AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubha Poonja: ಸಿಂಪಲ್ ಆಗಿ ಗೆಳೆಯ ಸುಮಂತ್ ಜತೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ ನಟಿ ಶುಭಾ ಪೂಂಜ

Shubha Poonja marriage: ಸ್ಯಾಂಡಲ್​ವುಡ್ ನಟಿ ಶುಭಾ ಪೂಂಜಾ ಸದ್ದಿಲ್ಲದೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ದೀರ್ಘಕಾಲದ ಗೆಳೆಯ ಸುಮಂತ್ ಅವರನ್ನು ಶುಭಾ ವಿವಾಹವಾಗಿದ್ದಾರೆ.

Shubha Poonja: ಸಿಂಪಲ್ ಆಗಿ ಗೆಳೆಯ ಸುಮಂತ್ ಜತೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ ನಟಿ ಶುಭಾ ಪೂಂಜ
ಸುಮಂತ್ ಹಾಗೂ ಶುಭಾ ಪೂಂಜ ಜತೆ ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ
TV9 Web
| Edited By: |

Updated on:Jan 05, 2022 | 4:05 PM

Share

ಸ್ಯಾಂಡಲ್​ವುಡ್ ನಟಿ ಶುಭಾ ಪೂಂಜ (Shubha Poonja) ಸದ್ದಿಲ್ಲದೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಹೌದು. ನಟಿ ತಮ್ಮ ದೀರ್ಘಕಾಲದ ಗೆಳೆಯ ಸುಮಂತ್ (Sumanth) ಜತೆ ಸಪ್ತಪದಿ ತುಳಿದಿದ್ದಾರೆ. ಸುಮಂತ್ ಹಾಗೂ ಶುಭಾ ಮಂಗಳೂರಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಸಿಂಪಲ್ ಆಗಿ ಮ್ಯಾರೇಜ್ ಮಾಡಿಕೊಂಡಿದ್ದಾರೆ. ಮಂಗಳೂರಿನ ಮಜಲಬೆಟ್ಟುಬೀಡುವಿನಲ್ಲಿ ಕುಟುಂಬದವರು ಹಾಗು ಕೆಲವೇ ಕೆಲವು ಆಪ್ತರ ಸಮ್ಮುಖದಲ್ಲಿ ಸರಳವಾಗಿ ಮದುವೆ ಕಾರ್ಯಕ್ರಮ ನಡೆಯಿತು. ಶುಭಾ ಮದುವೆಯಲ್ಲಿ ಬಿಗ್ ಬಾಸ್ ವಿಜೇತ ಮಂಜು ಪಾವಗಡ (Manju Paavagada) ಅವರು ಭಾಗವಹಿಸಿ ಶುಭ ಹಾರೈಸಿದರು.

ಈ ಕುರಿತು ಶುಭಾ ಪೂಂಜಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದು, ಚಿತ್ರವನ್ನು ಹಂಚಿಕೊಂಡಿದ್ದಾರೆ. ಪ್ರೀತಿಯ ಎಲ್ಲರಿಗೂ ನಮಸ್ಕಾರಗಳು. ಇಂದು ನಾನು ಮತ್ತು ಸುಮಂತ್ ಮಹಾಬಲ ಗುರು-ಹಿರಿಯರು ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಊರು ಮಜಲಬೆಟ್ಟುಬೀಡುವಿನಲ್ಲಿ ಸರಳ ವಿವಾಹವಾದೆವು. ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆಗಳು ನಮ್ಮ ಮೇಲಿರಲಿ’’ ಎಂದು ಶುಭಾ ಬರೆದುಕೊಂಡಿದ್ದಾರೆ.

ಶುಭಾ ಪೂಂಜ ಹಂಚಿಕೊಂಡ ಪೋಸ್ಟ್ ಇಲ್ಲಿದೆ:

ಶುಭಾ ಹಾಗೂ ಸುಮಂತ್ ದೀರ್ಘಕಾಲದ ಸ್ನೇಹಿತರು. ಶುಭಾ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಗೆಳೆಯನ ಜತೆಯಿರುವ ಚಿತ್ರಗಳನ್ನು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಈ ಹಿಂದೆ ಅವರು ಹಂಚಿಕೊಂಡಿದ್ದ ಕೆಲವು ಚಿತ್ರಗಳು ಇಲ್ಲಿವೆ.

2004ರಲ್ಲಿ ತಮಿಳು ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಶುಭಾ, ‘ಜಾಕ್​ಪಾಟ್’ ಚಿತ್ರದ ಮೂಲಕ ಸ್ಯಾಂಡಲ್​ವುಡ್ ಪ್ರವೇಶಿಸಿದರು. ‘ಚಂಡ’, ‘ಮೊಗ್ಗಿನ ಮನಸು’ ಖ್ಯಾತಿ ತಂದುಕೊಟ್ಟವು. ಮೊಗ್ಗಿನ ಮನಸು ಚಿತ್ರದ ಪಾತ್ರಕ್ಕಾಗಿ ಫಿಲ್ಮ್ ಫೇರ್ ಪ್ರಶಸ್ತಿಯನ್ನೂ ನಟಿ ಪಡೆದಿದ್ದಾರೆ. ಇತ್ತೀಚೆಗೆ ‘ನರಗುಂದ ಬಂಡಾಯ’ ಚಿತ್ರದಲ್ಲಿ ಶುಭಾ ಬಣ್ಣಹಚ್ಚಿದ್ದರು.

ಇದನ್ನೂ ಓದಿ:

Avinash: ಸಾವಿನ ಕುರಿತು ಸುಳ್ಳುಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ ನಟ ಅವಿನಾಶ್

Ek Love Ya: ಸ್ಯಾಂಡಲ್​ವುಡ್​ಗೆ ಕೊರೊನಾತಂಕ; ಬಹುನಿರೀಕ್ಷಿತ ‘ಏಕ್​ ಲವ್ ಯಾ’ ರಿಲೀಸ್ ಮುಂದೂಡಿಕೆ

Published On - 2:40 pm, Wed, 5 January 22

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್