AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ನಿರ್ವಹಣೆಯ ಅವ್ಯವಸ್ಥೆ ಬಗ್ಗೆ ನಟಿ ಅನು ಪ್ರಭಾಕರ್ ತೀವ್ರ ಬೇಸರ; ಸಾಮಾನ್ಯರ ಗತಿ ಏನು?

ಏ.17ರಂದು ಅನು ಪ್ರಭಾಕರ್​ ಅವರಿಗೆ ಕೊವಿಡ್ ಪಾಸಿಟಿವ್ ಆಗಿತ್ತು. ಇಷ್ಟು ದಿನ ಕಳೆದರೂ ಬಿಬಿಎಂಪಿ ಕಡೆಯಿಂದ ಸೂಕ್ತ ಪ್ರತಿಕ್ರಿಯೆ ಬಾರದ ಕಾರಣ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಕೊವಿಡ್ ನಿರ್ವಹಣೆಯ ಅವ್ಯವಸ್ಥೆ ಬಗ್ಗೆ ನಟಿ ಅನು ಪ್ರಭಾಕರ್ ತೀವ್ರ ಬೇಸರ; ಸಾಮಾನ್ಯರ ಗತಿ ಏನು?
ಟ್ವಿಟರ್​ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ ನಟಿ ಅನು ಪ್ರಭಾಕರ್​
ಮದನ್​ ಕುಮಾರ್​
|

Updated on: Apr 22, 2021 | 10:55 AM

Share

ಎಲ್ಲರನ್ನೂ ಕಾಡುತ್ತಿರುವ ಕೊರೊನಾ ವೈರಸ್​ಗೆ ಬಡವರು-ಶ್ರೀಮಂತರೆಂಬ ಭೇದ ಇಲ್ಲ. ಸೆಲೆಬ್ರಿಟಿಗಳಿಗೂ ಇದರ ಹಾವಳಿ ತಪ್ಪಿದ್ದಿಲ್ಲ. ಈ ನಡುವೆ ಅನೇಕ ಸೆಲೆಬ್ರಿಟಿಗಳಿಗೆ ಈ ಮಾಹಾಮಾರಿಯ ಸೋಂಕು ತಗುಲಿದೆ. ಕೊವಿಡ್​-19 ನಿರ್ವಹಣೆ ಮಾಡುವಲ್ಲಿ ಸರ್ಕಾರ ವಿಫಲ ಆಗುತ್ತಿರುವುದಕ್ಕೆ ಅನೇಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಇದರ ಬಗ್ಗೆ ಕೆಲವು ಸೆಲೆಬ್ರಿಟಿಗಳು ಧ್ವನಿ ಎತ್ತುತ್ತಿದ್ದಾರೆ. ಇತ್ತೀಚೆಗೆ ಕೊವಿಡ್​ ಪಾಸಿಟಿವ್​ ಆಗಿರುವ ನಟಿ ಅನು ಪ್ರಭಾಕರ್​ ಕೂಡ ಈ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

ಏ.17ರಂದು ಅನು ಪ್ರಭಾಕರ್​ ಅವರಿಗೆ ಕೊವಿಡ್ ಪಾಸಿಟಿವ್ ಆಗಿತ್ತು. ಇಷ್ಟು ದಿನ ಕಳೆದರೂ ಬಿಬಿಎಂಪಿ ಕಡೆಯಿಂದ ಸೂಕ್ತ ಪ್ರತಿಕ್ರಿಯೆ ಬಾರದ ಕಾರಣ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅವರು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ. ‘ನನಗೆ ಕೊರೊನಾ ಸೋಂಕು ದೃಢವಾಗಿ 6 ದಿನ ಆಗಿದೆ. 6 ದಿನದಿಂದ ನಾನು ಮನೆಯಲ್ಲೇ ಐಸೋಲೇಟ್​ ಆಗಿದ್ದೇನೆ. ಆದರೂ ಈವರೆಗೆ ಬಿಬಿಎಂಪಿಯಿಂದ ಫೋನ್ ಬಂದಿಲ್ಲ. ಕೊವಿಡ್ ರಿಪೋರ್ಟ್ ವೆಬ್‌ಸೈಟ್‌ನಲ್ಲಿ ಅಪ್ಡೇಟ್ ಆಗಿಲ್ಲ. ನನಗೆ ಇನ್ನೂ BU ನಂಬರ್ ಸಿಕ್ಕಿಲ್ಲ. ಇದನ್ನು ಆರೋಗ್ಯ ಸಚಿವ ಸುಧಾಕರ್​ ಅವರ ಗಮನಕ್ಕೆ ತರಲು ಬಯಸುತ್ತೇನೆ ’ ಎಂದು ಅನು ಪ್ರಭಾಕರ್ ಬೇಸರ ವ್ಯಕ್ತಪಡಿಸಿದ್ದಾರೆ.

ಇಂಥ ಪರಿಸ್ಥಿತಿಯಲ್ಲಿ ಗಟ್ಟಿಯಾಗಿ ಇರಬೇಕು ಎಂದು ಅನೇಕರು ಕಮೆಂಟ್​ ಮೂಲಕ ನಟಿಗೆ ಧೈರ್ಯ ತುಂಬುತ್ತಿದ್ದಾರೆ. ಮನೆಯಲ್ಲಿ ಮಾಡಿಕೊಳ್ಳಬಹುದಾದ ಔಷಧಿಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಅದೇನೇ ಇರಲಿ, ಕೊವಿಡ್​ ನಿರ್ವಹಣೆಯಲ್ಲಿ ಸರ್ಕಾರ ಎಡವುತ್ತಿರುವುದಕ್ಕೆ ಅನೇಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಇತ್ತೀಚೆಗಷ್ಟೇ ಖ್ಯಾತ ನಿರ್ದೇಶಕ ಗುರುಪ್ರಸಾದ್​ ಅವರು ಫೇಸ್​ಬುಕ್​ ಲೈವ್​ ಮೂಲಕ ಸರ್ಕಾರದ ವಿರುದ್ಧ ಗುಡುಗಿದ್ದರು. ಸೆಲೆಬ್ರಿಟಿಗಳಿಗೇ ಈ ರೀತಿ ಆದರೆ ಇನ್ನು ಜನಸಾಮಾನ್ಯರ ಗತಿ ಏನು ಎಂಬ ಪ್ರಶ್ನೆ ಮೂಡಿದೆ.

ಚಿತ್ರರಂಗದ ಅನೇಕರಿಗೆ ಕೊರೊನಾ ಕಾಟ ಕೊಡುತ್ತಿದೆ. ಅಕ್ಷಯ್​ ಕುಮಾರ್​, ಪವನ್​ ಕಲ್ಯಾಣ್​, ಸೋನು ಸೂದ್​, ನಿಖಿಲ್​ ಕುಮಾರಸ್ವಾಮಿ, ಪ್ರಜ್ವಲ್​ ದೇವರಾಜ್​, ರಾಗಿಣಿ ಪ್ರಜ್ವಲ್​, ಸಂಜನಾ ಗಲ್ರಾನಿ ಮಂತಾದವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಸ್ಯಾಂಡಲ್​ವುಡ್​ನ ಯುವ ನಟ-ನಿರ್ಮಾಪಕ ಡಾ. ಡಿ.ಎಸ್​. ಮಂಜುನಾಥ್​ ನಿಧನರಾದರು. ಹಲವು ವರ್ಷಗಳ ಕಾಲ ಪೋಸ್ಟರ್​ ಡಿಸೈರ್​ ಆಗಿ ಕೆಲಸ ಮಾಡಿದ್ದ ಮಸ್ತಾನ್​ ಅವರು ಏ.20ರಂದು ಇಹಲೋಕ ತ್ಯಜಿಸಿರುವುದು ಬೇಸರದ ಸಂಗತಿ. ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.

ಇದನ್ನೂ ಓದಿ: ಚಿರಂಜೀವಿ ಕ್ಯಾರವಾನ್ ಚಾಲಕ ಕೊರೊನಾದಿಂದ ನಿಧನ; ಮೆಗಾಸ್ಟಾರ್ ಅಭಿಮಾನಿಗಳಲ್ಲಿ ಆತಂಕ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ