AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್‌ಗೆ ಯಾವುದೇ ಕೆಟ್ಟ ಹವ್ಯಾಸಗಳು ಇರಲಿಲ್ಲ; ಅವರ ಸಾವಿನ ಸುದ್ದಿ ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ- ನಟ ಅರ್ಜುನ್ ಸರ್ಜಾ

arjun sarja: ಪುನೀತ್ ಚಿಕ್ಕವನಿದ್ದಾಗಿನಿಂದಲೂ ನೋಡುತ್ತಿದ್ದೇನೆ. ಪುನೀತ್‌ಗೆ ಯಾವುದೇ ಕೆಟ್ಟ ಹವ್ಯಾಸಗಳು ಇರಲಿಲ್ಲ. ಚಿಕ್ಕ ವಯಸ್ಸಿನಲ್ಲೇ ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದ ನಟ. ನಟ ಪುನೀತ್ ನಿಧನದ ಸುದ್ದಿ ನಿಜಕ್ಕೂ ಶಾಕ್ ಆಗಿದೆ ಎಂದು ಪುನೀತ್ ಅಂತಿಮ ದರ್ಶನ ಬಳಿಕ ಅರ್ಜುನ್ ಸರ್ಜಾ ಭಾವುಕರಾಗಿ ನುಡಿದರು.

ಪುನೀತ್‌ಗೆ ಯಾವುದೇ ಕೆಟ್ಟ ಹವ್ಯಾಸಗಳು ಇರಲಿಲ್ಲ; ಅವರ ಸಾವಿನ ಸುದ್ದಿ ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ- ನಟ ಅರ್ಜುನ್ ಸರ್ಜಾ
ಪುನೀತ್‌ಗೆ ಯಾವುದೇ ಕೆಟ್ಟ ಹವ್ಯಾಸಗಳು ಇರಲಿಲ್ಲ; ಅವರ ಸಾವಿನ ಸುದ್ದಿ ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ- ಅರ್ಜುನ್ ಸರ್ಜಾ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Oct 30, 2021 | 3:56 PM

ಬೆಂಗಳೂರು: ಶುಕ್ರವಾರ ನಿಧನರಾದ ಸ್ಯಾಂಡಲ್​ವುಡ್​ ಖ್ಯಾತ ನಟ ಪುನೀತ್ ರಾಜ್​ಕುಮಾರ್​ ಅವರ ಅಂತಿಮ ದರ್ಶನ ಪಡೆಯಲು ಬಹುಭಾಷಾ ನಟ, ಕನ್ನಡದ ಕುವರ ​ಅರ್ಜುನ್ ಸರ್ಜಾ ಬೆಂಗಳೂರಿಗೆ ಆಗಮಿಸಿದ್ದಾರೆ. ನಗರಕ್ಕೆ ಆಗಮಿಸಿ, ನೇರ ಕಂಠೀರವ ಸ್ಟೇಡಿಯಂಗೆ ತೆರಳಿದ ನಟ ಅರ್ಜುನ್ ಸರ್ಜಾ ಪುನೀತ್ ಅಂತಿಮ ದರ್ಶನ, ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪುನೀತ್ ಸಾವಿನ ಸುದ್ದಿ ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ. ಪುನೀತ್ ಚಿಕ್ಕವನಿದ್ದಾಗಿನಿಂದಲೂ ನೋಡುತ್ತಿದ್ದೇನೆ. ಪುನೀತ್‌ಗೆ ಯಾವುದೇ ಕೆಟ್ಟ ಹವ್ಯಾಸಗಳು ಇರಲಿಲ್ಲ. ಚಿಕ್ಕ ವಯಸ್ಸಿನಲ್ಲೇ ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದ ನಟ. ನಟ ಪುನೀತ್ ನಿಧನದ ಸುದ್ದಿ ನಿಜಕ್ಕೂ ಶಾಕ್ ಆಗಿದೆ ಎಂದು ಪುನೀತ್ ಅಂತಿಮ ದರ್ಶನ ಬಳಿಕ ಅರ್ಜುನ್ ಸರ್ಜಾ ಭಾವುಕರಾಗಿ ನುಡಿದರು.

ಅಂತ್ಯಕ್ರಿಯೆ ಒಂದು ವಾರವಾದರೂ ನಾವು ಇಲ್ಲೇ ಇರುತ್ತೇವೆ:

ನಟ ಪುನೀತ್ ರಾಜ್​ಕುಮಾರ್​ ನಿಧನಕ್ಕೆ ಎಲ್ಲಡೆಯಿಂದ ಅಶ್ರುತರ್ಪಣ ಹರಿದುಬರುತ್ತಿದೆ. ಸದ್ಯಕ್ಕೆ ಪುನೀತ್​ ರಾಜ್​ಕುಮಾರ್​ ದೇಹ ಕಂಠೀರವ ಸ್ಟೇಡಿಯಂಲ್ಲಿದೆ. ಅಭಿಮಾನಿಗಳ ದಂಡು ಸ್ಟೇಡಿಯಂಗೆ ಹರಿದುಬರುತ್ತಿದೆ. ಆದರೆ ಇನ್ನು ಕೆಲವರು ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಹಿನ್ನೆಲೆ ಪುನೀತ್​ ಪಾರ್ಥಿವ ಶರೀರ ನೋಡಲು ಆಗಮಿಸುತ್ತಿದ್ದಾರೆ.  ರಾಜ್ಯದ ನಾನಾ ಭಾಗದಿಂದ ಆಗಮಿಸಿರುವ ಅಭಿಮಾನಿಗಳು ಕಂಠೀರವ ಸ್ಟುಡಿಯೋ ಸುತ್ತಮುತ್ತ ಬೀಡುಬಿಟ್ಟಿದ್ದಾರೆ. ಅಂತ್ಯಕ್ರಿಯೆ ಒಂದು ವಾರವಾದರೂ ನಾವು ಇಲ್ಲೇ ಇರುತ್ತೇವೆ. ಪುನೀತ್ ಅಂತಿಮ ದರ್ಶನ ಪಡೆದೇ ಇಲ್ಲಿಂದ ತೆರಳುತ್ತೇವೆ ಎಂದು ಕುಳಿತುಬಿಟ್ಟಿದ್ದಾರೆ.  ಕಂಠೀರವ ಸ್ಟುಡಿಯೋ ಬಳಿ ಅಪ್ಪು ಅಭಿಮಾನಿಗಳ ಹೀಗೆ ಬಿಗಿ ಪಟ್ಟುಹಿಡಿರುವುದನ್ನು ಕಂಡು ಪೊಲೀಸ್ ಸಿಬ್ಬಂದಿಗೆ ಜನರನ್ನು ನಿಯಂತ್ರಿಸಲು ಹರಸಾಹಸ ಪಡುವಂತಾಗಿದೆ.

ಅಭಿಮಾನಿಗಳಿಗೆ ಕಂಠೀರವ ಸ್ಟುಡಿಯೋದಲ್ಲಿ ಪ್ರವೇಶಕ್ಕೆ ಅವಕಾಶವಿಲ್ಲ: ಗಮನಾರ್ಹವೆಂದರೆ ನಾಳೆ ಕಂಠೀರವ ಸ್ಟುಡಿಯೋದಲ್ಲಿ ನಿನ್ನೆ ಅಗಲಿದ ಪುನೀತ್​ ರಾಜ್​ಕುಮಾರ್​ ಅವರ ಅಂತ್ಯಕ್ರಿಯೆ ನಡೆಯಲಿದೆ. ಆದರೆ ಅದು ಅವರ ಕುಟುಂಬಸ್ಥರು ಮತ್ತು ಆಪ್ತ ವಲಯಕ್ಕೆ ಮಾತ್ರ ಸೀಮಿತವಾಗಿರುತ್ತದೆ. ಅಭಿಮಾನಿಗಳಿಗೆ ಕಂಠೀರವ ಸ್ಟುಡಿಯೋದ ಒಳಗಡೆಗೆ ಪ್ರವೇಶಕ್ಕೆ ಅವಕಾಶವಿರುವುದಿಲ್ಲ.

Also Read: Puneeth Rajkumar: ಒಂದೇ ದಿನಾಂಕದಲ್ಲಿ ಜನಿಸಿದ ವಿಜಯ್​, ಅಪ್ಪು, ಚಿರುಗೆ ಇದೆಂಥ ದುರ್ವಿಧಿ; ಕಂಟಕವಾಯ್ತಾ ಸಂಖ್ಯೆ 17?

Puneeth Rajkumar Death : ಅಪ್ಪು ಬಗ್ಗೆ ಅರ್ಜುನ್ ಸರ್ಜಾ ಭಾವುಕ ಮಾತು|Tv9 kannada

(sandalwood actor Puneeth Rajkumar actor arjun sarja pays Condolence)

Published On - 3:40 pm, Sat, 30 October 21

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ