AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ವೇಳೆ ಚಿತ್ರರಂಗದಲ್ಲಿ 4 ಕೋಟಿ ಡ್ರಗ್ಸ್​ ದಂಧೆ ನಡೆದಿದೆ -ನಿರ್ದೇಶಕ ಇಂದ್ರಜಿತ್

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್​ ಜಾಲದ ನಂಟಿರುವ ಆರೋಪಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಟಿವಿ9ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚೆಗೆ ಚಿತ್ರರಂಗಕ್ಕೆ ಬಂದಿರುವ 3ನೇ ಪೀಳಿಗೆಯವರಿಂದ ಹೀಗಾಗಿದೆ. ಮೂರನೇ ಪೀಳಿಗೆಯವರು ಸ್ಯಾಂಡಲ್​ವುಡ್​ನ ಕೆಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಕೆಲವು ನಟ, ನಟಿಯರು ಡ್ರಗ್ಸ್​ ದಂಧೆಯಲ್ಲಿ ಭಾಗಿಯಾಗಿದ್ದಾರೆ. ಚಿತ್ರೀಕರಣ ವೇಳೆ ರೇವ್​ ಪಾರ್ಟಿ ಸೇರಿ ಹಲವು ನಡೆಯುತ್ತೆ. ಈ ಹಿಂದೆ ಈ ರೀತಿ ಇರಲಿಲ್ಲ. ಈ ಹಿಂದೆ ನಮ್ಮ ಕನ್ನಡ ಚಿತ್ರರಂಗ ಸಾಂಪ್ರದಾಯಿಕವಾಗಿತ್ತು ಎಂದು ತಮ್ಮ ನೋವು […]

ಲಾಕ್​ಡೌನ್​ ವೇಳೆ ಚಿತ್ರರಂಗದಲ್ಲಿ 4 ಕೋಟಿ ಡ್ರಗ್ಸ್​ ದಂಧೆ ನಡೆದಿದೆ -ನಿರ್ದೇಶಕ ಇಂದ್ರಜಿತ್
KUSHAL V
| Edited By: ಸಾಧು ಶ್ರೀನಾಥ್​|

Updated on: Aug 29, 2020 | 12:31 PM

Share

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್​ ಜಾಲದ ನಂಟಿರುವ ಆರೋಪಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಟಿವಿ9ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚೆಗೆ ಚಿತ್ರರಂಗಕ್ಕೆ ಬಂದಿರುವ 3ನೇ ಪೀಳಿಗೆಯವರಿಂದ ಹೀಗಾಗಿದೆ. ಮೂರನೇ ಪೀಳಿಗೆಯವರು ಸ್ಯಾಂಡಲ್​ವುಡ್​ನ ಕೆಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಕೆಲವು ನಟ, ನಟಿಯರು ಡ್ರಗ್ಸ್​ ದಂಧೆಯಲ್ಲಿ ಭಾಗಿಯಾಗಿದ್ದಾರೆ. ಚಿತ್ರೀಕರಣ ವೇಳೆ ರೇವ್​ ಪಾರ್ಟಿ ಸೇರಿ ಹಲವು ನಡೆಯುತ್ತೆ. ಈ ಹಿಂದೆ ಈ ರೀತಿ ಇರಲಿಲ್ಲ. ಈ ಹಿಂದೆ ನಮ್ಮ ಕನ್ನಡ ಚಿತ್ರರಂಗ ಸಾಂಪ್ರದಾಯಿಕವಾಗಿತ್ತು ಎಂದು ತಮ್ಮ ನೋವು ತೋಡಿಕೊಂಡಿದ್ದಾರೆ.

‘ಮಾಹಿತಿ ಇಟ್ಟುಕೊಂಡೇ ಆರೋಪ ಮಾಡುತ್ತಿರುವೆ’ ಆದರೆ ಈಗ ಡ್ರಗ್ಸ್​ ಪಾರ್ಟಿ ನಡೆಯುತ್ತಿದೆ. ಚಿತ್ರರಂಗದವರು ಸಿಕ್ಕಿ ಹಾಕಿಕೊಂಡರೂ ಕ್ರಮ ಕೈಗೊಂಡಿಲ್ಲ. ರಾಜಕೀಯ ಒತ್ತಡದಿಂದ ಯಾವುದೇ ಕ್ರಮ ಕೈಗೊಂಡಿಲ್ಲ. ಲಾಕ್​ಡೌನ್​ ವೇಳೆ ₹3.5ಯಿಂದ 4 ಕೋಟಿ ಡ್ರಗ್ಸ್​ ದಂಧೆ ನಡೆದಿದೆ ಎಂದು ನಾನು ಮಾಹಿತಿ ಇಟ್ಟುಕೊಂಡೇ ಆರೋಪ ಮಾಡುತ್ತಿರುವೆ ಎಂದು ಇಂದ್ರಜಿತ್​ ಲಂಕೇಶ್​ ಹೇಳಿದ್ದಾರೆ.

ಕೆಲವು ನಟರ ಎಸ್ಟೇಟ್​ಗಳಿಗೆ ಡ್ರಗ್ಸ್​ ಸರಬರಾಜಾಗುತ್ತಿವೆ. ಇದು ಅವರು ಬೆವರು ಸುರಿಸಿ ಕೊಟ್ಟಿರುವ ಹಣ ಅಲ್ಲ. ಜೊತೆಗೆ, ಕಾರು ಅಪಘಾತವಾದ ವೇಳೆ ಆ ನಟಿಯ ಹೆಸರು ಬಹಿರಂಗಪಡಿಸಲಿಲ್ಲ.

ಅವರ ವಿರುದ್ಧ ಯಾವುದೇ ಕ್ರಮ ಸಹ ಕೈಗೊಂಡಿಲ್ಲ. ಅಪಘಾತವಾದ ಕಾರ್​ನಲ್ಲಿ ಡ್ರಗ್ಸ್ ಸಿಕ್ಕಿದ್ದರೂ ಕ್ರಮ ಕೈಗೊಂಡಿಲ್ಲ. ಇವೆಲ್ಲದಕ್ಕೂ 4 ಪುಟಗಳ ದಾಖಲೆ ಇದೆ ನನ್ನ ಬಳಿ. ಹಣ ಪಾವತಿ ಮಾಡಿರುವ ಬಗ್ಗೆಯೂ ದಾಖಲೆ ಇದೆ. ಇಷ್ಟೆಲ್ಲಾ ಇದ್ದರೂ ಕ್ರಮ ಕೈಗೊಳ್ಳಲು ಹಿಂದೇಟು ಏಕೆ ಎಂದು ಇಂದ್ರಜಿತ್​ ಲಂಕೇಶ್​ ಪ್ರಶ್ನಿಸಿದ್ದಾರೆ.

ಜಾಲದಲ್ಲಿರುವ ನಟ, ನಟಿಯರ ಹೆಸರು ಬಹಿರಂಗವಾಗಿಲ್ಲ. ಇದರಲ್ಲಿ ರಾಜಕಾರಣಿಗಳು, ಅವರ ಪುತ್ರರ ಪ್ರಭಾವವಿದೆ. ನಟಿಯರ ಮೇಲಿನ ಮೋಹದಿಂದ ರಾಜಕಾರಣಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ.

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’