AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amulya: ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ಅಮೂಲ್ಯ; ಸಂತಸ ಹಂಚಿಕೊಂಡ ನಟಿಯ ಪತಿ ಜಗದೀಶ್

Amulya blessed with twin babies: ಸ್ಯಾಂಡಲ್​ವುಡ್ ನಟಿ ಅಮೂಲ್ಯ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಈ ಕುರಿತು ಅವರ ಪತಿ ಜಗದೀಶ್ ಆರ್ ಚಂದ್ರ ಮಾಹಿತಿ ನೀಡಿದ್ದಾರೆ.

Amulya: ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ಅಮೂಲ್ಯ; ಸಂತಸ ಹಂಚಿಕೊಂಡ ನಟಿಯ ಪತಿ ಜಗದೀಶ್
ಅಮೂಲ್ಯ, ಜಗದೀಶ್
TV9 Web
| Edited By: |

Updated on:Mar 01, 2022 | 2:33 PM

Share

ಸ್ಯಾಂಡಲ್​ವುಡ್ ನಟಿ ಅಮೂಲ್ಯ (Amulya) ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಕ್ಕಳು ಹಾಗೂ ತಾಯಿ ಆರೋಗ್ಯವಾಗಿದ್ದಾರೆ ಎಂದು ಅಮೂಲ್ಯ ಅವರ ಪತಿ ಜಗದೀಶ್ ಆರ್ ಚಂದ್ರ (Jagdish R Chandra) ಮಾಹಿತಿ ನೀಡಿದ್ದಾರೆ. ಫೇಸ್​ಬುಕ್​ನಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ‘ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಕ್ಕಳು ಆರೋಗ್ಯವಾಗಿದ್ದಾರೆ. ಈ ಪಯಣದಲ್ಲಿ ಜತೆ ನಿಂತು ಹಾರೈಸಿದ ಎಲ್ಲರಿಗೆ ಧನ್ಯವಾದಗಳು’ ಎಂದಿದ್ದಾರೆ. ಅಮೂಲ್ಯ ಅವರು ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ 11.45ಕ್ಕೆ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಸ್ಯಾಂಡಲ್​ವುಡ್ ನಟಿಯರಾದ ರಮ್ಯಾ, ಆಶಿಕಾ ರಂಗನಾಥ್, ಅದ್ವಿತಿ ಶೆಟ್ಟಿ, ಹರ್ಷಿಕಾ ಪೂಣಚ್ಚ, ಸೋನು ಗೌಡ ಮೊದಲಾದವರು ದಂಪತಿಗೆ ಶುಭಾಶಯ ಹೇಳಿದ್ದಾರೆ. ಅಭಿಮಾನಿಗಳು ಕೂಡ ನೆಚ್ಚಿನ ನಟಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಜಗದೀಶ್ ಆರ್ ಚಂದ್ರ ಹಂಚಿಕೊಂಡ ಮಾಹಿತಿ:

ಅಮೂಲ್ಯ ಬಾಲನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟವರು. ‘ಚೆಲುವಿನ ಚಿತ್ತಾರ’ದ ಮೂಲಕ ನಾಯಕಿಯಾದ ಅವರು, ಅದರಲ್ಲಿನ ಪಾತ್ರ ಪೋಷಣೆಗೆ ಅಪಾರ ಜನಪ್ರಿಯತೆ ಗಳಿಸಿದರು. ಸಣ್ಣ ವಯಸ್ಸಿನಲ್ಲಿಯೇ ಖ್ಯಾತ ತಾರೆಯರೊಂದಿಗೆ ತೆರೆ ಹಂಚಿಕೊಂಡ ಕೀರ್ತಿ ಅವರದ್ದು. ಗಣೇಶ್​, ಯಶ್​, ಲವ್ಲೀ ಸ್ಟಾರ್​ ಪ್ರೇಮ್​, ಕೃಷ್ಣ ಅಜಯ್​ ರಾವ್​, ದುನಿಯಾ ವಿಜಯ್​ ಮುಂತಾದ ಸ್ಟಾರ್​ ಕಲಾವಿದರಿಗೆ ಅವರು ಜೋಡಿಯಾಗಿ ನಟಿಸಿದರು. ‘ನಾನು ನನ್ನ ಕನಸು’ ಸಿನಿಮಾದಲ್ಲಿ ಬಹುಭಾಷಾ ಕಲಾವಿದ ಪ್ರಕಾಶ್​ ರೈ ಜತೆ ತೆರೆಹಂಚಿಕೊಂಡು ಅಪಾರ ಮೆಚ್ಚುಗೆ ಗಳಿಸಿದರು.

ಚಿತ್ರರಂಗದಲ್ಲಿ ​ಬೇಡಿಕೆ ಇರುವ ನಟಿಯಾಗಿ ಗುರುತಿಸಿಕೊಂಡಿದ್ದ ಅಮೂಲ್ಯ, 2017ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ರಾಜಕೀಯ ಹಿನ್ನೆಲೆಯ ಕುಟುಂಬದವರಾದ ಜಗದೀಶ್​ ಜತೆ ಅಮೂಲ್ಯ ಮದುವೆ 2017ರಲ್ಲಿ ನೆರವೇರಿತು. ‘ನಾವೀಗ ಕೇವಲ ಇಬ್ಬರಲ್ಲ’ ಎಂಬ ಕ್ಯಾಪ್ಷನ್​ ಮೂಲಕ ಅಮೂಲ್ಯ ಕೆಲ ಸಮಯದ ಹಿಂದೆ ತಾಯಿಯಾಗುತ್ತಿರುವುದನ್ನು ಘೋಷಿಸಿದ್ದರು.

2017ರ ಬಳಿಕ ಅಮೂಲ್ಯ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಅವರು ಪೂರ್ಣ ಪ್ರಮಾಣದಲ್ಲಿ ಹೀರೋಯಿನ್​ ಆಗಿ ನಟಿಸಿದ ಕೊನೇ ಸಿನಿಮಾ ‘ಮಾಸ್ತಿಗುಡಿ’. 2017ರಲ್ಲಿ ತೆರೆಕಂಡ ‘ಮುಗುಳು ನಗೆ’ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದ್ದರು. ಪ್ರಸ್ತುತ ಅಮೂಲ್ಯ ಹಾಗೂ ಜಗದೀಶ್ ಪೋಷಕರಾಗಿದ್ದು, ಅಭಿಮಾನಿಗಳು ಶುಭಾಶಯ ಹೇಳುತ್ತಿದ್ದಾರೆ.

ಇದನ್ನೂ ಓದಿ:

ಕೆರೆ ದಂಡೆಯ ಉಯ್ಯಾಲೆ ಮೇಲೆ ಅಮೂಲ್ಯ ಬೇಬಿಬಂಪ್ ಫೋಟೋಶೂಟ್; ಇಲ್ಲಿವೆ ಫೋಟೋಗಳು

ಅಮೂಲ್ಯಗೆ ಬೇಬಿ ಶವರ್; ರಾಧಿಕಾ ಪಂಡಿತ್, ಗಣೇಶ್ ಸೇರಿ ಹಲವರು ಭಾಗಿ, ಇಲ್ಲಿವೆ ಫೋಟೋಗಳು

Published On - 12:26 pm, Tue, 1 March 22

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ