AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drug ಕೇಸ್​ ಆಗಿರೋದ್ರಿಂದ ಸಹ ಕೈದಿಗಳಿಂದ ಗಲಾಟೆ ಸಾಧ್ಯತೆ, ಬಿಗಿ ಭದ್ರತೆ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ ಹಿನ್ನೆಲೆಯಲ್ಲಿ ನಟಿ ರಾಗಿಣಿ ಆ್ಯಂಡ್ ಟೀಂ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಆಗಲಿದ್ದಾರೆ. ಆದರೆ, ನಟಿ ಸಂಜನಾ ಗಲ್ರಾನಿನ ಸಿಸಿಬಿ ವಶಕ್ಕೆ ಕೇಳಿರುವ ಹಿನ್ನೆಲೆಯಲ್ಲಿ 1ನೇ ಎಸಿಎಂಎಂ ಕೋರ್ಟ್ ಜಡ್ಜ್ ಆದೇಶ ಕಾಯ್ದಿರಿಸಿದ್ದಾರೆ. ನ್ಯಾಯಾಂಗ ಬಂಧನಕ್ಕೆ ಒಳಗಾದ ರಾಗಿಣಿ ಆ್ಯಂಡ್ ಟೀಂ ವಿಚಾರಣಾಧೀನ ಖೈದಿಗಳಾಗಿ ಜೈಲಿನಲ್ಲಿ ಇರಲಿದ್ದಾರೆ. ಪ್ರತಿಯೊಬ್ಬರಿಗೂ ಪ್ರತ್ಯೇಕವಾದ ವಿಚಾರಣಧೀನ ಖೈದಿ ನಂಬರ್ ನೀಡಲಾಗುತ್ತದೆ. ಜೊತೆಗೆ, ಎಲ್ಲಾ ಆರೋಪಿಗಳು […]

Drug ಕೇಸ್​ ಆಗಿರೋದ್ರಿಂದ ಸಹ ಕೈದಿಗಳಿಂದ ಗಲಾಟೆ ಸಾಧ್ಯತೆ, ಬಿಗಿ ಭದ್ರತೆ
KUSHAL V
| Updated By: ಸಾಧು ಶ್ರೀನಾಥ್​|

Updated on: Sep 14, 2020 | 5:51 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ ಹಿನ್ನೆಲೆಯಲ್ಲಿ ನಟಿ ರಾಗಿಣಿ ಆ್ಯಂಡ್ ಟೀಂ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಆಗಲಿದ್ದಾರೆ. ಆದರೆ, ನಟಿ ಸಂಜನಾ ಗಲ್ರಾನಿನ ಸಿಸಿಬಿ ವಶಕ್ಕೆ ಕೇಳಿರುವ ಹಿನ್ನೆಲೆಯಲ್ಲಿ 1ನೇ ಎಸಿಎಂಎಂ ಕೋರ್ಟ್ ಜಡ್ಜ್ ಆದೇಶ ಕಾಯ್ದಿರಿಸಿದ್ದಾರೆ.

ನ್ಯಾಯಾಂಗ ಬಂಧನಕ್ಕೆ ಒಳಗಾದ ರಾಗಿಣಿ ಆ್ಯಂಡ್ ಟೀಂ ವಿಚಾರಣಾಧೀನ ಖೈದಿಗಳಾಗಿ ಜೈಲಿನಲ್ಲಿ ಇರಲಿದ್ದಾರೆ. ಪ್ರತಿಯೊಬ್ಬರಿಗೂ ಪ್ರತ್ಯೇಕವಾದ ವಿಚಾರಣಧೀನ ಖೈದಿ ನಂಬರ್ ನೀಡಲಾಗುತ್ತದೆ. ಜೊತೆಗೆ, ಎಲ್ಲಾ ಆರೋಪಿಗಳು ಸಾಮಾನ್ಯ ಖೈದಿಗಳಂತೆ ಜೈಲಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಮಹಿಳಾ ಬ್ಯಾರಕ್​ನಲ್ಲಿ ರಾಗಿಣಿ ತಂಗಲಿದ್ದು ಇನ್ನುಳಿದ ಪುರುಷ ಆರೋಪಿಗಳನ್ನು ಪುರಷರ ಬ್ಯಾರಕ್​ನಲ್ಲಿ ಇರಿಸಲಾಗುವುದು. ಸದ್ಯ ಕೊವಿಡ್ ಇರೋದ್ರಿಂದ ಪ್ರತ್ಯೇಕವಾಗಿರುವ ಕೊಠಡಿ ನೀಡುವ ಸಾಧ್ಯತೆಯಿದೆ. ಪ್ರತ್ಯೇಕವಾಗಿರುವ ಕೊಠಡಿ ಹೊರತು ಪಡಿಸಿದರೆ ಇನ್ನುಳಿದ ಎಲ್ಲಾ ಸೌಲಭ್ಯಗಳು ಸಹ ಖೈದಿಗಳಿಗೆ ಇದ್ದಂತೆ ಇರಲಿದೆ. ಜೈಲಿನ ಅಧಿಕಾರಿಗಳು ಊಟ, ತಿಂಡಿ ಹಾಗೂ ಎಲ್ಲಾ ವ್ಯವಸ್ಥೆ ಸಹ ಬೇರೆ ಖೈದಿಗಳಂತೆ ನೀಡಲಿದ್ದಾರೆ. ಪ್ರತ್ಯೇಕವಾಗಿ ಕೊಠಡಿಯಲ್ಲಿ ಇರೋದ್ರಿಂದ ಆ ಕೊಠಡಿಗೆ ಪೊಲೀಸ್ ಸಿಬ್ಬಂದಿಗಳ ನಿಯೋಜನೆ ಸಹ ಮಾಡಲಾಗತ್ತೆ. ನಟಿ ರಾಗಿಣಿ ಡಗ್ಸ್ ಕೇಸ್​ನಲ್ಲಿ ಭಾಗಿ ಆಗಿರೋದ್ರಿಂದ ಸಹ ಖೈದಿಗಳಿಂದ ಹಲ್ಲೆ ಮತ್ತು ಗಲಾಟೆ ನಡೆಯುವ ಸಾಧ್ಯತೆ ಇರುತ್ತದೆ. ಹೀಗಾಗಿ, ಪೊಲೀಸ್ ಸಿಬ್ಬಂದಿಯ ನಿಯೋಜನೆ ಮಾಡಲಾಗುವುದು.

ಒಂದು ವೇಳೆ ರಾಗಿಣಿಯ ಕುಟುಂಬಸ್ಥರು ಆಕೆಯನ್ನ ನೋಡೋದಕ್ಕೆ ಬಂದರೆ ನೋ ಎಂಟ್ರಿ. ಯಾಕಂದ್ರೆ, ಕೊವಿಡ್ ಇರೋದ್ರಿಂದ ಯಾರಿಗೂ ಯಾವುದೇ ಕಾರಣಕ್ಕು ಒಳ ಪ್ರವೇಶ ಇರೋದಿಲ್ಲ. ಆರೋಪಿಗಳ ವಕೀಲರಿಗೂ ಕೂಡ ನೋ ಎಂಟ್ರಿ. ಹಾಗಾಗಿ, ನ್ಯಾಯಾಂಗ ಬಂಧನದ ಅವಧಿ ಮುಗಿಯುವವರೆಗೂ ನಟಿ ತನ್ನ ಕುಟುಂಬದವರನ್ನು ಮೀಸ್ ಮಾಡಿಕೊಳ್ಳಲಿದ್ದಾರೆ.

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ