AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಿಗರಿಗೆ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಜಾಗವಿಲ್ಲ ಯಾಕೆ? ಹರಿಪ್ರಿಯಾ ಕಿಡಿಕಿಡಿ

ಕನ್ನಡದ ಬೆಡಗಿ ಹರಿಪ್ರಿಯಾ ಸರಿಯಾದ ಪ್ರಶ್ನೆಯನ್ನೇ ಎತ್ತಿದ್ದಾರೆ. ಲಂಡನ್​ನ ಪ್ರತಿಷ್ಠಿತ ಮೇಡಂ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಮೇಣದ ಪ್ರತಿಮೆಗಳನ್ನುನಿರ್ಮಿಸುವುದರ ವಿರುದ್ಧ ನಟಿ ಹರಿಪ್ರಿಯಾ ಗರಂ ಆಗಿದ್ದಾರೆ. ಅಲ್ಲಾ ನಮ್ಮ ಕನ್ನಡಿಗರ ಸಾಧನೆಗೇನು ಕಡಿಮೆ? ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ದಿಗ್ಗಜರಿದ್ದಾರೆ. ಯಾರಿಗೂ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಗೌರವ ಸಂದಿಲ್ಲ. ಡಾ. ರಾಜ್​ಕುಮಾರ್, ಡಾ. ವಿಷ್ಣು ವರ್ಧನ್, ಡಾ. ಅಂಬರೀಶ್, ಶಂಕರ್ ನಾಗ್, ಪಂಡರೀ ಬಾಯಿ, ಜಯಂತಿ, ಬಿ ಸರೋಜಾ ದೇವಿ ಹೀಗೆ ದೊಡ್ಡ ಲಿಸ್ಟ್ ಇದೆ. ಆದ್ರೆ ಯಾವೊಬ್ಬ ಕನ್ನಡಿಗನ ಮೇಣದ […]

ಕನ್ನಡಿಗರಿಗೆ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಜಾಗವಿಲ್ಲ ಯಾಕೆ? ಹರಿಪ್ರಿಯಾ ಕಿಡಿಕಿಡಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 05, 2020 | 5:33 PM

Share

ಕನ್ನಡದ ಬೆಡಗಿ ಹರಿಪ್ರಿಯಾ ಸರಿಯಾದ ಪ್ರಶ್ನೆಯನ್ನೇ ಎತ್ತಿದ್ದಾರೆ. ಲಂಡನ್​ನ ಪ್ರತಿಷ್ಠಿತ ಮೇಡಂ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಮೇಣದ ಪ್ರತಿಮೆಗಳನ್ನುನಿರ್ಮಿಸುವುದರ ವಿರುದ್ಧ ನಟಿ ಹರಿಪ್ರಿಯಾ ಗರಂ ಆಗಿದ್ದಾರೆ. ಅಲ್ಲಾ ನಮ್ಮ ಕನ್ನಡಿಗರ ಸಾಧನೆಗೇನು ಕಡಿಮೆ? ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ದಿಗ್ಗಜರಿದ್ದಾರೆ. ಯಾರಿಗೂ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಗೌರವ ಸಂದಿಲ್ಲ.

ಡಾ. ರಾಜ್​ಕುಮಾರ್, ಡಾ. ವಿಷ್ಣು ವರ್ಧನ್, ಡಾ. ಅಂಬರೀಶ್, ಶಂಕರ್ ನಾಗ್, ಪಂಡರೀ ಬಾಯಿ, ಜಯಂತಿ, ಬಿ ಸರೋಜಾ ದೇವಿ ಹೀಗೆ ದೊಡ್ಡ ಲಿಸ್ಟ್ ಇದೆ. ಆದ್ರೆ ಯಾವೊಬ್ಬ ಕನ್ನಡಿಗನ ಮೇಣದ ಪ್ರತಿಮೆ ಟುಸ್ಸಾಡ್ಸ್​ನಲ್ಲಿ ಇಲ್ಲ ಎಂದು ನಟಿ ಹರಿಪ್ರಿಯಾ ಸೋಷಿಯಲ್ ಮೀಡಿಯಾದಲ್ಲಿ ಗುಡುಗಿದ್ದಾರೆ.

ಇತ್ತೀಚೆಗೆ ನಟಿ ಕಾಜಲ್ ಅಗರ್ವಾಲ್ ಮೇಣದ ಪ್ರತಿಮೆ ಅನಾವರಣದ ಬೆನ್ನಲ್ಲೇ, ಮ್ಯೂಸಿಯಂನ ಆಡಳಿತ ಮಂಡಳಿಗೆ ಹರಿಪ್ರಿಯಾ ಸರಿಯಾಗಿ ತಿವಿದಿದ್ದಾರೆ.

ಕನ್ನಡಿಗರ ಒಂದು ಮೇಣದ ಪ್ರತಿಮೆ ಮ್ಯೂಸಿಮಂನಲ್ಲಿ ಇಲ್ಲ ಯಾಕೆ ಎಂದು ಪ್ರಶ್ನಿಸಿರುವ ನಟಿ, ನಿನ್ನೆ ಮೊನ್ನೆ ಬಂದು ಸಿನಿರಂಗದಲ್ಲಿ ದಾಪುಗಾಲಿಡುತ್ತಿರೋರಿಗೆ ಮೇಣದ ಪ್ರತಿಮೆ ಕಿರೀಟ ಬೇಕಾ? ಸಾಧನೆ ಮಾಡದೇ ಇದ್ದರೂ ಅಂಥವರ ಮೇಣದ ಪ್ರತಿಮೆ ಸಿದ್ಧವಾಗ್ತಿದೆ ಎಂದು ಹರಿಪ್ರಿಯಾ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಅಂದಹಾಗೆ ಕಾಜಲ್ ಅಗರವಾಲ್ ಮೇಣದ ಪ್ರತಿಮೆ ನಿನ್ನೆಯಷ್ಟೆ ಅನಾವರಣಗೊಂಡಿದೆ. ಸಿಂಗಾಪುರದಲ್ಲಿನ ಮ್ಯೂಸಿಯಂನಲ್ಲಿ ಕಾಜಲ್ ಪ್ರತಿಮೆ ಇಡಲಾಗಿದೆ.

https://www.facebook.com/IamHariprriya/posts/3663226557050626

Published On - 5:26 pm, Wed, 5 February 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು