AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಹಸಸಿಂಹನ ಅವಹೇಳನ: ತೆಲುಗು ನಟನ ವಿರುದ್ಧ ಗುಡುಗಿದ ಕನ್ನಡ ಚಿತ್ರತಾರೆಯರು

ಸಾಹಸಸಿಂಹ ವಿಷ್ಣುವರ್ಧನ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ತೆಲುಗು ಚಿತ್ರ ನಟ ವಿಜಯ್ ರಂಗರಾಜು ವಿರುದ್ಧ ಕನ್ನಡದ ಕಲಾವಿದರು ಹರಿಹಾಯ್ದಿದ್ದಾರೆ. ಕಿಚ್ಚ ಸುದೀಪ್, ಪುನೀತ್ ರಾಜ್​ಕುಮಾರ್, ನವರಸ ನಾಯಕ ಜಗ್ಗೇಶ್ ಸೇರಿದಂತೆ ಹಲವರು ಆಕ್ರೋಶ ಹೊರಹಾಕಿದ್ದಾರೆ.

ಸಾಹಸಸಿಂಹನ ಅವಹೇಳನ: ತೆಲುಗು ನಟನ ವಿರುದ್ಧ ಗುಡುಗಿದ ಕನ್ನಡ ಚಿತ್ರತಾರೆಯರು
ವಿಷ್ಣುವರ್ಧನ್, ರಂಗರಾಜು, ಪುನೀತ್ ರಾಜ್​ಕುಮಾರ್
guruganesh bhat
| Edited By: |

Updated on:Jan 30, 2021 | 4:35 PM

Share

ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ತೆಲುಗು ಚಿತ್ರ ನಟ ವಿಜಯ್ ರಂಗರಾಜು ವಿರುದ್ಧ ಕನ್ನಡದ ಕಲಾವಿದರು ಹರಿಹಾಯ್ದಿದ್ದಾರೆ. ಕಿಚ್ಚ ಸುದೀಪ್, ಪುನೀತ್ ರಾಜ್​ಕುಮಾರ್, ನವರಸ ನಾಯಕ ಜಗ್ಗೇಶ್ ಸೇರಿದಂತೆ ಹಲವರು ಆಕ್ರೋಶ ಹೊರಹಾಕಿದ್ದಾರೆ.

ಪವರ್ ಸ್ಟಾರ್​ ವಾರ್ನಿಂಗ್ ರಂಗರಾಜು ವಿರುದ್ಧ ಕಿಡಿಕಾರಿರುವ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ರಂಗರಾಜು ತಮ್ಮ ಮಾತುಗಳನ್ನು ಹಿಂಪಡೆಯಬೇಕು ಎಂದು ಟ್ವಿಟ್ಟರ್, ಫೇಸ್​ಬುಕ್​ಗಳಲ್ಲಿ ಹೇಳಿದ್ದಾರೆ. ಭಾರತೀಯ ಚಿತ್ರರಂಗದ ಎಲ್ಲಾ ಕಲಾವಿದರು ಒಂದು ಮನೆಯವರಿದ್ದಂತೆ. ಕಲಾವಿದರನ್ನು ಗೌರವಿಸುವುದು ನಮ್ಮ ಕರ್ತವ್ಯ ಎಂದು ಬರೆದುಕೊಂಡಿದ್ದಾರೆ. ಎಲ್ಲರೂ ಮೊದಲು ಮಾನವನಾಗಬೇಕು ಎಂದಿದ್ದಾರೆ. ಫೇಸ್​ಬುಕ್​ನಲ್ಲಿ ಅವರ ಪೋಸ್ಟ್ 21K ಲೈಕ್, 999 ಶೇರ್ ಕಂಡಿವೆ.

ಎಚ್ಚರಿಕೆ ನೀಡಿದ ಕಿಚ್ಚ ಸುದೀಪ್ ಫೇಸ್​ಬುಕ್​​ನಲ್ಲಿ ರಂಗರಾಜು ಅವರ ಹೇಳಿಕೆ ವಿರೋಧಿಸಿ ವಿಡಿಯೋ ಶೇರ್ ಮಾಡಿರುವ ಕಿಚ್ಚ ಸುದೀಪ್, ಕೋಟ್ಯಾಂತರ ಜನರ ಆರಾಧ್ಯ ದೈವದ ಕುರಿತು ಈ ರೀತಿ ಹೇಳಿಕೆ ನೀಡುವುದು ತಪ್ಪು. ತೆಲುಗು ಚಿತ್ರರಂಗದಲ್ಲೇ ರಂಗರಾಜು ಹೇಳಿಕೆಯನ್ನು ಯಾರೂ ಒಪ್ಪಲಾರರು ಎಂದು ಗುಡುಗಿದ್ದಾರೆ.

ಜಗ್ಗೇಶ್ ಕೆಂಡಾಮಂಡಲ ಕಾಲವಾದ ಸಾಧಕರ ಬಗ್ಗೆ ಕುಚೇಷ್ಟೆ ಮಾತಾಡುವ ಗುಣದವ ಎಲ್ಲಿಯೂ ಸಲ್ಲದವ!..ಎಂದು ಟೀಕಿಸಿರುವ ಅವರು ರಂಗರಾಜು ಅವರ ಉದ್ಧಟತನದ ಮಾತನ್ನು ಯಾರೂ ಕ್ಷಮಿಸಲಾರರು ಎಂದು ಬರೆದುಕೊಂಡಿದ್ದಾರೆ.

Published On - 12:42 pm, Sun, 13 December 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ