AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KN Mohan Kumar: ಸ್ಯಾಂಡಲ್​ವುಡ್​ ನಿರ್ದೇಶಕ ಕೆಎನ್ ಮೋಹನ್​ ಕುಮಾರ್ ಇನ್ನಿಲ್ಲ

KN Mohan Kumar Passes Away: ಸ್ಯಾಂಡಲ್​ವುಡ್ ಹಾಗೂ ಕಿರುತೆರೆ ನಿರ್ದೇಶಕ ಕೆ.ಎನ್.ಮೋಹನ್ ಕುಮಾರ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು.

KN Mohan Kumar: ಸ್ಯಾಂಡಲ್​ವುಡ್​ ನಿರ್ದೇಶಕ ಕೆಎನ್ ಮೋಹನ್​ ಕುಮಾರ್ ಇನ್ನಿಲ್ಲ
ಕೆಎನ್ ಮೋಹನ್ ಕುಮಾರ್
TV9 Web
| Edited By: |

Updated on:May 24, 2022 | 8:13 AM

Share

ಸ್ಯಾಂಡಲ್​ವುಡ್ (Sandalwood) ಹಾಗೂ ಕಿರುತೆರೆ ನಿರ್ದೇಶಕ ಕೆ.ಎನ್.ಮೋಹನ್ ಕುಮಾರ್ (KN Mohan Kumar) ಹೃದಯಾಘಾತದಿಂದ ಸೋಮವಾರ ನಿಧನರಾಗಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು. ಮೋಹನ್ ಅವರು ‘ಬೊಂಬೆಯಾಟ’ ಚಿತ್ರದ (Bombeyata Movie) ಮೂಲಕ ಖ್ಯಾತಿ ಗಳಿಸಿದ್ದರು. ಛಾಯಾಗ್ರಹಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದ ಅವರು ರಂಗಭೂಮಿಯಲ್ಲಿಯೂ ಗುರುತಿಸಿಕೊಂಡಿದ್ದರು. ಮೋಹನ್ ಕುಮಾರ್ ಅವರು ನಿರೂಪಕಿ ಹಾಗೂ ನಟಿ ವತ್ಸಲಾ ಮೋಹನ್ ಪತಿ. ನಟಿ ಅನನ್ಯಾ ಮೋಹನ್ ಇವರ ಪುತ್ರಿ. ಮೋಹನ್ ಕುಮಾರ್ ಅವರು ಕುಟುಂಬ, ಅಭಿಮಾನಿಗಳು ಹಾಗೂ ಬಂಧುವರ್ಗದವನ್ನು ಅಗಲಿದ್ದಾರೆ.

ಎಂಜಿನಿಯರ್‌ ಪದವೀಧರರಾಗಿದ್ದ ಮೋಹನ್​ ಅವರು ಪತ್ರಿಕೋದ್ಯಮ, ಪ್ರಕಾಶನ ಕ್ಷೇತ್ರದಲ್ಲಿಯೂ ಕೆಲಸ ಮಾಡಿದ್ದರು. ‘ಮೈಸೂರು ಮಲ್ಲಿಗೆ’ ಚಿತ್ರದ ನಾಯಕನಿಗೆ ಧ್ವನಿ ನೀಡಿದ್ದರು. ಮೋಹನ್ ನಿರ್ದೇಶಿಸಿದ್ದ ‘ಬೊಂಬೆಯಾಟ’ ಚಿತ್ರ ಅವರ ಪತ್ನಿ ವತ್ಸಲಾ ಮೋಹನ್ ಅವರ ಕಾದಂಬರಿ ‘ಸಜ್ಜಾದನಾ ಗಣೇಶ’ವನ್ನು ಆಧರಿಸಿತ್ತು. ಅದು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಲ್ಲದೇ ರಷ್ಯಾದ ಮಾಸ್ಕೋ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿತ್ತು.

ಜಯನಗರ 3ನೇ ಬ್ಲಾಕ್ ಪೂರ್ಚ 8ನೇ ಮುಖ್ಯರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಆನೇಕಲ್ ತಾಲೂಕಿನ ಸಮಂದೂರಿನಲ್ಲಿ ಇಂದು ಅಂದರೆ ಮಂಗಳವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ
Image
ಬಣ್ಣದ ಲೋಕದ ಸೆಳೆತದಿಂದ ಗಾಂಧಿನಗರಕ್ಕೆ ಬಂದ ‘ಮಹಾಬಲಿ’; ಹೊಸಬರ ಚಿತ್ರದ ಆಡಿಯೋ ರಿಲೀಸ್​
Image
ಪತಿ, ಮಾವನ ವಿರುದ್ಧ ಪೊಲೀಸರಿಗೆ ದೂರು ಕೊಟ್ಟ ನಟಿ ಚೈತ್ರಾ ಹಳ್ಳಿಕೇರಿ
Image
ಜ್ಯೂ.ಎನ್​ಟಿಆರ್​ ಜತೆ ನಟಿಸೋ ಅವಕಾಶ ಯಾವ ಹೀರೋಯಿನ್​ಗೆ? ಕೇಳಿ ಬರುತ್ತಿದೆ ಹಲವು ಜನಪ್ರಿಯರ ಹೆಸರು
Image
ಶೂಟಿಂಗ್ ವೇಳೆ ನಡೆಯಿತು ಭೀಕರ ಅವಘಡ; ಸಮಂತಾ-ವಿಜಯ್​ ದೇವರಕೊಂಡಗೆ ಗಾಯ

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:03 am, Tue, 24 May 22

Follow Us
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ