AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada Language: ಕನ್ನಡಕ್ಕೆ ಅವಮಾನ; ಸಿಡಿದೆದ್ದ ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳು

ಗೂಗಲ್​ನಲ್ಲಿ ಕನ್ನಡ ಭಾಷೆಗೆ ಅವಮಾನವಾಗಿದೆ. ಭಾರತದಲ್ಲಿನ ಕೊಳಕು ಭಾಷೆ ಎಂದು ಸರ್ಚ್​ ಮಾಡಿದರೆ ಅದರಲ್ಲಿ ಕನ್ನಡ ಬರುತ್ತಿದೆ. ಅನೇಕ ಸೆಲೆಬ್ರಿಟಿಗಳು ಕೂಡ ಈ ಬೆಳವಣಿಗೆ ಬಗ್ಗೆ ಸಿಡಿದೆದ್ದಿದ್ದಾರೆ.

Kannada Language: ಕನ್ನಡಕ್ಕೆ ಅವಮಾನ; ಸಿಡಿದೆದ್ದ ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳು
ಕನ್ನಡಕ್ಕೆ ಅವಮಾನ; ಸಿಡಿದೆದ್ದ ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳು
ರಾಜೇಶ್ ದುಗ್ಗುಮನೆ
| Edited By: |

Updated on: Jun 03, 2021 | 3:34 PM

Share

ಗೂಗಲ್​ನಲ್ಲಿ ಕನ್ನಡ ಭಾಷೆಗೆ ಅವಮಾನವಾಗಿದೆ. ಭಾರತದ ಕೊಳಕು ಭಾಷೆ ಎಂದು ಸರ್ಚ್​ ಮಾಡಿದರೆ ಅದರಲ್ಲಿ ಕನ್ನಡ ಬರುತ್ತಿದೆ. ಇದಕ್ಕೆ ಅನೇಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸಾಕಷ್ಟು ಜನರು ಗೂಗಲ್​ ಮುಖ್ಯಸ್ಥ ಸುಂದರ್ ಪಿಚ್ಚೈ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ. ಈ ಮಧ್ಯೆ ಅನೇಕ ಸೆಲೆಬ್ರಿಟಿಗಳು ಕೂಡ ಈ ಬೆಳವಣಿಗೆ ಬಗ್ಗೆ ಸಿಡಿದೆದ್ದಿದ್ದಾರೆ.

ಕನ್ನಡದ ನಿರ್ದೇಶಕ ಸಾಯಿ ಕೃಷ್ಣ ಅವರು ಈ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಭಾರತದ ಕೊಳಕು ಭಾಷೆ ಎಂದು ಸರ್ಚ್​ ಮಾಡಿದರೆ ಕನ್ನಡ ಬರುತ್ತಿದೆ. ಇದಕ್ಕೆ ನೀವು ಉತ್ತರಿಸುವಿರಾ ಎಂದು ಸುಂದರ್​ ಪಿಚ್ಚೈ ಅವರನ್ನು ಟ್ವಿಟರ್​ನಲ್ಲಿ ಟ್ಯಾಗ್​ ಮಾಡುವ ಮೂಲಕ ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ನಿಧಿ ಸುಬ್ಬಯ್ಯ ಕೂಡ ಮಾತನಾಡಿದ್ದಾರೆ. ಕೊಳಕು ಭಾಷೆ ಎಂದು ಸರ್ಚ್​ ಮಾಡಿದಾಗ ಕನ್ನಡ ಎಂದು ಏಕೆ ಬರುತ್ತಿದೆಯೋ ನನಗೆ ಗೊತ್ತಿಲ್ಲ. ಕ್ವೀನ್ಸ್​ ಆಫ್​ ದಿ ಲ್ಯಾಂಗ್ವೇಜಸ್​ ಎಂದು ಸರ್ಚ್​ ಮಾಡಿ. ಆಗಲೂ ಕನ್ನಡವೇ ಬರುತ್ತದೆ. ಇದನ್ನು ಹೆಚ್ಚು ಸರ್ಚ್​ ಮಾಡೋಣ. ಈ ಮೂಲಕ ಹೊರ ಜಗತ್ತಿಗೆ ನಾವು ಏನು ಎಂಬುದನ್ನು ತೋರಿಸೋಣ ಎಂದಿದ್ದಾರೆ.

ಈ ಬಗ್ಗೆ ನಿರ್ದೇಶಕ ಪನ್ನಗಭರಣ ಕೂಡ ಮಾತನಾಡಿದ್ದು, ಕ್ವೀನ್ಸ್​ ಆಫ್​ ಆಲ್​ ದಿ ಲ್ಯಾಂಗ್ವೇಜಸ್ ಅನ್ನೋದನ್ನು ಸರ್ಚ್​ ಮಾಡಿ. #QueenOfLanguagesKannada ಬಳಕೆ ಮಾಡಿ. ಈ ಮೂಲಕ ಕನ್ನಡಿಗರ ಶಕ್ತಿಯನ್ನು ತೋರಿಸೋಣ ಎಂದಿದ್ದಾರೆ.

ನನಗೆ ಈ ಬಗ್ಗೆ ಸಾಕಷ್ಟು ಮೆಸೇಜ್​ ಬರುತ್ತಿದೆ. ಇದರ ಹಿಂದೆ ಯಾರಿದ್ದಾರೆ ಗೊತ್ತಿಲ್ಲ. ಕನ್ನಡ ಸುಂದರ ಭಾಷೆ ಮತ್ತು ಈ ಲಿಪಿ ಮೇಲೆ ನಮಗೆ ತುಂಬಾ ಹೆಮ್ಮೆ ಇದೆ ಎಂಬುದು ಎಲ್ಲರಿಗೂ ತೋರಿಸುವ ಸಮಯ ಬಂದಿದೆ. ಕ್ವೀನ್ಸ್​ ಆಫ್​ ಲ್ಯಾಂಗ್ವೇಜಸ್​ ಎಂದು ಸರ್ಚ್​ ಮಾಡಿ. ಆಗ ಕನ್ನಡ ಬರುತ್ತಿದೆ. ಈ ಮೂಲಕ ಪಾಸಿಟಿವಿಟಿ ಹೆಚ್ಚಿಸಿ ಎಂದಿದ್ದಾರೆ.

ಕಿರುತೆರೆ ನಟ ಅನಿರುದ್ಧ್​ ಕೂಡ ಈ ಬಗ್ಗೆ ಟಿವಿ9ಗೆ ಪ್ರತಿಕ್ರಿಯಿಸಿದ್ದಾರೆ. ಯಾರೋ ಏನೋ ಹೇಳ್ತಾರೆ ಅಂದಮಾತ್ರಕ್ಕೆ ಅದನ್ನು ನಾವು ಕೇಳೋಕೆ ಆಗಲ್ಲ. ಕನ್ನಡ ಭಾಷೆ ಹೇಗೆ, ಅದರ ಸೊಗಡು ಏನು ಎಂಬುದು ನಮಗೆ ಗೊತ್ತು. ಕನ್ನಡ ಕೊಳಕು ಭಾಷೆ ಎಂದು ಆರ್ಟಿಕಲ್​ ಬರೆದವರಿಗೆ ಶಿಕ್ಷೆ ಆಗಬೇಕು. ಈ ಮೂಲಕ ಮುಂದೆ ಈ ರೀತಿ ತಪ್ಪು ಆಗದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.

ಇದನ್ನೂ ಓದಿ: Ugliest Language in India: ಕನ್ನಡಿಗರ ಸ್ವಾಭಿಮಾನ ಕೆಣಕಿದ ಗೂಗಲ್​; ಕನ್ನಡವನ್ನು ಕೊಳಕು ಭಾಷೆ ಎಂದು ಅಪಮಾನಿಸಿದ ಸರ್ಚ್​ ಎಂಜಿನ್

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ