AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರಾಗಿಣಿ ಇನ್ನೂ 5 ದಿನ ಸಿಸಿಬಿ ವಶಕ್ಕೆ: ಮ್ಯಾಜಿಸ್ಟ್ರೇಟ್‌ ಕೋರ್ಟ್ ಆದೇಶ

[lazy-load-videos-and-sticky-control id=”zE1COkuNDdA”] ಬೆಂಗಳೂರು: ಸ್ಯಾಂಡಲ್‌ವುಡ್​ನಲ್ಲಿ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ದಿನಗಳಿಂದ CCB ಕಸ್ಟಡಿಯಲ್ಲಿದ್ದ ನಟಿ ರಾಗಿಣಿ ದ್ವಿವೇದಿ ಅವರನ್ನು 5 ದಿನಗಳ ಕಾಲ ಪೊಲೀಸ್‌ ವಶಕ್ಕೆ ನೀಡಿ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ನ್ಯಾಯಾಧೀಶರಾದ ಜಗದೀಶ್ ಆದೇಶ ಹೊರಡಿಸಿದ್ದಾರೆ. ಇದರಿಂದ ರಾಗಿಣಿಯನ್ನು ವಶಕ್ಕೆ ಪಡೆದಿರುವ ಸಿಸಿಬಿ ಪೊಲೀಸರು ಇನ್ನೂ 5 ದಿನ ತನಿಖೆ ಮುಂದುವರಿಸಲಿದ್ದಾರೆ.  ತನಿಖೆ ಮುಗಿದ ಬಳಿಕ, 1ನೇ ಎಸಿಎಂಎಂ ಕೋರ್ಟ್‌ಗೆ ಸಿಸಿಬಿ ಪೊಲೀಸರು ಹಾಜರುಪಡಿಸಲಿದ್ದಾರೆ. ಇದಕ್ಕೂ ಮುನ್ನ ರಾಗಿಣಿಯನ್ನು ಮತ್ತೆ ಕಸ್ಟಡಿಗೆ ನೀಡುವಂತೆ CCB […]

ನಟಿ ರಾಗಿಣಿ ಇನ್ನೂ 5 ದಿನ ಸಿಸಿಬಿ ವಶಕ್ಕೆ: ಮ್ಯಾಜಿಸ್ಟ್ರೇಟ್‌ ಕೋರ್ಟ್ ಆದೇಶ
KUSHAL V
| Edited By: ಸಾಧು ಶ್ರೀನಾಥ್​|

Updated on:Sep 07, 2020 | 5:43 PM

Share

[lazy-load-videos-and-sticky-control id=”zE1COkuNDdA”]

ಬೆಂಗಳೂರು: ಸ್ಯಾಂಡಲ್‌ವುಡ್​ನಲ್ಲಿ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ದಿನಗಳಿಂದ CCB ಕಸ್ಟಡಿಯಲ್ಲಿದ್ದ ನಟಿ ರಾಗಿಣಿ ದ್ವಿವೇದಿ ಅವರನ್ನು 5 ದಿನಗಳ ಕಾಲ ಪೊಲೀಸ್‌ ವಶಕ್ಕೆ ನೀಡಿ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ನ್ಯಾಯಾಧೀಶರಾದ ಜಗದೀಶ್ ಆದೇಶ ಹೊರಡಿಸಿದ್ದಾರೆ. ಇದರಿಂದ ರಾಗಿಣಿಯನ್ನು ವಶಕ್ಕೆ ಪಡೆದಿರುವ ಸಿಸಿಬಿ ಪೊಲೀಸರು ಇನ್ನೂ 5 ದಿನ ತನಿಖೆ ಮುಂದುವರಿಸಲಿದ್ದಾರೆ.  ತನಿಖೆ ಮುಗಿದ ಬಳಿಕ, 1ನೇ ಎಸಿಎಂಎಂ ಕೋರ್ಟ್‌ಗೆ ಸಿಸಿಬಿ ಪೊಲೀಸರು ಹಾಜರುಪಡಿಸಲಿದ್ದಾರೆ.

ಇದಕ್ಕೂ ಮುನ್ನ ರಾಗಿಣಿಯನ್ನು ಮತ್ತೆ ಕಸ್ಟಡಿಗೆ ನೀಡುವಂತೆ CCB ಅಧಿಕಾರಿಗಳು ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಡ್ರಗ್ಸ್ ಪ್ರಕರಣ ಸಂಬಂಧ ನಟಿ ರಾಗಿಣಿಯ ವಿಚಾರಣೆ ನಡೆಸುವ ಅಗತ್ಯವಿದೆ. ರಾಗಿಣಿ ದ್ವಿವೇದಿ CCB ತನಿಖೆಗೆ ಸರಿಯಾಗಿ ಸಹಕರಿಸುತ್ತಿಲ್ಲ. ನಾವು ಕೇಳಿದ ಪ್ರಶ್ನೆಗಳಿಗೆ ಅವರು ಸರಿಯಾಗಿ ಉತ್ತರಿಸುತ್ತಿಲ್ಲ ಎಂದು ಅಧಿಕಾರಿಗಳು ತಮ್ಮ ಮನವಿಯಲ್ಲಿ ಉಲ್ಲೇಖಿಸಿದ್ದರು ಎಂದು ಹೇಳಲಾಗಿದೆ.

ನ್ಯಾಯಾಧೀಶರ ಮುಂದೆ ರಾಗಿಣಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಿದ CCB ಪೊಲೀಸರು ಮಡಿವಾಳದಲ್ಲಿರುವ ಮಹಿಳಾ ಸಾಂತ್ವನ ಕೇಂದ್ರದಿಂದಲೇ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಕಲ್ಪಿಸಿದ್ದರು.

ಕಸ್ಟಡಿ ಅವಧಿ ಮುಗಿದ ನಂತರ ಜಾಮೀನು ಅರ್ಜಿ ಬಗ್ಗೆ ತೀರ್ಮಾನ:  ಈ ಮಧ್ಯೆ, ನಟಿ ರಾಣಿಗಿ ಅವರು ಎನ್‌ಡಿಪಿಎಸ್‌ ವಿಶೇಷ‌ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದು, ಜಾಮೀನು ಅರ್ಜಿ ವಿಚಾರಣೆ ಬಾಕಿ ಇದೆ. ಸದ್ಯಕ್ಕೆ, ರಾಗಿಣಿ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡುವ ಸಾಧ್ಯತೆಯಿದೆ. ಆ ಕಡೆ, ಪೊಲೀಸ್‌ ಕಸ್ಟಡಿ ಅವಧಿ ಮುಗಿಯುವವರೆಗೂ ಅರ್ಜಿ ತೀರ್ಮಾನವಿಲ್ಲ. ಕಸ್ಟಡಿ ಅವಧಿ ಮುಗಿದ ನಂತರ ಜಾಮೀನು ಅರ್ಜಿ ಬಗ್ಗೆ ತೀರ್ಮಾನವಾಗಲಿದೆ.‌

Published On - 2:29 pm, Mon, 7 September 20

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ