ಎಲ್ಲಾ ಭಾಷೆಯನ್ನು ಗೌರವಿಸುತ್ತೇವೆ ಆದರೆ ಯಾವುದೇ ಹೇರಿಕೆ ಸಲ್ಲದು: ಹಿಂದಿ ಹೇರಿಕೆಯ ವಿರುದ್ಧ ನಟ ಧನಂಜಯ ಕಿಡಿ

Dhananjay: ಪ್ರಸ್ತುತ ಕನ್ನಡ ಚಿತ್ರರಂಗದ ಮುಂಚೂಣಿಯ ನಟರಲ್ಲಿ ಒಬ್ಬರಾಗಿರುವ ಧನಂಜಯ, ಭಾಷಾ ಹೇರಿಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅವರು ಟ್ವಿಟರ್​ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಎಲ್ಲಾ ಭಾಷೆಯನ್ನು ಗೌರವಿಸುತ್ತೇವೆ ಆದರೆ ಯಾವುದೇ ಹೇರಿಕೆ ಸಲ್ಲದು: ಹಿಂದಿ ಹೇರಿಕೆಯ ವಿರುದ್ಧ ನಟ ಧನಂಜಯ ಕಿಡಿ
ನಟ ಧನಂಜಯ್ (ಸಂಗ್ರಹ ಚಿತ್ರ)
Edited By:

Updated on: Sep 14, 2021 | 3:20 PM

ದೇಶದಲ್ಲಿ ಇಂದು ‘ಹಿಂದಿ ದಿವಸ’ ಆಚರಣೆಗೆ ಪ್ರಾದೇಶಿಕ ಭಾಷೆಗಳ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಹಿಂದಿ ಹೇರಿಕೆಯನ್ನು ನಿಲ್ಲಿಸಿ’ ಎಂಬ ಹ್ಯಾಶ್ ಟ್ಯಾಗ್ ಎಲ್ಲೆಡೆ ಟ್ರೆಂಡ್ ಆಗಿದ್ದು, ವಿವಿಧ ರಂಗದ ತಾರೆಯರು ಇದಕ್ಕೆ ದನಿಗೂಡಿಸಿದ್ದಾರೆ. ಕನ್ನಡ ಚಿತ್ರರಂಗದ ಖ್ಯಾತ ನಟ, ದಕ್ಷಿಣ ಭಾರತದ ವಿವಿಧ ಭಾಷೆಗಳಲ್ಲಿ ನಟಿಸುತ್ತಿರುವ ಧನಂಜಯ, ಟ್ವೀಟ್​ಗಳ ಮೂಲಕ ಹಿಂದಿ ಹೇರಿಕೆಯ ವಿರುದ್ಧ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕನ್ನಡದ ಪದ್ಯವೊಂದರ ಸಾಲಿನೊಂದಿಗೆ, ‘ಎಲ್ಲ ಭಾಷೆಯನ್ನು ಗೌರವಿಸುತ್ತೇವೆ, ಆದರೆ ಯಾವುದೇ ಹೇರಿಕೆ ಸಲ್ಲದು’ ಎಂದು ಅವರು  ಟ್ವೀಟ್ ಮಾಡಿದ್ದಾರೆ. ಇದಕ್ಕೆ ಅಭಿಮಾನಿಗಳು ದನಿಗೂಡಿಸಿದ್ದಾರೆ.

ನಟ ಧನಂಜಯ ಹಂಚಿಕೊಂಡ ಟ್ವೀಟ್:


ಹಿಂದಿ ಹೇರಿಕೆಯೊಂದಿಗೆ ಇಂಗ್ಲೀಷ್ ಹೇರಿಕೆಯ ವಿರುದ್ಧವೂ ಮಾತನಾಡಿರುವ ಧನಂಜಯ, ಎಲ್ಲರೂ ಈ ಭಾಷೆಗಳನ್ನು ಕಲಿಯಬೇಕು ಎನ್ನುವುದು ಅವಿವೇಕ ಎಂದಿದ್ದಾರೆ. ಯಾವುದೇ ಭಾಷೆಯನ್ನು ಒತ್ತಾಯಪೂರ್ವಕವಾಗಿ ಹೇರುವುದು ದಬ್ಬಾಳಿಕೆಯಲ್ಲದೇ ಮತ್ತೇನಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಈ ಕುರಿತು ಅವರು ಹಂಚಿಕೊಂಡ ಟ್ವೀಟ್ ಇಲ್ಲಿದೆ:

ಒಟ್ಟು ಮೂರು ಟ್ವೀಟ್​ಗಳನ್ನು ಮಾಡಿರುವ ಧನಂಜಯ, ಕೊನೆಯ ಟ್ವೀಟ್​ನಲ್ಲಿ ಕುವೆಂಪು ಅವರ ಮಾತನ್ನು ಉಲ್ಲೇಖಿಸಿದ್ದಾರೆ. ‘ಭಾರತಕ್ಕೆ ತ್ರಿಭಾಷಾ ಸೂತ್ರದ ಅವಶ್ಯಕತೆ ಇಲ್ಲ. ಎಲ್ಲರಿಗೂ ಎಲ್ಲಾ ಭಾಷೆಯೂ ಏತಕ್ಕೆ ಬೇಕು? ಪ್ರತಿಯೊಬ್ಬರೂ ತಮಗೆ ಅಗತ್ಯವಿರುವ ಭಾಷೆಯನ್ನು ಕಲಿಯಬಹುದು’ ಎಂದು ಕುವೆಂಪುರವರು ‘ಬಹುಭಾಷೆಗಳಲ್ಲಿ ದ್ವಿಭಾಷೆ’ ಲೇಖನದಲ್ಲಿ ಬರೆದಿರುವ ಮಾತನ್ನು ಉಲ್ಲೇಖಿಸಿರುವ ಚಿತ್ರವನ್ನು ಧನಂಜಯ ಹಂಚಿಕೊಂಡಿದ್ದಾರೆ.

ಕುವೆಂಪು ಮಾತನ್ನು ಉಲ್ಲೇಖಿಸಿರುವ ಧನಂಜಯ್:


ಧನಂಜಯ ಅವರಲ್ಲದೇ ಕನ್ನಡ ಚಿತ್ರರಂಗದ ಹಲವರು ಹಿಂದಿ ಹೇರಿಕೆಯ ವಿರುದ್ಧ ಧ್ವನಿ ಎತ್ತಿದ್ದಾರೆ. ‘ಹೆಬ್ಬುಲಿ’, ‘ಪೈಲ್ವಾನ್’ ಮೊದಲಾದ ಚಿತ್ರಗಳ ಮೂಲಕ ಖ್ಯಾತಿ ಗಳಿಸಿದ ನಿರ್ದೇಶಕ ಕೃಷ್ಣ, ‘ಕನ್ನಡ ನುಡಿ, ಹಿಂದಿ ಬಿಡಿ’ ಎಂದು ಟ್ವೀಟ್ ಮಾಡಿ ಹಿಂದಿ ಹೇರಿಕೆಯನ್ನು ವಿರೋಧಿಸಿದ್ದಾರೆ. ಕನ್ನಡದ ಖ್ಯಾತ ನಟರ ಅಭಿಮಾನಿಗಳು ಕೂಡ ಹಿಂದಿ ಹೇರಿಕೆಯ ವಿರುದ್ಧ ಧ್ವನಿ ಎತ್ತಿದ್ದಾರೆ.

ಇದನ್ನೂ ಓದಿ:

Stop Hindi Imposiotion; ಹಿಂದಿ ಹೇರಿಕೆ ಖಂಡಿಸಿ ಟ್ವಿಟರ್ ಅಭಿಯಾನ, ಕನ್ನಡಿಗರು ಕೈ ಜೋಡಿಸಲು ಕರ್ನಾಟಕ ರಕ್ಷಣಾ ವೇದಿಕೆ ಮನವಿ

ಸದನದಲ್ಲೂ ಚರ್ಚೆ ಆಯ್ತು ಸಂಚಾರಿ ವಿಜಯ್​ ಸಾಧನೆ; ಹಾಡಿ ಹೊಗಳಿದ ಸಿದ್ದರಾಮಯ್ಯ

(Sandalwood actor Dhananjay raise voice against Hindi and English imposition)

Published On - 3:13 pm, Tue, 14 September 21

Web contact

TV9 Kannada

Read More
Follow Us