AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vinod Prabhakar: ‘ನನ್ನ ಮಾರ್ಕೆಟ್ ನನಗೆ ಗೊತ್ತಿದೆ’ ಅಂತ ವಿನೋದ್ ಪ್ರಭಾಕರ್ ಹೇಳಿದ್ದೇಕೆ?

ಒಂದು ಚಿತ್ರದ ಯಶಸ್ಸು ಹಲವು ಅಪಪ್ರಚಾರಕ್ಕೆ ಗುರಿ ಮಾಡುತ್ತದೆ ಎಂಬುದನ್ನು ಸ್ಯಾಂಡಲ್​ವುಡ್​ನ ಪ್ರತಿಭಾವಂತ ಯುವ ನಟ ವಿನೋದ್ ಪ್ರಭಾಕರ್ ಮನಗಂಡಿದ್ದಾರೆ. ಆ ಕುರಿತು ಪ್ರತಿಕ್ರಿಯಿಸಿರುವ ಅವರು ಹಲವು ವಿಚಾರಗಳನ್ನು ತೆರೆದಿಟ್ಟಿದ್ದಾರೆ.

Vinod Prabhakar: 'ನನ್ನ ಮಾರ್ಕೆಟ್ ನನಗೆ ಗೊತ್ತಿದೆ' ಅಂತ ವಿನೋದ್ ಪ್ರಭಾಕರ್ ಹೇಳಿದ್ದೇಕೆ?
ರಾಬರ್ಟ್ ಚಿತ್ರದ ರಾಘವ ಪಾತ್ರದಲ್ಲಿ ವಿನೋದ್ ಪ್ರಭಾಕರ್ (ಎಡ), ವಿನೋದ್ ಪ್ರಭಾಕರ್ (ಬಲ)
Follow us
TV9 Web
| Updated By: shivaprasad.hs

Updated on:Jul 10, 2021 | 2:46 PM

‘ರಾಬರ್ಟ್’ ಚಿತ್ರದಲ್ಲಿ ದರ್ಶನ್ ಜೊತೆ ತೆರೆ ಮೇಲೆ ಕಾಣಿಸಿಕೊಂಡು ಎಲ್ಲರಿಂದ ಮೆಚ್ಚುಗೆ ಪಡೆದಿದ್ದ ವಿನೋದ್ ಪ್ರಭಾಕರ್ (Vinod Prabhakar) ಅವರು, ತಮ್ಮ ಕುರಿತು ಎದ್ದಿರುವ ಅಪಪ್ರಚಾರಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಅವರ ಹೊಸ ಚಿತ್ರ ‘ವರದ’ದ ಮೋಷನ್ ಪೋಸ್ಟರ್ ಬಿಡುಗಡೆಯ ಸಂದರ್ಭದಲ್ಲಿ ಮಾತನಾಡಿದ ಅವರು, ‘ನನ್ನ ಸಂಭಾವನೆ ಏರಿಕೆಯಾಗಿದೆ, ಕೋಟಿ ಡಿಮ್ಯಾಂಡ್ ಮಾಡುತ್ತಾ ಇದ್ದಾರೆ’ ಎಂದೆಲ್ಲಾ ಅಪಪ್ರಚಾರ ಮಾಡುತ್ತಿದ್ದಾರೆ. ನನ್ನ ಮಾರ್ಕೆಟ್ ನನಗೆ ಗೊತ್ತದೆ. ನಾನು ಡಿಮ್ಯಾಂಡ್ ಮಾಡುವುದು ಒಳ್ಳೆಯ ಕತೆ ಹಾಗೂ ಒಳ್ಳೆಯ ಪಾತ್ರಕ್ಕೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ನಿರ್ಮಾಪಕರಿಗೆ ಹೆಚ್ಚು ಬಜೆಟ್ ಹಾಕಬೇಡಿ ಎಂದು ಹೇಳುವವನು ನಾನು. ಉದಾಹರಣೆಗೆ, ಹತ್ತು ಕೋಟಿ ಹಾಕಿ ಮಾಡಿದ ಚಿತ್ರ 5.5ಕೋಟಿ ಗಳಿಕೆ ಮಾಡಿತು ಎಂದುಕೊಳ್ಳಿ, ಆಗ ಹೊರಗೆ 10ಕೋಟಿಯೂ ನಷ್ಟವಾಯಿತು ಎಂದೇ ಪ್ರಚಾರವಾಗುತ್ತದೆ. ಅದಕ್ಕೇ ನಾನು 5 ಕೋಟಿ ಹಾಕಿ ಸಿನಿಮಾ ಮಾಡಿ ಎನ್ನುತ್ತೇನೆ, 5.5ಕೋಟಿ ಕಮಾಯಿ ಮಾಡಿದರೂ ಆ ನಿರ್ಮಾಪಕ ಸೇಫ್ ಆಗುತ್ತಾನೆ. ಹಾಗಾದಾಗ ಆತ ಇನ್ನೂ ಹೆಚ್ಚು ಚಿತ್ರ ನಿರ್ಮಾಣ ಮಾಡುತ್ತಾನೆ. ನಾನು ಯಾವತ್ತಿಗೂ ನಿರ್ಮಾಪಕರನ್ನು ಸೇಫ್ ಮಾಡಲು ಪ್ರಯತ್ನಿಸುತ್ತೇನೆ. ಇದನ್ನೆಲ್ಲಾ ಬಿಟ್ಟು ಅಪಪ್ರಚಾರ ಮಾಡಿ ನನ್ನ ತಟ್ಟೆಯಲ್ಲಿರುವ ಅನ್ನವನ್ನು ಏಕೆ ಕಸಿಯುತ್ತೀರಿ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ವರದ ಚಿತ್ರದಲ್ಲಿ ತಂದೆ- ಮಗನ ಬಾಂಧವ್ಯದ ಕುರಿತು ಕತೆಯಿದೆ. ಸದ್ಯದಲ್ಲೇ ಚಿತ್ರದ ಟೀಸರ್, ಟ್ರೇಲರ್ ಬಿಡುಗಡೆಯಾಗಲಿದೆ. ಆಗ ಚಿತ್ರದ ಕುರಿತು ಇನ್ನಷ್ಟು ಮಾಹಿತಿ ಹಂಚಿಕೊಳ್ಳುವುದಾಗಿ ಅವರು ತಿಳಿಸಿದರು. ವರದ ಚಿತ್ರದಲ್ಲಿ ವಿನೋದ್ ಪ್ರಭಾಕರ್ ತಂದೆಯ ಪಾತ್ರದಲ್ಲಿ ಖ್ಯಾತ ನಟ ಚರಣ್ ರಾಜ್ ನಟಿಸಿದ್ದಾರೆ. ನಾಯಕಿಯಾಗಿ ಅಮಿತಾ ನಟಿಸಿದ್ದಾರೆ. ಚಿತ್ರಕ್ಕೆ ಪ್ರದೀಪ್ ವರ್ಮ ಸಂಗೀತ ನೀಡಿದ್ದು, ಜೈ ಆನಂದ್ ಛಾಯಾಗ್ರಹಣ ಮಾಡಿದ್ದಾರೆ. ಚಿತ್ರವು ಬಿಡುಗಡೆಗೆ ತಯಾರಾಗುತ್ತಿದೆ ಎಂದು ಚಿತ್ರ ತಂಡವು ತಿಳಿಸಿದೆ.

ವರದ ಚಿತ್ರದ ಮೋಷನ್ ಪೋಸ್ಟರ್ ಇಲ್ಲಿದೆ:

ಇದನ್ನೂ ಓದಿ: ಮತ್ತೆ ಒಂದಾಗಿ ನಾಗಚೈತನ್ಯ ಜೊತೆ ಸೆಲ್ಫಿಗೆ ಭರ್ಜರಿ ಪೋಸ್ ನೀಡಿದ ಆಮೀರ್ ಖಾನ್, ಕಿರಣ್ ರಾವ್: ಸಂತಸಕ್ಕೆ ಕಾರಣ ಗೊತ್ತಾ?

ಇದನ್ನೂ ಓದಿ: IPL 2022 ರಲ್ಲಿ ಧೋನಿ ಆಡದಿದ್ರೆ ನಾನೂ ಕಣಕ್ಕಿಳಿಯಲ್ಲ ಎಂದ CSKಯ ಸ್ಟಾರ್ ಆಟಗಾರ

(Sandalwood actor Vinod Prabhakar requests to not spread any rumours regarding his payments)

Published On - 2:33 pm, Sat, 10 July 21

ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು