AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಹಲ್ಲೆ ಆರೋಪ ಪ್ರಕರಣ: ಪೊಲೀಸರಿಗೆ ಇನ್ನೂ ಸಿಗದ ಭದ್ರತಾ ಸಿಬ್ಬಂದಿ ಪ್ರಕಾಶ್

Darshan Case: ನಟ ದರ್ಶನ್ ಅವರು ಮೈಸೂರಿನಲ್ಲಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವಿರುವ ಪ್ರಕರಣದ ತನಿಖೆ ಮುಂದುವರೆಯುತ್ತಿದೆ. ಆದರೆ, ಪೊಲೀಸರಿಗೆ ಮುಖ್ಯವಾಗಿ ಬೇಕಾಗಿದ್ದ ಭದ್ರತಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಇತ್ತ ಬೆಂಗಳೂರಿನಲ್ಲಿ ನಿರ್ಮಾಪಕ ಉಮಾಪತಿ ತನಿಖೆ ಚುರುಕುಗೊಳಿಸಲು ಮನವಿ ಸಲ್ಲಿಸುವ ಸಾಧ್ಯತೆ ದಟ್ಟವಾಗಿದೆ.

ದರ್ಶನ್ ಹಲ್ಲೆ ಆರೋಪ ಪ್ರಕರಣ: ಪೊಲೀಸರಿಗೆ ಇನ್ನೂ ಸಿಗದ ಭದ್ರತಾ ಸಿಬ್ಬಂದಿ ಪ್ರಕಾಶ್
ನಟ ದರ್ಶನ್​ (ಫೈಲ್ ಚಿತ್ರ)
TV9 Web
| Edited By: |

Updated on:Jul 20, 2021 | 10:11 AM

Share

ಮೈಸೂರು: ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೊಟೆಲ್​ನಲ್ಲಿ ಸಿಬ್ಬಂದಿಯ ಮೇಲೆ ದರ್ಶನ್ (Darshan) ನಡೆಸಿದ್ದಾರೆ ಎನ್ನಲಾದ ಹಲ್ಲೆ ಪ್ರಕರಣದ ಪೊಲೀಸ್ ತನಿಖೆ ಮುಂದುವರೆಯುತ್ತಿದೆ. ದೇವರಾಜ ವಿಭಾಗದ ಎಸಿಪಿ ಎಂ.ಎನ್.ಶಶಿಧರ್ ನೇತೃತ್ವದಲ್ಲಿ ಮಾಹಿತಿ ಸಂಗ್ರಹಣೆ ನಡೆಸಲಾಗುತ್ತಿದೆ. ಘಟನೆ ದಿನದಂದು ಹೊಟೆಲ್​ನಲ್ಲಿ ಹಾಜರಿದ್ದ ಎಲ್ಲಾ ಸಿಬ್ಬಂದಿಗಳ ಹೇಳಿಕೆಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಆದರೆ ಅಲ್ಲಿನ ಭದ್ರತಾ ಸಿಬ್ಬಂದಿ ಪ್ರಕಾಶ್ ಸುಳಿವು ಇನ್ನೂ ಪತ್ತೆಯಾಗಿಲ್ಲ. ಈ ಮೊದಲು ಪ್ರಕಾಶ್ ಮಾತನಾಡಿದ್ದಾರೆ ಎನ್ನಲಾದ ವಿಡಿಯೊವೊಂದು ಎಲ್ಲೆಡೆ ಹರಿದಾಡಿದ್ದು, ಅದರಲ್ಲಿ ಪ್ರಕಾಶ್ ದರ್ಶನ್ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ತನಿಖೆಗೆ ಅವರ ಹೇಳಿಕೆ ಬಹಳ ಮಹತ್ವದ್ದಾಗಿದೆ. ಅದಾಗ್ಯೂ ಪೊಲೀಸರಿಗೆ ಪ್ರಕಾಶ್ ಅವರ ಸುಳಿವು ಲಭ್ಯವಾಗದಿರುವುದರಿಂದ ಮಾಹಿತಿ ಸಂಗ್ರಹಣೆ ಕಾರ್ಯದಲ್ಲಿ ತುಸು ಹಿನ್ನೆಡೆಯಾಗಿದೆ. 

ಘಟನೆ ನಡೆದ ದಿನದಂದು ಹಾಜರಿದ್ದ ಉಳಿದೆಲ್ಲಾ ಸಿಬ್ಬಂದಿಗಳ ಹೇಳಿಕೆಯನ್ನು ಈಗಾಗಲೇ ಪಡೆದಿರುವ ಪೊಲೀಸರು ತನಿಖೆಯ ಮುಂದಿನ ಹಂತವಾಗಿ ನಟ ದರ್ಶನ್ ಮತ್ತು ಅವರ ಸ್ನೇಹಿತರಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ. ಘಟನೆ ನಡೆದ ದಿನದಂದು ದರ್ಶನ್ ಜೊತೆಯಿದ್ದ ಎಲ್ಲರಿಗೂ ಪೊಲೀಸರು ನೋಟಿಸ್ ನೀಡುವ ಸಾಧ್ಯತೆ ಇದೆ.

ನಿಲ್ಲದ ದರ್ಶನ್- ಇಂದ್ರಜಿತ್ ವಾರ್; ತನಿಖೆ ಚುರುಕುಗೊಳಿಸಲು ಉಮಾಪತಿ ಮನವಿ ಸಾಧ್ಯತೆ ಬೆಂಗಳೂರು: ನಟ ದರ್ಶನ್ ಮತ್ತು ನಿರ್ದೇಶಕ, ಪತ್ರಕರ್ತ ಇಂದ್ರಜಿತ್ ಲಂಕೇಶ್ ಅವರ ಆರೋಪ ಪ್ರತ್ಯಾರೋಪಗಳು ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಜೊತೆಗೆ ಅವರು ನೀಡುತ್ತಿರುವ ಹೇಳಿಕೆಗಳಿಂದ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇದೀಗ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ದರ್ಶನ್​ಗೆ ವಂಚನೆ ಯತ್ನಕ್ಕೆ ಸಂಬಂಧಪಟ್ಟಂತೆ ತನಿಖೆ ಚುರುಕುಗೊಳಿಸಲು ಮನವಿ ನೀಡುವ ಸಾಧ್ಯತೆ ಇದೆ. 25 ಕೋಟಿ ರೂ. ಲೋನ್ ವಂಚನೆ ಯತ್ನಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇಂದು ಉಮಾಪತಿ ತಮ್ಮ ವಕೀಲರನ್ನು ಭೇಟಿಯಾಗಲಿದ್ದು, ಅವರ ಬಳಿ ಚರ್ಚಿಸಲಿದ್ದಾರೆ. ನಂತರ ಅವರ ವಕೀಲರು ತನಿಖೆಯನ್ನು ಚುರುಕುಗೊಳಿಸುವಂತೆ ಮನವಿ ಸಲ್ಲಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ‘ನನ್ನ ಪ್ರೀತಿ, ನಂಬಿಕೆ, ಸ್ಫೂರ್ತಿಗೆ ಇನ್ನೊಂದು ಹೆಸರು ಡಿ ಬಾಸ್’; ದರ್ಶನ್​ ಬೆಂಬಲಕ್ಕೆ ನಿಂತ ಯುವ ನಟ

ಇದನ್ನೂ ಓದಿ: ನಿರಂತರ ಬೆದರಿಕೆ; ದರ್ಶನ್​ ಹಿಂಬಾಲಕ ವಿರುದ್ಧ ಸೈಬರ್​ ಪೊಲೀಸರಿಗೆ ಇಂದ್ರಜಿತ್​ ದೂರು

(Sandalwood actor Darshan assault case investigation goes on but the watchman Prakash is hidden from Police)

Published On - 10:02 am, Tue, 20 July 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ