AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubha Poonja: ಸಿಂಪಲ್ ಆಗಿ ಗೆಳೆಯ ಸುಮಂತ್ ಜತೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ ನಟಿ ಶುಭಾ ಪೂಂಜ

Shubha Poonja marriage: ಸ್ಯಾಂಡಲ್​ವುಡ್ ನಟಿ ಶುಭಾ ಪೂಂಜಾ ಸದ್ದಿಲ್ಲದೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ದೀರ್ಘಕಾಲದ ಗೆಳೆಯ ಸುಮಂತ್ ಅವರನ್ನು ಶುಭಾ ವಿವಾಹವಾಗಿದ್ದಾರೆ.

Shubha Poonja: ಸಿಂಪಲ್ ಆಗಿ ಗೆಳೆಯ ಸುಮಂತ್ ಜತೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ ನಟಿ ಶುಭಾ ಪೂಂಜ
ಸುಮಂತ್ ಹಾಗೂ ಶುಭಾ ಪೂಂಜ ಜತೆ ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ
TV9 Web
| Edited By: |

Updated on:Jan 05, 2022 | 4:05 PM

Share

ಸ್ಯಾಂಡಲ್​ವುಡ್ ನಟಿ ಶುಭಾ ಪೂಂಜ (Shubha Poonja) ಸದ್ದಿಲ್ಲದೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಹೌದು. ನಟಿ ತಮ್ಮ ದೀರ್ಘಕಾಲದ ಗೆಳೆಯ ಸುಮಂತ್ (Sumanth) ಜತೆ ಸಪ್ತಪದಿ ತುಳಿದಿದ್ದಾರೆ. ಸುಮಂತ್ ಹಾಗೂ ಶುಭಾ ಮಂಗಳೂರಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಸಿಂಪಲ್ ಆಗಿ ಮ್ಯಾರೇಜ್ ಮಾಡಿಕೊಂಡಿದ್ದಾರೆ. ಮಂಗಳೂರಿನ ಮಜಲಬೆಟ್ಟುಬೀಡುವಿನಲ್ಲಿ ಕುಟುಂಬದವರು ಹಾಗು ಕೆಲವೇ ಕೆಲವು ಆಪ್ತರ ಸಮ್ಮುಖದಲ್ಲಿ ಸರಳವಾಗಿ ಮದುವೆ ಕಾರ್ಯಕ್ರಮ ನಡೆಯಿತು. ಶುಭಾ ಮದುವೆಯಲ್ಲಿ ಬಿಗ್ ಬಾಸ್ ವಿಜೇತ ಮಂಜು ಪಾವಗಡ (Manju Paavagada) ಅವರು ಭಾಗವಹಿಸಿ ಶುಭ ಹಾರೈಸಿದರು.

ಈ ಕುರಿತು ಶುಭಾ ಪೂಂಜಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದು, ಚಿತ್ರವನ್ನು ಹಂಚಿಕೊಂಡಿದ್ದಾರೆ. ಪ್ರೀತಿಯ ಎಲ್ಲರಿಗೂ ನಮಸ್ಕಾರಗಳು. ಇಂದು ನಾನು ಮತ್ತು ಸುಮಂತ್ ಮಹಾಬಲ ಗುರು-ಹಿರಿಯರು ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಊರು ಮಜಲಬೆಟ್ಟುಬೀಡುವಿನಲ್ಲಿ ಸರಳ ವಿವಾಹವಾದೆವು. ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆಗಳು ನಮ್ಮ ಮೇಲಿರಲಿ’’ ಎಂದು ಶುಭಾ ಬರೆದುಕೊಂಡಿದ್ದಾರೆ.

ಶುಭಾ ಪೂಂಜ ಹಂಚಿಕೊಂಡ ಪೋಸ್ಟ್ ಇಲ್ಲಿದೆ:

ಶುಭಾ ಹಾಗೂ ಸುಮಂತ್ ದೀರ್ಘಕಾಲದ ಸ್ನೇಹಿತರು. ಶುಭಾ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಗೆಳೆಯನ ಜತೆಯಿರುವ ಚಿತ್ರಗಳನ್ನು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಈ ಹಿಂದೆ ಅವರು ಹಂಚಿಕೊಂಡಿದ್ದ ಕೆಲವು ಚಿತ್ರಗಳು ಇಲ್ಲಿವೆ.

2004ರಲ್ಲಿ ತಮಿಳು ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಶುಭಾ, ‘ಜಾಕ್​ಪಾಟ್’ ಚಿತ್ರದ ಮೂಲಕ ಸ್ಯಾಂಡಲ್​ವುಡ್ ಪ್ರವೇಶಿಸಿದರು. ‘ಚಂಡ’, ‘ಮೊಗ್ಗಿನ ಮನಸು’ ಖ್ಯಾತಿ ತಂದುಕೊಟ್ಟವು. ಮೊಗ್ಗಿನ ಮನಸು ಚಿತ್ರದ ಪಾತ್ರಕ್ಕಾಗಿ ಫಿಲ್ಮ್ ಫೇರ್ ಪ್ರಶಸ್ತಿಯನ್ನೂ ನಟಿ ಪಡೆದಿದ್ದಾರೆ. ಇತ್ತೀಚೆಗೆ ‘ನರಗುಂದ ಬಂಡಾಯ’ ಚಿತ್ರದಲ್ಲಿ ಶುಭಾ ಬಣ್ಣಹಚ್ಚಿದ್ದರು.

ಇದನ್ನೂ ಓದಿ:

Avinash: ಸಾವಿನ ಕುರಿತು ಸುಳ್ಳುಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ ನಟ ಅವಿನಾಶ್

Ek Love Ya: ಸ್ಯಾಂಡಲ್​ವುಡ್​ಗೆ ಕೊರೊನಾತಂಕ; ಬಹುನಿರೀಕ್ಷಿತ ‘ಏಕ್​ ಲವ್ ಯಾ’ ರಿಲೀಸ್ ಮುಂದೂಡಿಕೆ

Published On - 2:40 pm, Wed, 5 January 22

Follow Us
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು