Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ಕೇಸ್: ಸೆಲೆಬ್ರಿಟಿಗಳ ಮನೆ ಮೇಲೆ ಪೊಲೀಸ್ ದಾಳಿ; ಡಿಜೆ ವಚನ್​ ಚಿನ್ನಪ್ಪ, ಮಾಡೆಲ್​ ಸೋನಿಯಾ, ಉಧ್ಯಮಿ ಭರತ್​ ವಶಕ್ಕೆ

ಗೋವಿಂದಪುರ ಡ್ರಗ್ಸ್​ ಕೇಸ್​ಗೆ ಸಂಬಂಧಿಸಿದಂತೆ ಪೊಲೀಸರು ಈ ದಾಳಿ ನಡೆಸಿದ್ದಾರೆ. ಸೋನಿಯಾ, ಡಿಜೆ ವಚನ್​ ಚಿನ್ನಪ್ಪ, ಉದ್ಯಮಿ ಭರತ್​ ಮುಂತಾದವರ ಮನೆಯಲ್ಲಿ ಶೋಧಕಾರ್ಯ ನಡೆದಿದೆ.

ಡ್ರಗ್ಸ್ ಕೇಸ್: ಸೆಲೆಬ್ರಿಟಿಗಳ ಮನೆ ಮೇಲೆ ಪೊಲೀಸ್ ದಾಳಿ; ಡಿಜೆ ವಚನ್​ ಚಿನ್ನಪ್ಪ, ಮಾಡೆಲ್​ ಸೋನಿಯಾ, ಉಧ್ಯಮಿ ಭರತ್​ ವಶಕ್ಕೆ
ಡಿಜೆ ವಚನ್​ ಚಿನ್ನಪ್ಪ, ಮಾಡೆಲ್​ ಸೋನಿಯಾ, ಉಧ್ಯಮಿ ಭರತ್​ ಪೊಲೀಸರ ವಶಕ್ಕೆ
Follow us
TV9 Web
| Updated By: ಮದನ್​ ಕುಮಾರ್​

Updated on:Aug 30, 2021 | 12:51 PM

ಚಿತ್ರರಂಗದ ಜೊತೆ ನಂಟು ಹೊಂದಿರುವ ಡ್ರಗ್ಸ್​ ದಂಧೆಯ ಜಾಲ ದೊಡ್ಡದಾಗಿದೆ. ತನಿಖೆ ನಡೆಸಿದಂತೆಲ್ಲ ಹೊಸ ಹೊಸ ಸೆಲೆಬ್ರಿಟಿಗಳ ಹೆಸರುಗಳು ಹೊರಬರುತ್ತಿವೆ. ಸೋಮವಾರ (ಆ.30) ಬೆಳ್ಳಂಬೆಳಗ್ಗೆಯೇ ಬೆಂಗಳೂರಿನಲ್ಲಿ ಸೆಲೆಬ್ರಿಟಿಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಗೋವಿಂದಪುರ ಡ್ರಗ್ಸ್​ ಕೇಸ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ಮಾಡಲಾಗಿದೆ. ಸೋನಿಯಾ​, ಡಿಜೆ ವಚನ್​ ಚಿನ್ನಪ್ಪ, ಉದ್ಯಮಿ ಭರತ್​ ಮುಂತಾದವರ ಮನೆಯ ಮೇಲೆ ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ದಾಳಿ ಮಾಡಿದ್ದಾರೆ.

ಡ್ರಗ್ ಪೆಡ್ಲರ್ ಥಾಮಸ್ ಈ ಹಿಂದೆ ನೀಡಿದ್ದ ಮಾಹಿತಿಯನ್ನು ಆಧರಿಸಿ ಪೊಲೀಸರು ಕಾರ್ಯಾಚರಣೆ ಮಾಡುತ್ತಿದ್ದಾರೆ. ರಾಜಾಜಿನಗರ, ಪದ್ಮನಾಭನಗರ, ಬೆನ್ಸೆನ್ ಟೌನ್ ಮುಂತಾದ ಕಡೆ ಇರುವ ಸೆಲೆಬ್ರಿಟಿಗಳ ಮನೆಯಲ್ಲಿ ಶೋಧ ಕಾರ್ಯ ನಡೆಸಲಾಗಿದೆ. ಕಾರ್ಯಾಚರಣೆ ವೇಳೆ ಮಾದಕ ವಸ್ತುಗಳು ಪತ್ತೆ ಆಗಿದ್ದು, ಹಲವರಿಗೆ  ಬಂಧನ ಭೀತಿ ಎದುರಾಗಿದೆ.

ತಮ್ಮ ಫ್ಲ್ಯಾಟ್‌ನಲ್ಲಿ ಉದ್ಯಮಿ ಭರತ್‌ ಡ್ರಗ್ಸ್ ಪಾರ್ಟಿ ಆಯೋಜಿಸುತ್ತಿದ್ದರು ಎನ್ನಲಾಗಿದೆ. ಸೆಲೆಬ್ರಿಟಿಗಳ ಜೊತೆಗೂ ಅವರು ಸಂಪರ್ಕ ಹೊಂದಿದ್ದರು. ಕಾರ್ಯಚರಣೆ ಬಳಿಕ ಅವರನ್ನು ಗೋವಿಂದಪುರ ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ. ಡ್ರಗ್ಸ್ ಪೆಡ್ಲರ್ ಥಾಮಸ್ ಜೊತೆ ಸಂಪರ್ಕದಲ್ಲಿದ್ದರು ಎಂಬ ಹಿನ್ನೆಲೆಯಲ್ಲಿ ಈ ದಾಳಿ ಮಾಡಲಾಗಿದೆ. ಡಿಜೆ ವಚನ್​ ಚಿನ್ನಪ್ಪ ಮನೆಯಲ್ಲಿ 50 ಗ್ರಾಂ ಗಾಂಜಾ ಪತ್ತೆ ಆಗಿದ್ದು, ಅವರನ್ನೂ ವಶಕ್ಕೆ ಪಡೆಯಲಾಗಿದೆ.

ಸೋನಿಯಾ ನಿವಾಸದಲ್ಲಿ ಪೊಲೀಸರಿಗೆ 40 ಗ್ರಾಂ ಗಾಂಜಾ ಪತ್ತೆ ಆಗಿದೆ. ಬೆಂಗಳೂರಿನ ರಾಜಾಜಿನಗರದಲ್ಲಿರುವ ಮನೆ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ ಸೋನಿಯಾ ಇರಲಿಲ್ಲ. ನಾಪತ್ತೆ ಆಗಿದ್ದ ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದರು. ಖಾಸಗಿ ಹೋಟೆಲ್​ನ ವಾಶ್​ರೂಮ್​ನಲ್ಲಿ ಅವಿತು ಕುಳಿತಿದ್ದ ಅವರನ್ನು ನಂತರ ಪೊಲೀಸರು ವಶಕ್ಕೆ ಪಡೆದುಕೊಂಡರು. ಈ ಮೂವರನ್ನೂ ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವ ಸಾಧ್ಯತೆ ಇದೆ.

ಇದನ್ನೂ ಓದಿ:

ಡ್ರಗ್ಸ್​ ಕೇಸ್​: ರಾಣಾ ದಗ್ಗುಬಾಟಿ, ರಾಕುಲ್, ರವಿತೇಜ ಸೇರಿ ಟಾಲಿವುಡ್​ನ 8 ಸೆಲೆಬ್ರಿಟಿಗಳಿಗೆ ಇಡಿ ಸಮನ್ಸ್​

Armaan Kohli: ಡ್ರಗ್ಸ್​ ಕೇಸ್​ ಆರೋಪಿ ಅರ್ಮಾನ್​ ಕೊಹ್ಲಿ ಯಾರು? ಹಿನ್ನೆಲೆ ಏನು? ಮಾಡಿಕೊಂಡ ವಿವಾದ ಒಂದೆರಡಲ್ಲ

Published On - 9:04 am, Mon, 30 August 21

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ