AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಸಿನಿಮೋತ್ಸವ ರದ್ದುಗೊಳಿಸಿ, ಅದರ ಹಣವನ್ನು ಕಾರ್ಮಿಕರಿಗೆ ನೀಡುವಂತೆ ನಿರ್ದೇಶಕ ಮಂಸೋರೆ ಮನವಿ

Coronavirus: ಈ ಬಾರಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಸಂಪೂರ್ಣವಾಗಿ ರದ್ದುಗೊಳಿಸಿ, ಅದಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಕಾರ್ಮಿಕರಿಗೆ ವಿತರಿಸುವುದು ಹೆಚ್ಚು ಅರ್ಥಪೂರ್ಣ ಎಂದು ‘ಆ್ಯಕ್ಟ್​-1978’ ಚಿತ್ರದ ನಿರ್ದೇಶಕ ಮಂಸೋರೆ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು ಸಿನಿಮೋತ್ಸವ ರದ್ದುಗೊಳಿಸಿ, ಅದರ ಹಣವನ್ನು ಕಾರ್ಮಿಕರಿಗೆ ನೀಡುವಂತೆ ನಿರ್ದೇಶಕ ಮಂಸೋರೆ ಮನವಿ
ನಿರ್ದೇಶಕ ಮಂಸೋರೆ
ಮದನ್​ ಕುಮಾರ್​
|

Updated on: May 20, 2021 | 8:52 AM

Share

ಕೊರೊನಾ ವೈರಸ್​ನ ಹಾವಳಿಗೆ ಸಿಲುಕಿರುವ ಎಲ್ಲ ಉದ್ಯಮಗಳ ರೀತಿಯೇ ಸಿನಿಮಾ ಕ್ಷೇತ್ರ ಕೂಡ ಕಂಗೆಟ್ಟಿದೆ. ಚಿತ್ರರಂಗದಲ್ಲಿ ಕೆಲಸ ಮಾಡುವ ಅನೇಕರು ಕೊವಿಡ್​ನಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಮಾಹಾಮಾರಿಯನ್ನು ನಿಯಂತ್ರಿಸಲು ಸದ್ಯ ಲಾಕ್​ಡೌನ್​ ಜಾರಿ ಮಾಡಿರುವುದರಿಂದ ನಿರುದ್ಯೋಗ ಕೂಡ ಕಾಡುತ್ತಿದೆ. ಈ ಸಂದರ್ಭದಲ್ಲಿ ಬಡವರು ಜೀವನ ನಡೆಸುವುದು ಕಷ್ಟವಾಗಿದೆ. ಸಿನಿಮಾ ಕ್ಷೇತ್ರದಲ್ಲಿ ಕೆಲಸ ಮಾಡುವ ಅನೇಕರ ಬದುಕು ಈಗ ಸಂಕಷ್ಟದಲ್ಲಿದೆ. ಕೆಲವು ಸ್ಟಾರ್​ ನಟರು ಮುಂದೆ ನಿಂತು ಬಡ ಕಲಾವಿದರಿಗೆ, ಹಿರಿಯ ನಟ-ನಟಿಯರಿಗೆ, ಸಂಕಷ್ಟದಲ್ಲಿರುವ ತಂತ್ರಜ್ಞರಿಗೆ ಸಹಾಯ ಮಾಡುತ್ತಿದ್ದಾರೆ. ಆದರೂ ನೆರವು ಸಾಕಾಗುತ್ತಿಲ್ಲ. ಅದಕ್ಕಾಗಿ ನಿರ್ದೇಶಕ ಮಂಸೋರೆ ಅವರು ಸರ್ಕಾರಕ್ಕೆ ಒಂದು ಮನವಿ ಮಾಡಿಕೊಂಡಿದ್ದಾರೆ.

ಈ ಬಾರಿ ನಡೆಯಬೇಕಾಗಿದ್ದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು ಕೊರೊನಾ ಕಾರಣದಿಂದ ಮುಂದೂಡಲ್ಪಟ್ಟಿದೆ. ಈ ಸಿನಿಮಾತ್ಸವಕ್ಕಾಗಿ ಕೋಟ್ಯಂತರ ರೂಪಾಯಿ ಹಣ ಮೀಸಲಿಡಲಾಗಿದೆ. ಆ ಹಣವನ್ನು ಕಾರ್ಮಿಕರಿಗೆ, ಬಡ ಕಲಾವಿದರಿಗೆ ನೀಡಿದರೆ ಒಳಿತು ಎಂಬುದು ಮಂಸೋರೆ ಅಭಿಪ್ರಾಯ. ಈ ಬಗ್ಗೆ ಅವರು ತಮ್ಮ ಮಾತುಗಳನ್ನು ಹಂಚಿಕೊಂಡಿದ್ದಾರೆ. ಕೊರೊನಾ ವೈರಸ್​ನಿಂದ ಜನರ ಜೀವನ ದುಸ್ತರವಾಗಿರುವಾಗ ಚಿತ್ರೋತ್ಸವಕ್ಕಿಂತಲೂ ಜೀವ ಉಳಿಸುವುದು ಮುಖ್ಯ ಎಂದು ಅವರು ಹೇಳಿದ್ದಾರೆ.

‘ಕೊವಿಡ್‌ನಿಂದಾಗಿ ಇಡೀ ರಾಜ್ಯ, ದೇಶ ತತ್ತರಿಸಿದೆ. ಪ್ರತಿಯೊಬ್ಬ ಪ್ರಜೆಯೂ ಆತಂಕದಿಂದ ಜೀವನ ನಡೆಸುತ್ತಿದ್ದಾರೆ. ಸರ್ಕಾರ ಕೊವಿಡ್ ತಡೆಯಲು ಲಾಕ್‌ಡೌನ್ ಹೇರಿದೆ. ಇದೇ ಸಂದರ್ಭದಲ್ಲಿ ಚಿತ್ರರಂಗದ ಸಾವಿರಾರು ಕಾರ್ಮಿಕರು, ಕಲಾವಿದರು ಕೆಲಸವಿಲ್ಲದೆ ಆರ್ಥಿಕ ಭದ್ರತೆ ಇಲ್ಲದೆ ನರಳುತ್ತಿದ್ದಾರೆ. ಅಕಾಡೆಮಿ ಅಧ್ಯಕ್ಷರು ಸರ್ಕಾರಕ್ಕೆ ವಿಶೇಷ ಪ್ಯಾಕೇಜ್ ಒದಗಿಸುವಂತೆ ಮನವಿ ಮಾಡಿದ್ದಾರೆ. ಈಗಾಗಲೇ ಸರ್ಕಾರ ಆರ್ಥಿಕವಾಗಿ ಸಮಸ್ಯೆಗಳನ್ನು ಎದುರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯವೇ. ಈ ಸಂದರ್ಭದಲ್ಲಿ ಸರ್ಕಾರದ ವಿಶೇಷ ಪ್ಯಾಕೇಜ್‌ಗಾಗಿ ಕಾಯದೇ, ಈ ಬಾರಿಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಸಂಪೂರ್ಣವಾಗಿ ರದ್ದುಗೊಳಿಸಿ, ಅದಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಕಾರ್ಮಿಕರಿಗೆ ವಿತರಿಸುವುದು ಹೆಚ್ಚು ಅರ್ಥಪೂರ್ಣ ಎನ್ನುವುದು ನನ್ನ ಭಾವನೆ’ ಎಂದಿದ್ದಾರೆ ಮಂಸೋರೆ.

‘ಕೊವಿಡ್ ಕಾರಣದಿಂದ ಈಗಾಗಲೇ ಸಾಕಷ್ಟು ಜನ ತೀರಿಕೊಂಡಿದ್ದಾರೆ. ಮುಂದೆ ಜೀವನ ಹೇಗೋ ಎಂದು ನೂರಾರು ಕುಟುಂಬಗಳು ಕಂಗಾಲಾಗಿವೆ. ಇಂತಹ ಸಂದರ್ಭದಲ್ಲಿ ಚಿತ್ರೋತ್ಸವಕ್ಕಿಂತ ಜೀವಗಳನ್ನು ಕಾಪಾಡಿಕೊಳ್ಳುವುದು ಆದ್ಯತೆಯಾಗಲಿ ಎಂಬುದು ನನ್ನ ಕೋರಿಕೆ. ಈ ಬಾರಿಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನಮ್ಮ ಆಕ್ಟ್-1978 ಸಿನಿಮಾವನ್ನು ಕೂಡ ಸ್ಪರ್ಧೆಗೆ ಕಳುಹಿಸಲಾಗಿದೆ. ಹಾಗಿದ್ದರೂ ಕೂಡ ನನಗೆ ಚಿತ್ರೋತ್ಸವ ರದ್ದಾಗುವುದರ ಬಗ್ಗೆ ಯಾವ ಬೇಸರವೂ ಇಲ್ಲ. ಈಗ ಎಲ್ಲದಕ್ಕಿಂತ ಜೀವ-ಜೀವನ ಮುಖ್ಯ’ ಎಂದು ಮಂಸೋರೆ ಹೇಳಿದ್ದಾರೆ.

ಇದನ್ನೂ ಓದಿ:

ಬಾಲಿವುಡ್​ಗೆ ರಿಮೇಕ್​ ಆಗುತ್ತಿರುವ ಕನ್ನಡದ Act 1978 ಚಿತ್ರ! ಹಿಂದಿಯಲ್ಲಿ ನಾಯಕಿ ಯಾರು?

ಬೆಂಗಳೂರು ಚಿತ್ರೋತ್ಸವಕ್ಕೆ ಸರ್ಕಾರದ ದುಂದು ವೆಚ್ಚ! ಸ್ಯಾಂಡಲ್​ವುಡ್​ ಮಂದಿ ಏನ್​ ಹೇಳ್ತಾರೆ?

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ