AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amulya: ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ಅಮೂಲ್ಯ; ಸಂತಸ ಹಂಚಿಕೊಂಡ ನಟಿಯ ಪತಿ ಜಗದೀಶ್

Amulya blessed with twin babies: ಸ್ಯಾಂಡಲ್​ವುಡ್ ನಟಿ ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಈ ಕುರಿತು ಅವರ ಪತಿ ಜಗದೀಶ್ ಆರ್ ಚಂದ್ರ ಮಾಹಿತಿ ನೀಡಿದ್ದಾರೆ.

Amulya: ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ಅಮೂಲ್ಯ; ಸಂತಸ ಹಂಚಿಕೊಂಡ ನಟಿಯ ಪತಿ ಜಗದೀಶ್
ಅಮೂಲ್ಯ, ಜಗದೀಶ್
TV9 Web
| Edited By: |

Updated on:Mar 01, 2022 | 2:33 PM

Share

ಸ್ಯಾಂಡಲ್​ವುಡ್ ನಟಿ ಅಮೂಲ್ಯ (Amulya) ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಕ್ಕಳು ಹಾಗೂ ತಾಯಿ ಆರೋಗ್ಯವಾಗಿದ್ದಾರೆ ಎಂದು ಅಮೂಲ್ಯ ಅವರ ಪತಿ ಜಗದೀಶ್ ಆರ್ ಚಂದ್ರ (Jagdish R Chandra) ಮಾಹಿತಿ ನೀಡಿದ್ದಾರೆ. ಫೇಸ್​ಬುಕ್​ನಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ‘ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಕ್ಕಳು ಆರೋಗ್ಯವಾಗಿದ್ದಾರೆ. ಈ ಪಯಣದಲ್ಲಿ ಜತೆ ನಿಂತು ಹಾರೈಸಿದ ಎಲ್ಲರಿಗೆ ಧನ್ಯವಾದಗಳು’ ಎಂದಿದ್ದಾರೆ. ಅಮೂಲ್ಯ ಅವರು ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ 11.45ಕ್ಕೆ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಸ್ಯಾಂಡಲ್​ವುಡ್ ನಟಿಯರಾದ ರಮ್ಯಾ, ಆಶಿಕಾ ರಂಗನಾಥ್, ಅದ್ವಿತಿ ಶೆಟ್ಟಿ, ಹರ್ಷಿಕಾ ಪೂಣಚ್ಚ, ಸೋನು ಗೌಡ ಮೊದಲಾದವರು ದಂಪತಿಗೆ ಶುಭಾಶಯ ಹೇಳಿದ್ದಾರೆ. ಅಭಿಮಾನಿಗಳು ಕೂಡ ನೆಚ್ಚಿನ ನಟಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಜಗದೀಶ್ ಆರ್ ಚಂದ್ರ ಹಂಚಿಕೊಂಡ ಮಾಹಿತಿ:

ಅಮೂಲ್ಯ ಬಾಲನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟವರು. ‘ಚೆಲುವಿನ ಚಿತ್ತಾರ’ದ ಮೂಲಕ ನಾಯಕಿಯಾದ ಅವರು, ಅದರಲ್ಲಿನ ಪಾತ್ರ ಪೋಷಣೆಗೆ ಅಪಾರ ಜನಪ್ರಿಯತೆ ಗಳಿಸಿದರು. ಸಣ್ಣ ವಯಸ್ಸಿನಲ್ಲಿಯೇ ಖ್ಯಾತ ತಾರೆಯರೊಂದಿಗೆ ತೆರೆ ಹಂಚಿಕೊಂಡ ಕೀರ್ತಿ ಅವರದ್ದು. ಗಣೇಶ್​, ಯಶ್​, ಲವ್ಲೀ ಸ್ಟಾರ್​ ಪ್ರೇಮ್​, ಕೃಷ್ಣ ಅಜಯ್​ ರಾವ್​, ದುನಿಯಾ ವಿಜಯ್​ ಮುಂತಾದ ಸ್ಟಾರ್​ ಕಲಾವಿದರಿಗೆ ಅವರು ಜೋಡಿಯಾಗಿ ನಟಿಸಿದರು. ‘ನಾನು ನನ್ನ ಕನಸು’ ಸಿನಿಮಾದಲ್ಲಿ ಬಹುಭಾಷಾ ಕಲಾವಿದ ಪ್ರಕಾಶ್​ ರೈ ಜತೆ ತೆರೆಹಂಚಿಕೊಂಡು ಅಪಾರ ಮೆಚ್ಚುಗೆ ಗಳಿಸಿದರು.

ಚಿತ್ರರಂಗದಲ್ಲಿ ​ಬೇಡಿಕೆ ಇರುವ ನಟಿಯಾಗಿ ಗುರುತಿಸಿಕೊಂಡಿದ್ದ ಅಮೂಲ್ಯ, 2017ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ರಾಜಕೀಯ ಹಿನ್ನೆಲೆಯ ಕುಟುಂಬದವರಾದ ಜಗದೀಶ್​ ಜತೆ ಅಮೂಲ್ಯ ಮದುವೆ 2017ರಲ್ಲಿ ನೆರವೇರಿತು. ‘ನಾವೀಗ ಕೇವಲ ಇಬ್ಬರಲ್ಲ’ ಎಂಬ ಕ್ಯಾಪ್ಷನ್​ ಮೂಲಕ ಅಮೂಲ್ಯ ಕೆಲ ಸಮಯದ ಹಿಂದೆ ತಾಯಿಯಾಗುತ್ತಿರುವುದನ್ನು ಘೋಷಿಸಿದ್ದರು.

2017ರ ಬಳಿಕ ಅಮೂಲ್ಯ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಅವರು ಪೂರ್ಣ ಪ್ರಮಾಣದಲ್ಲಿ ಹೀರೋಯಿನ್​ ಆಗಿ ನಟಿಸಿದ ಕೊನೇ ಸಿನಿಮಾ ‘ಮಾಸ್ತಿಗುಡಿ’. 2017ರಲ್ಲಿ ತೆರೆಕಂಡ ‘ಮುಗುಳು ನಗೆ’ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದ್ದರು. ಪ್ರಸ್ತುತ ಅಮೂಲ್ಯ ಹಾಗೂ ಜಗದೀಶ್ ಪೋಷಕರಾಗಿದ್ದು, ಅಭಿಮಾನಿಗಳು ಶುಭಾಶಯ ಹೇಳುತ್ತಿದ್ದಾರೆ.

ಇದನ್ನೂ ಓದಿ:

ಕೆರೆ ದಂಡೆಯ ಉಯ್ಯಾಲೆ ಮೇಲೆ ಅಮೂಲ್ಯ ಬೇಬಿಬಂಪ್ ಫೋಟೋಶೂಟ್; ಇಲ್ಲಿವೆ ಫೋಟೋಗಳು

ಅಮೂಲ್ಯಗೆ ಬೇಬಿ ಶವರ್; ರಾಧಿಕಾ ಪಂಡಿತ್, ಗಣೇಶ್ ಸೇರಿ ಹಲವರು ಭಾಗಿ, ಇಲ್ಲಿವೆ ಫೋಟೋಗಳು

Published On - 12:26 pm, Tue, 1 March 22

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!