿನಲ್ಲಿ ಜನರು ಅಂತ್ಯ ಸಂಸ್ಕಾರಕ್ಕೂ ಕಷ್ಟಪಡುತ್ತಿದ್ದಾರೆ. ಅಂಥ ಅನೇಕರಿಗೆ ಅರ್ಜುನ್​ ಗೌಡ ಸಹಾಯ ಮಾಡುವ ಮೂಲಕ ಮೆಚ್ಚುಗೆ ಗಳಿಸುತ್ತಿದ್ದಾರೆ.

ಇದನ್ನೂ ಓದಿ: Ramu Death: ನಿಧನಕ್ಕೂ ಮುನ್ನ ಫೋನ್​ನಲ್ಲಿ ಕೊವಿಡ್​ ಕಷ್ಟ ವಿವರಿಸಿದ್ದ ಕೋಟಿ ರಾಮು

ಬೀದಿಗೆ ಬಂತು ಶ್ರೀಕೃಷ್ಣ ಧಾರಾವಾಹಿ ನಟನ ಬದುಕು; ಕಣ್ಣೀರಿಟ್ಟ ಸುನಿಲ್​ ನಗರ್​

Published On - 12:33 pm, Fri, 30 April 21

ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು