AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಹಸಸಿಂಹನ ಅವಹೇಳನ: ತೆಲುಗು ನಟನ ವಿರುದ್ಧ ಗುಡುಗಿದ ಕನ್ನಡ ಚಿತ್ರತಾರೆಯರು

ಸಾಹಸಸಿಂಹ ವಿಷ್ಣುವರ್ಧನ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ತೆಲುಗು ಚಿತ್ರ ನಟ ವಿಜಯ್ ರಂಗರಾಜು ವಿರುದ್ಧ ಕನ್ನಡದ ಕಲಾವಿದರು ಹರಿಹಾಯ್ದಿದ್ದಾರೆ. ಕಿಚ್ಚ ಸುದೀಪ್, ಪುನೀತ್ ರಾಜ್​ಕುಮಾರ್, ನವರಸ ನಾಯಕ ಜಗ್ಗೇಶ್ ಸೇರಿದಂತೆ ಹಲವರು ಆಕ್ರೋಶ ಹೊರಹಾಕಿದ್ದಾರೆ.

ಸಾಹಸಸಿಂಹನ ಅವಹೇಳನ: ತೆಲುಗು ನಟನ ವಿರುದ್ಧ ಗುಡುಗಿದ ಕನ್ನಡ ಚಿತ್ರತಾರೆಯರು
ವಿಷ್ಣುವರ್ಧನ್, ರಂಗರಾಜು, ಪುನೀತ್ ರಾಜ್​ಕುಮಾರ್
guruganesh bhat
| Edited By: |

Updated on:Jan 30, 2021 | 4:35 PM

Share

ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ತೆಲುಗು ಚಿತ್ರ ನಟ ವಿಜಯ್ ರಂಗರಾಜು ವಿರುದ್ಧ ಕನ್ನಡದ ಕಲಾವಿದರು ಹರಿಹಾಯ್ದಿದ್ದಾರೆ. ಕಿಚ್ಚ ಸುದೀಪ್, ಪುನೀತ್ ರಾಜ್​ಕುಮಾರ್, ನವರಸ ನಾಯಕ ಜಗ್ಗೇಶ್ ಸೇರಿದಂತೆ ಹಲವರು ಆಕ್ರೋಶ ಹೊರಹಾಕಿದ್ದಾರೆ.

ಪವರ್ ಸ್ಟಾರ್​ ವಾರ್ನಿಂಗ್ ರಂಗರಾಜು ವಿರುದ್ಧ ಕಿಡಿಕಾರಿರುವ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ರಂಗರಾಜು ತಮ್ಮ ಮಾತುಗಳನ್ನು ಹಿಂಪಡೆಯಬೇಕು ಎಂದು ಟ್ವಿಟ್ಟರ್, ಫೇಸ್​ಬುಕ್​ಗಳಲ್ಲಿ ಹೇಳಿದ್ದಾರೆ. ಭಾರತೀಯ ಚಿತ್ರರಂಗದ ಎಲ್ಲಾ ಕಲಾವಿದರು ಒಂದು ಮನೆಯವರಿದ್ದಂತೆ. ಕಲಾವಿದರನ್ನು ಗೌರವಿಸುವುದು ನಮ್ಮ ಕರ್ತವ್ಯ ಎಂದು ಬರೆದುಕೊಂಡಿದ್ದಾರೆ. ಎಲ್ಲರೂ ಮೊದಲು ಮಾನವನಾಗಬೇಕು ಎಂದಿದ್ದಾರೆ. ಫೇಸ್​ಬುಕ್​ನಲ್ಲಿ ಅವರ ಪೋಸ್ಟ್ 21K ಲೈಕ್, 999 ಶೇರ್ ಕಂಡಿವೆ.

ಎಚ್ಚರಿಕೆ ನೀಡಿದ ಕಿಚ್ಚ ಸುದೀಪ್ ಫೇಸ್​ಬುಕ್​​ನಲ್ಲಿ ರಂಗರಾಜು ಅವರ ಹೇಳಿಕೆ ವಿರೋಧಿಸಿ ವಿಡಿಯೋ ಶೇರ್ ಮಾಡಿರುವ ಕಿಚ್ಚ ಸುದೀಪ್, ಕೋಟ್ಯಾಂತರ ಜನರ ಆರಾಧ್ಯ ದೈವದ ಕುರಿತು ಈ ರೀತಿ ಹೇಳಿಕೆ ನೀಡುವುದು ತಪ್ಪು. ತೆಲುಗು ಚಿತ್ರರಂಗದಲ್ಲೇ ರಂಗರಾಜು ಹೇಳಿಕೆಯನ್ನು ಯಾರೂ ಒಪ್ಪಲಾರರು ಎಂದು ಗುಡುಗಿದ್ದಾರೆ.

ಜಗ್ಗೇಶ್ ಕೆಂಡಾಮಂಡಲ ಕಾಲವಾದ ಸಾಧಕರ ಬಗ್ಗೆ ಕುಚೇಷ್ಟೆ ಮಾತಾಡುವ ಗುಣದವ ಎಲ್ಲಿಯೂ ಸಲ್ಲದವ!..ಎಂದು ಟೀಕಿಸಿರುವ ಅವರು ರಂಗರಾಜು ಅವರ ಉದ್ಧಟತನದ ಮಾತನ್ನು ಯಾರೂ ಕ್ಷಮಿಸಲಾರರು ಎಂದು ಬರೆದುಕೊಂಡಿದ್ದಾರೆ.

Published On - 12:42 pm, Sun, 13 December 20

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ