AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್​ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾದ ಹಿರಿಯ ನಟಿ ಶೈಲಶ್ರೀ

ಶೈಲಶ್ರೀ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದು 1964ರಲ್ಲಿ. ಅವರ ನಟಿಸಿದ್ದು ಮೊದಲು ಮಲಯಾಳಂನಲ್ಲಿ. ಆ ಬಳಿಕ ತಮಿಳಿನಲ್ಲಿ ಅವರು ನಟಿಸಿದರು.

ಕ್ಯಾನ್ಸರ್​ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾದ ಹಿರಿಯ ನಟಿ ಶೈಲಶ್ರೀ
TV9 Web
| Edited By: |

Updated on:Jan 21, 2023 | 11:05 AM

Share

ಹಿರಿಯ ನಟಿ ಶೈಲಶ್ರೀ ಆರ್​. (Shylashri ) ಅವರು ಕ್ಯಾನ್ಸರ್ ಚಿಕಿತ್ಸೆಗಾಗಿ ಬೆಂಗಳೂರಿನ ಆರ್​.ಆರ್​. ನಗರದಲ್ಲಿರುವ ಆಸ್ಪತ್ರೆಗೆ ದಾಖಲಾಗಿದ್ದಾರೆ. 60 ಹಾಗೂ 70ರ ದಶಕದಲ್ಲಿ ಶೈಲಶ್ರೀ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದರು. ಈಗ ಅವರಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ ಎಂದು ತಿಳಿದುಬಂದಿದೆ. ಚಿಕಿತ್ಸೆ ಪಡೆಯಲು ಹಣ ಇಲ್ಲದಂತಾಗಿದೆ.

ಶೈಲಶ್ರೀ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದು 1964ರಲ್ಲಿ. ಅವರ ನಟಿಸಿದ್ದು ಮೊದಲು ಮಲಯಾಳಂನಲ್ಲಿ. ಆ ಬಳಿಕ ತಮಿಳಿನಲ್ಲಿ ಅವರು ನಟಿಸಿದರು. 1966ರಲ್ಲಿ ಖ್ಯಾತ ನಟ ಉದಯ್​ಕುಮಾರ್ ನಟನೆಯ ‘ಸಂಧ್ಯಾ ರಾಗ’ ಸಿನಿಮಾದಲ್ಲಿ ಶೈಲಶ್ರೀ ನಟಿಸಿದರು. ಇದು ಕನ್ನಡದ ಅವರ ಮೊದಲ ಸಿನಿಮಾ. 1967ರಲ್ಲಿ ‘ಬಂಗಾರದ ಹೂವು’ ಚಿತ್ರದಲ್ಲಿ  ರಾಜ್​ಕುಮಾರ್ ಜತೆ ಶೈಲಶ್ರೀ ಬಣ್ಣ ಹಚ್ಚಿದರು.

ಕನ್ನಡ ಮಾತ್ರವಲ್ಲದೆ ತಮಿಳು, ಮಲಯಾಳಂನಲ್ಲಿ ಹಲವು ಸಿನಿಮಾಗಳಲ್ಲಿ ಶೈಲಶ್ರೀ ನಟಿಸಿದ್ದಾರೆ. ಹಿಂದಿಯಲ್ಲೂ ಅವರು ಒಂದು ಸಿನಿಮಾ ಮಾಡಿದ್ದಾರೆ. 1978ರಿಂದ ಈಚೆಗೆ ಶೈಲಶ್ರೀ ಬಣ್ಣದ ಲೋಕದಿಂದ ದೂರವೇ ಉಳಿದುಕೊಂಡಿದ್ದಾರೆ.

ಇದನ್ನೂ ಓದಿ: Kabzaa Update: ಜನವರಿ 24ಕ್ಕೆ ಸಿಗಲಿದೆ ‘ಕಬ್ಜ’ ತಂಡದಿಂದ ದೊಡ್ಡ ಅಪ್​​ಡೇಟ್​; ಅಭಿಮಾನಿಗಳಲ್ಲಿ ಮೂಡಿದೆ ಕೌತುಕ

ಆರ್​.ಎನ್​. ಸುದರ್ಶನ್ ಅವರನ್ನು ಶೈಲಶ್ರೀ ಮದುವೆ ಆಗಿದ್ದರು. ಸುದರ್ಶನ್ ಅವರು 2017ರಲ್ಲಿ ನಿಧನ ಹೊಂದಿದರು. ಕನ್ನಡ ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆ ಪರಿಗಣಿಸಿ ಶೈಲಶ್ರೀ ಅವರಿಗೆ 2019ರಲ್ಲಿ ‘ರಾಜ್ಯೋತ್ಸವ ಅವಾರ್ಡ್​​’ ನೀಡಲಾಯಿತು. ಸದ್ಯ ಶೈಲಶ್ರೀ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದರಿಂದ ಚಿಕಿತ್ಸೆ ಪಡೆಯಲು ತೊಂದರೆ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:01 am, Sat, 21 January 23

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು