25 ವರ್ಷಗಳ ನೆನಪಿನ ಪುಟ ತೆರೆದ ಹರೀಶ್​ ರಾಜ್​; ಚಿತ್ರರಂಗದಲ್ಲಿ ‘ಕಲಾಕಾರ್​’ ಮೈಲಿಗಲ್ಲು

Harish Raj | Sandalwood: ಅನೇಕ ಸಿನಿಮಾ, ಧಾರಾವಾಹಿಗಳಲ್ಲಿ ಹರೀಶ್​ ರಾಜ್​ ನಟಿಸಿದ್ದಾರೆ. ಬಿಗ್​ ಬಾಸ್​ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿಯೂ ಗಮನ ಸೆಳೆದಿದ್ದಾರೆ. ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಖುಷಿಯಲ್ಲಿ ಅವರಿದ್ದಾರೆ.

25 ವರ್ಷಗಳ ನೆನಪಿನ ಪುಟ ತೆರೆದ ಹರೀಶ್​ ರಾಜ್​; ಚಿತ್ರರಂಗದಲ್ಲಿ ‘ಕಲಾಕಾರ್​’ ಮೈಲಿಗಲ್ಲು
ಹರೀಶ್ ರಾಜ್
Follow us
| Updated By: ಮದನ್​ ಕುಮಾರ್​

Updated on: Aug 04, 2022 | 7:15 AM

ಖ್ಯಾತ ನಟ ಹರೀಶ್​ ರಾಜ್​ (Harish Raj) ಅವರು ಕನ್ನಡ ಚಿತ್ರರಂಗದದಲ್ಲಿ 25 ವರ್ಷಗಳನ್ನು ಪೂರೈಸಿದ್ದಾರೆ. ಈ ಸುದೀರ್ಘ ಪಯಣದಲ್ಲಿ ಅವರು ಪಡೆದ ಅನುಭವ ಅಪಾರ. 25 ವರ್ಷದ ಮೈಲಿಗಲ್ಲು ತಲುಪಿರುವ ಅವರು ತಮ್ಮ ಇಡೀ ಸಿನಿಜರ್ನಿಯನ್ನು ಮೆಲುಕು ಹಾಕಿದ್ದಾರೆ. ಆ ಸಲುವಾಗಿ ಹರೀಶ್​ ರಾಜ್​ ಇತ್ತೀಚೆಗೆ ಸುದ್ದಿಗೋಷ್ಠಿ ಆಯೋಜಿಸಿದ್ದರು. ಆ ಕಾರ್ಯಕ್ರಮಕ್ಕೆ ಸ್ಯಾಂಡಲ್​ವುಡ್​ (Sandalwood) ಗಣ್ಯರು ಆಗಮಿಸಿದ್ದರು. ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ (Girish Kasaravalli), ನಟ-ನಿರ್ದೇಶಕ ಸುನೀಲ್ ಪುರಾಣಿಕ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್, ನಿರ್ಮಾಪಕ ಮಧುಸೂದನ್ ಗೌಡ ಅವರು ಸುದ್ದಿಗೋಷ್ಠಿಗೆ ಹಾಜರಿ ಹಾಕಿದ್ದರು. ಎಲ್ಲರೂ ಹರೀಶ್​ ರಾಜ್​ ಸಾಧನೆಯನ್ನು ಶ್ಲಾಘಿಸಿದ್ದಾರೆ. 25 ವರ್ಷಗಳಲ್ಲಿ 60ಕ್ಕೂ ಹೆಚ್ಚು ಸಿನಿಮಾದಲ್ಲಿ ಹರೀಶ್​ ರಾಜ್​ ನಟಿಸಿದ್ದಾರೆ. ಪ್ರತಿಭಾವಂತ ನಿರ್ದೇಶಕರು, ಕಲಾವಿದರು ಮತ್ತು ತಂತ್ರಜ್ಞರ ಜೊತೆ ಕೆಲಸ ಮಾಡಿದ ಹೆಮ್ಮೆ ಅವರಿಗೆ ಇದೆ.

ರಾಜೇಂದ್ರ ಸಿಂಗ್ ಬಾಬು ನಿರ್ದೇಶನ ಮಾಡಿದ ‘ದೋಣಿ ಸಾಗಲಿ’ ಚಿತ್ರದ ಮೂಲಕ 1997ರಲ್ಲಿ ಹರೀಶ್​ ರಾಜ್​ ಅವರ ಸಿನಿಮಾ ಜರ್ನಿ ಶುರುವಾಯಿತು. ಅದೇ ವರ್ಷ ‘ತಾಯಿ ಸಾಹೇಬ’ ಚಿತ್ರದಲ್ಲಿ ನಟಿಸಿದರು. ‘ನಿರ್ದೇಶಕ ಗಿರೀಶ್ ಕಾಸರವಳ್ಳಿಯವರ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿದ್ದು ನನ್ನ ಪಾಲಿನ ಪುಣ್ಯ. ಅದರಲ್ಲಿ ನಾನು ಜಯಮಾಲ ಅವರ ಮಗನ ಪಾತ್ರ ನಿರ್ವಹಣೆ ಮಾಡಿದ್ದೆ’ ಎಂದು ಆ ದಿನಗಳ ನೆನಪಿನ ಪುಟವನ್ನು ಹರೀಶ್​ ರಾಜ್​ ತೆರೆದಿದ್ದಾರೆ. ‘25 ವರ್ಷ ಪೂರೈಸಿದ ಖುಷಿಯ ಸಮಾರಂಭಕ್ಕೆ ನನ್ನ ಮೊದಲ ಚಿತ್ರದ ನಿರ್ಮಾಪಕ ಮಧುಸೂದನ್ ಗೌಡ, ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ಸುನೀಲ್ ಪುರಾಣಿಕ್ ಹಾಗೂ ಭಾ.ಮ. ಹರೀಶ್ ಅವರು ಬಂದಿರುವುದು ತುಂಬ ಖುಷಿ ನೀಡಿದೆ. ಇಷ್ಟು ಬೇಗ 25 ವರ್ಷಗಳು ಕಳೆದು ಹೋಯಿತಾ ಅನಿಸುತ್ತದೆ’ ಎಂದಿದ್ದಾರೆ ಹರೀಶ್​ ರಾಜ್​.

‘ನನ್ನ ನಿರ್ದೇಶನದ ‘ತಾಯಿ ಸಾಹೇಬ’ ಚಿತ್ರದಲ್ಲಿ ಹರೀಶ್​ ರಾಜ್​ ತುಂಬ ಲವಲವಿಕೆಯಿಂದ ನಟಿಸಿ ಎಲ್ಲರ ಮೆಚ್ಚುಗೆ ಪಡೆದರು. ನಂತರ ನನ್ನ ‘ದ್ವೀಪ’ ಚಿತ್ರದಲ್ಲೂ ಅಭಿನಯಿಸಿದ್ದರು. ಆ ಚಿತ್ರದ ಅಭಿನಯಕ್ಕಾಗಿ ಅವರು ರಾಷ್ಟ್ರೀಯ ಪ್ರಶಸ್ತಿ ರೇಸ್​ನಲ್ಲಿ ಇದ್ದರು ಎಂದು ನನಗೆ ನಿಧಾನವಾಗಿ ತಿಳಿಯಿತು. ಒಟ್ಟಿನಲ್ಲಿ ಹರೀಶ್ ರಾಜ್ ಉತ್ತಮ ನಟ.‌ ಮುಂದೆ ಸಹ ಅವರಿಗೆ ಒಳ್ಳೆಯ ಅವಕಾಶಗಳು ಸಿಗಲಿ’ ಎಂದು ಗಿರೀಶ್​ ಕಾಸರವಳ್ಳಿ ಹಾರೈಸಿದ್ದಾರೆ.

ಇದನ್ನೂ ಓದಿ
Image
Anushka Shetty: ಚಿತ್ರರಂಗದಲ್ಲಿ 17 ವರ್ಷ ಪೂರೈಸಿದ ಅನುಷ್ಕಾ ಶೆಟ್ಟಿ; ಕನ್ನಡತಿಯ ಸಾಧನೆಗೆ ಪರಭಾಷೆ ಮಂದಿ ಸೆಲೆಬ್ರೇಷನ್​
Image
ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಜ್ಯೂ. ಎನ್​ಟಿಆರ್​; ‘ಬಾಲ ರಾಮಾಯಣಂ’ ನೆನಪಿಸಿದ ಫೋಟೋಗಳು
Image
Aishwarya Rai: ಹಿಂದಿ ಚಿತ್ರರಂಗದಲ್ಲಿ 20 ವರ್ಷ ಪೂರೈಸಿದ ಐಶ್ವರ್ಯಾ ರೈ; ಸುಂದರ ಪತ್ರದ ಮೂಲಕ ಶುಭ ಕೋರಿದ ರೇಖಾ
Image
Shiva Rajkumar: ಚಿತ್ರರಂಗದಲ್ಲಿ 35ವರ್ಷ ಪೂರೈಸಿದ ಶಿವರಾಜ್​ಕುಮಾರ್​ಗೆ ಪ್ರೀತಿಯಿಂದ ಶುಭ ಹಾರೈಸಿದ ಕಿಚ್ಚ ಸುದೀಪ್​

‘ಕಲಾಕಾರ್​’ ಮುಂತಾದ ಸಿನಿಮಾಗಳಲ್ಲಿ ನಟಿಸಿ ಹರೀಶ್​ ರಾಜ್​ ಗಮನ ಸೆಳೆದರು. ಅನೇಕ ಸೀರಿಯಲ್​ಗಳಲ್ಲಿ ನಟಿಸಿದ ಅನುಭವವೂ ಅವರಿಗೆ ಇದೆ. ಬಿಗ್​ ಬಾಸ್​ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುವ ಮೂಲಕ ಅವರು ಇನ್ನಷ್ಟು ಜನಪ್ರಿಯತೆ ಪಡೆದರು.

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ