AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬರೀಷ್ ಜೊತೆ 27 ಸಿನಿಮಾ ಮಾಡಿದ್ದ ಖ್ಯಾತ ನಿರ್ದೇಶಕ ಎಟಿ ರಘು ನಿಧನ

ಖ್ಯಾತ ಕನ್ನಡ ಚಿತ್ರ ನಿರ್ದೇಶಕ ಎ.ಟಿ. ರಘು ಅವರು 76 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. 'ಮಂಡ್ಯದ ಗಂಡು' ಸೇರಿದಂತೆ 55ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದ ಅವರು ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ನಿಧನದಿಂದ ಚಿತ್ರರಂಗ ಶೋಕ ಸಾಗರದಲ್ಲಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಿನಿಪ್ರಿಯರು ಪ್ರಾರ್ಥಿಸಿದ್ದಾರೆ.

ಅಂಬರೀಷ್ ಜೊತೆ 27 ಸಿನಿಮಾ ಮಾಡಿದ್ದ ಖ್ಯಾತ ನಿರ್ದೇಶಕ ಎಟಿ ರಘು ನಿಧನ
ರಘು-ಅಂಬರೀಷ್
ರಾಜೇಶ್ ದುಗ್ಗುಮನೆ
|

Updated on: Mar 21, 2025 | 7:34 AM

Share

ಸ್ಯಾಂಡಲ್​ವುಡ್​ಗೆ ಶುಕ್ರವಾರವೇ ಒಂದು ಶಾಕಿಂಗ್ ಸುದ್ದಿ ಸಿಕ್ಕಿದೆ. ಸಿನಿಮಾಗಳು ರಿಲೀಸ್ ಶುಭ ಶುಕ್ರವಾರದ ಆರಂಭಕ್ಕೂ ಮೊದಲೇ ಸ್ಯಾಂಡಲ್​ವುಡ್​ನ ಖ್ಯಾತ ನಿರ್ದೇಶಕ ಎಟಿ ರಘು (AT Raghu) ನಿಧನ ಹೊಂದಿದ್ದಾರೆ. ‘ಮಂಡ್ಯದ ಗಂಡು’ ಸೇರಿದಂತೆ ಒಟ್ಟು 55 ಸಿನಿಮಾಗಳನ್ನು ಎಟಿ ರಘು ಅವರು ನಿರ್ದೇಶನ ಮಾಡಿದ್ದರು. ಅವರ ನಿಧನ ವಾರ್ತೆ ತಿಳಿದು ಚಿತ್ರರಂಗದ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಿನಿಪ್ರಿಯರು ಕೋರಿದ್ದಾರೆ.

ರಘು ಅವರಿಗೆ 76 ವರ್ಷ ವಯಸ್ಸಾಗಿತ್ತು. ಗುರುವಾರ (ಮಾರ್ಚ್​ 20) ರಾತ್ರಿ ಅವರು ನಿಧನ ಹೊಂದಿದ್ದಾರೆ. ತೀವ್ರ ಅನಾರೋಗ್ಯದಿಂದ ರಘು ಬಳಲುತ್ತಾ ಇದ್ದರು. ನಿರಂತರವಾಗಿ ಅವರು ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು. ಸದ್ಯ ಬೆಂಗಳೂರಿನ ಆರ್​ಟಿ ನಗರದ ಮಠದಹಳ್ಳಿಯಲ್ಲಿ ಅವರ ಪಾರ್ಥಿವ ಶರೀರ ಇಡಲಾಗಿದೆ. ಇಂದು (ಮಾರ್ಚ್ 21) ಮದ್ಯಾಹ್ನ 2 ಗಂಟೆ ಬಳಿಕ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಅವರು ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ.

ಎಟಿ ರಘು ಅವರು ಹುಟ್ಟಿದ್ದು ಕೊಡಗಿನಲ್ಲಿ. ಕೊಡವ ಸಮುದಾಯಕ್ಕೆ ಸೇರಿದ ಅವರು ಚಿತ್ರರಂಗದ ಬಗ್ಗೆ ಆಸಕ್ತಿ ಬೆಳೆಸಿಕೊಂಡರು. ಚಿತ್ರರಂಗದಲ್ಲಿ ನಿರ್ದೇಶಕನಾಗಿ, ನಿರ್ಮಾಪಕರನಾಗಿ, ಚಿತ್ರಕಥೆ ಬರಹಗಾರನಾಗಿ ಗುರುತಿಸಿಕೊಂಡರು. ಅವರು ಕನ್ನಡ ಮಾತ್ರವಲ್ಲದೆ ಹಿಂದಿಯಲ್ಲೂ ಸಿನಿಮಾ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ
Image
ವಿಚ್ಛೇದನ ಪಡೆದ ದಿನ ಹಾಡಿನ ಮೂಲಕ ಅನೈತಿಕ ಸಂಬಂಧದ ಬಗ್ಗೆ ಮಾತನಾಡಿದ ಧನಶ್ರೀ
Image
ಬೆಟ್ಟಿಂಗ್​ಗೆ ಪ್ರಚಾರ: ಪ್ರಕಾಶ್ ರೈ, ವಿಜಯ್ ಸೇರಿ ಹಲವು ನಟರ ಮೇಲೆ ಪ್ರಕರಣ
Image
ಬರ್ತಿದೆ ‘ಚಿ: ಸೌಜನ್ಯ’ ಸಿನಿಮಾ; ನೈಜ ಘಟನೆ ಹೇಳ ಹೊರಟ ಹರ್ಷಿಕಾ
Image
ಒಟಿಟಿಯಲ್ಲಿ ಕಾಲೇಜ್ ಕಹಾನಿ ಕಥೆ; ಫನ್​ ಇರೋ ಸಿನಿಮಾನ ಮಿಸ್ ಮಾಡಬೇಡಿ

1980ರಲ್ಲಿ ರಿಲೀಸ್ ಆದ ‘ನ್ಯಾಯ ನೀತಿ ಧರ್ಮ’ ಅವರ ನಿರ್ದೇಶನದ ಮೊದಲ ಸಿನಿಮಾ. ಅಂಬರೀಷ್, ಆರತಿ, ದ್ವಾರಕೀಶ್ ಅವರು ಚಿತ್ರದಲ್ಲಿ ನಟಿಸಿದರು. ಈ ಸಿನಿಮಾ ಮೂಲಕ ಅಂಬರೀಷ್ ಜೊತೆ ರಘು ಅವರಿಗೆ ಒಳ್ಳೆಯ ಒಡನಾಟ ಬೆಳೆಯಿತು. ಅಂಬರೀಷ್ ನಟನೆಯ ‘ಆಶ’, ‘ಅವಳ ನೆರಳು’, ‘ಮಂಡ್ಯದ ಗಂಡು’, ‘ಮಿಡಿದ ಹೃದಯಗಳು’ ಸೇರಿ 27 ಸಿನಿಮಾಗಳನ್ನು ರಘು ನಿರ್ದೇಶನ ಮಾಡಿದ್ದರು ಅನ್ನೋದು ವಿಶೇಷ.

ಇದನ್ನೂ ಓದಿ: ವಿಚ್ಛೇದನ ಪಡೆದ ದಿನವೇ ಹಾಡಿನ ಮೂಲಕ ಪತಿಯ ಅನೈತಿಕ ಸಂಬಂಧದ ಬಗ್ಗೆ ಹೇಳಿದ ಧನಶ್ರೀ ವರ್ಮಾ

ರಘು ಅವರು ಹಿಂದಿ, ಮಲಯಾಳಂ ಚಿತ್ರರಂಗದಲ್ಲೂ ಕೆಲಸ ಮಾಡಿದ್ದಾರೆ. ‘ಆಶ’ ಚಿತ್ರವನ್ನು ಅವರು ಹಿಂದಿಗೆ ‘ಮೆರಿ ಅದಾಲತ್’ ಹೆಸರಿನಲ್ಲಿ ರಿಮೇಕ್ ಮಾಡಿದರು. ಇದರಲ್ಲಿ ರಜನಿಕಾಂತ್ ಅವರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾ 1984ರಲ್ಲಿ ರಿಲೀಸ್ ಆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ