Vinod Prabhakar: ‘ನನ್ನ ಮಾರ್ಕೆಟ್ ನನಗೆ ಗೊತ್ತಿದೆ’ ಅಂತ ವಿನೋದ್ ಪ್ರಭಾಕರ್ ಹೇಳಿದ್ದೇಕೆ?

ಒಂದು ಚಿತ್ರದ ಯಶಸ್ಸು ಹಲವು ಅಪಪ್ರಚಾರಕ್ಕೆ ಗುರಿ ಮಾಡುತ್ತದೆ ಎಂಬುದನ್ನು ಸ್ಯಾಂಡಲ್​ವುಡ್​ನ ಪ್ರತಿಭಾವಂತ ಯುವ ನಟ ವಿನೋದ್ ಪ್ರಭಾಕರ್ ಮನಗಂಡಿದ್ದಾರೆ. ಆ ಕುರಿತು ಪ್ರತಿಕ್ರಿಯಿಸಿರುವ ಅವರು ಹಲವು ವಿಚಾರಗಳನ್ನು ತೆರೆದಿಟ್ಟಿದ್ದಾರೆ.

Vinod Prabhakar: 'ನನ್ನ ಮಾರ್ಕೆಟ್ ನನಗೆ ಗೊತ್ತಿದೆ' ಅಂತ ವಿನೋದ್ ಪ್ರಭಾಕರ್ ಹೇಳಿದ್ದೇಕೆ?
ರಾಬರ್ಟ್ ಚಿತ್ರದ ರಾಘವ ಪಾತ್ರದಲ್ಲಿ ವಿನೋದ್ ಪ್ರಭಾಕರ್ (ಎಡ), ವಿನೋದ್ ಪ್ರಭಾಕರ್ (ಬಲ)
Follow us
| Updated By: shivaprasad.hs

Updated on:Jul 10, 2021 | 2:46 PM

‘ರಾಬರ್ಟ್’ ಚಿತ್ರದಲ್ಲಿ ದರ್ಶನ್ ಜೊತೆ ತೆರೆ ಮೇಲೆ ಕಾಣಿಸಿಕೊಂಡು ಎಲ್ಲರಿಂದ ಮೆಚ್ಚುಗೆ ಪಡೆದಿದ್ದ ವಿನೋದ್ ಪ್ರಭಾಕರ್ (Vinod Prabhakar) ಅವರು, ತಮ್ಮ ಕುರಿತು ಎದ್ದಿರುವ ಅಪಪ್ರಚಾರಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಅವರ ಹೊಸ ಚಿತ್ರ ‘ವರದ’ದ ಮೋಷನ್ ಪೋಸ್ಟರ್ ಬಿಡುಗಡೆಯ ಸಂದರ್ಭದಲ್ಲಿ ಮಾತನಾಡಿದ ಅವರು, ‘ನನ್ನ ಸಂಭಾವನೆ ಏರಿಕೆಯಾಗಿದೆ, ಕೋಟಿ ಡಿಮ್ಯಾಂಡ್ ಮಾಡುತ್ತಾ ಇದ್ದಾರೆ’ ಎಂದೆಲ್ಲಾ ಅಪಪ್ರಚಾರ ಮಾಡುತ್ತಿದ್ದಾರೆ. ನನ್ನ ಮಾರ್ಕೆಟ್ ನನಗೆ ಗೊತ್ತದೆ. ನಾನು ಡಿಮ್ಯಾಂಡ್ ಮಾಡುವುದು ಒಳ್ಳೆಯ ಕತೆ ಹಾಗೂ ಒಳ್ಳೆಯ ಪಾತ್ರಕ್ಕೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ನಿರ್ಮಾಪಕರಿಗೆ ಹೆಚ್ಚು ಬಜೆಟ್ ಹಾಕಬೇಡಿ ಎಂದು ಹೇಳುವವನು ನಾನು. ಉದಾಹರಣೆಗೆ, ಹತ್ತು ಕೋಟಿ ಹಾಕಿ ಮಾಡಿದ ಚಿತ್ರ 5.5ಕೋಟಿ ಗಳಿಕೆ ಮಾಡಿತು ಎಂದುಕೊಳ್ಳಿ, ಆಗ ಹೊರಗೆ 10ಕೋಟಿಯೂ ನಷ್ಟವಾಯಿತು ಎಂದೇ ಪ್ರಚಾರವಾಗುತ್ತದೆ. ಅದಕ್ಕೇ ನಾನು 5 ಕೋಟಿ ಹಾಕಿ ಸಿನಿಮಾ ಮಾಡಿ ಎನ್ನುತ್ತೇನೆ, 5.5ಕೋಟಿ ಕಮಾಯಿ ಮಾಡಿದರೂ ಆ ನಿರ್ಮಾಪಕ ಸೇಫ್ ಆಗುತ್ತಾನೆ. ಹಾಗಾದಾಗ ಆತ ಇನ್ನೂ ಹೆಚ್ಚು ಚಿತ್ರ ನಿರ್ಮಾಣ ಮಾಡುತ್ತಾನೆ. ನಾನು ಯಾವತ್ತಿಗೂ ನಿರ್ಮಾಪಕರನ್ನು ಸೇಫ್ ಮಾಡಲು ಪ್ರಯತ್ನಿಸುತ್ತೇನೆ. ಇದನ್ನೆಲ್ಲಾ ಬಿಟ್ಟು ಅಪಪ್ರಚಾರ ಮಾಡಿ ನನ್ನ ತಟ್ಟೆಯಲ್ಲಿರುವ ಅನ್ನವನ್ನು ಏಕೆ ಕಸಿಯುತ್ತೀರಿ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ವರದ ಚಿತ್ರದಲ್ಲಿ ತಂದೆ- ಮಗನ ಬಾಂಧವ್ಯದ ಕುರಿತು ಕತೆಯಿದೆ. ಸದ್ಯದಲ್ಲೇ ಚಿತ್ರದ ಟೀಸರ್, ಟ್ರೇಲರ್ ಬಿಡುಗಡೆಯಾಗಲಿದೆ. ಆಗ ಚಿತ್ರದ ಕುರಿತು ಇನ್ನಷ್ಟು ಮಾಹಿತಿ ಹಂಚಿಕೊಳ್ಳುವುದಾಗಿ ಅವರು ತಿಳಿಸಿದರು. ವರದ ಚಿತ್ರದಲ್ಲಿ ವಿನೋದ್ ಪ್ರಭಾಕರ್ ತಂದೆಯ ಪಾತ್ರದಲ್ಲಿ ಖ್ಯಾತ ನಟ ಚರಣ್ ರಾಜ್ ನಟಿಸಿದ್ದಾರೆ. ನಾಯಕಿಯಾಗಿ ಅಮಿತಾ ನಟಿಸಿದ್ದಾರೆ. ಚಿತ್ರಕ್ಕೆ ಪ್ರದೀಪ್ ವರ್ಮ ಸಂಗೀತ ನೀಡಿದ್ದು, ಜೈ ಆನಂದ್ ಛಾಯಾಗ್ರಹಣ ಮಾಡಿದ್ದಾರೆ. ಚಿತ್ರವು ಬಿಡುಗಡೆಗೆ ತಯಾರಾಗುತ್ತಿದೆ ಎಂದು ಚಿತ್ರ ತಂಡವು ತಿಳಿಸಿದೆ.

ವರದ ಚಿತ್ರದ ಮೋಷನ್ ಪೋಸ್ಟರ್ ಇಲ್ಲಿದೆ:

ಇದನ್ನೂ ಓದಿ: ಮತ್ತೆ ಒಂದಾಗಿ ನಾಗಚೈತನ್ಯ ಜೊತೆ ಸೆಲ್ಫಿಗೆ ಭರ್ಜರಿ ಪೋಸ್ ನೀಡಿದ ಆಮೀರ್ ಖಾನ್, ಕಿರಣ್ ರಾವ್: ಸಂತಸಕ್ಕೆ ಕಾರಣ ಗೊತ್ತಾ?

ಇದನ್ನೂ ಓದಿ: IPL 2022 ರಲ್ಲಿ ಧೋನಿ ಆಡದಿದ್ರೆ ನಾನೂ ಕಣಕ್ಕಿಳಿಯಲ್ಲ ಎಂದ CSKಯ ಸ್ಟಾರ್ ಆಟಗಾರ

(Sandalwood actor Vinod Prabhakar requests to not spread any rumours regarding his payments)

Published On - 2:33 pm, Sat, 10 July 21

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು