AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ ಯುವ ನಟ, ನಿರ್ಮಾಪಕ ಕೊರೊನಾಗೆ ಬಲಿ

ಮಂಜುನಾಥ್​ ಕನ್ನಡದಲ್ಲಿ ಭಿನ್ನ ರೀತಿಯ ಸಿನಿಮಾಗಳನ್ನು ನಿರ್ಮಿಸಬೇಕು ಎನ್ನುವ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದರು. ಭವಿಷ್ಯದಲ್ಲೂ ಸಾಕಷ್ಟು  ಸಿನಿಮಾಗಳನ್ನು ನಿರ್ಮಿಸುವ ಉದ್ದೇಶ ಹೊಂದಿದ್ದರು. 

ಸ್ಯಾಂಡಲ್​ವುಡ್​ ಯುವ ನಟ, ನಿರ್ಮಾಪಕ ಕೊರೊನಾಗೆ ಬಲಿ
ಮೃತ ಮಂಜುನಾಥ್​
ರಾಜೇಶ್ ದುಗ್ಗುಮನೆ
|

Updated on:Apr 18, 2021 | 6:22 PM

Share

ಕೊರೊನಾ ವೈರಸ್​ ಎರಡನೇ ಅಲೆ ಮಿತಿಮೀರಿ ಹರಡುತ್ತಿದೆ. ಕರ್ನಾಟಕದಲ್ಲಿ ನಿನ್ನೆ (ಏಪ್ರಿಲ್​ 17) ಒಂದೇ ದಿನ 17 ಸಾವಿರ ಹೊಸ ಕೊರೊನಾ ಕೇಸ್​ಗಳು ಬಂದರೆ, ಭಾರತದಲ್ಲಿ ಇಂದು (ಏಪ್ರಿಲ್​ 18) 2.61 ಲಕ್ಷ ಕೊವಿಡ್​​ ಕೇಸ್​ಗಳು ಪತ್ತೆ ಆಗಿವೆ. ಇದು ಸಾಕಷ್ಟು ಆತಂಕಕ್ಕೆ ಕಾರಣವಾಗುತ್ತಿದೆ. ಹೀಗಿರುವಾಗಲೇ ಸ್ಯಾಂಡಲ್​ವುಡ್​ ಯುವ ನಟ ಹಾಗೂ ನಿರ್ಮಾಪಕ ಡಾ. ಡಿ.ಎಸ್. ಮಂಜುನಾಥ್ ಮೃತಪಟ್ಟಿದ್ದಾರೆ. ‘ಕೆಮಿಸ್ಟ್ರಿ ಆಫ್ ಕರಿಯಪ್ಪ’, ‘ಸಂಯುಕ್ತ-2’ ಸಿನಿಮಾಗಳಿಗೆ ಮಂಜುನಾಥ್​ ಬಂಡವಾಳ ಹೂಡಿದ್ದರು. 2019ರಲ್ಲಿ ತೆರೆಕಂಡಿದ್ದ ಹಾಸ್ಯ ಭರಿತ ಕೆಮಿಸ್ಟ್ರಿ ಆಫ್​ ಕರಿಯಪ್ಪ ಸಿನಿಮಾ ಮೆಚ್ಚುಗೆ ಪಡೆದುಕೊಂಡಿತ್ತು. ಈಗ 0%ಲವ್ ಸಿನಿಮಾವನ್ನು ನಿರ್ಮಿಸಿ, ಅದರಲ್ಲಿ ನಟಿಸುತ್ತಿದ್ದರು. ಆದರೆ, ಕೊರೊನಾ ಕಾರಣದಿಂದ ಸಿನಿಮಾ ಕೆಲಸಗಳನ್ನು ಮುಂದೂಡಲಾಗಿತ್ತು. ಈಗ ಈ ಸಿನಿಮಾ ಪೂರ್ಣಗೊಳ್ಳುವುದರೊಳಗೆ ಅವರು ಮೃತಪಟ್ಟಿದ್ದಾರೆ.

ಮಂಜುನಾಥ್​ ಕನ್ನಡದಲ್ಲಿ ಭಿನ್ನ ರೀತಿಯ ಸಿನಿಮಾಗಳನ್ನು ನಿರ್ಮಿಸಬೇಕು ಎನ್ನುವ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದರು. ಭವಿಷ್ಯದಲ್ಲೂ ಸಾಕಷ್ಟು  ಸಿನಿಮಾಗಳನ್ನು ನಿರ್ಮಿಸುವ ಉದ್ದೇಶ ಹೊಂದಿದ್ದರು.

ರಾಜ್ಯದಲ್ಲಿಂದು ಶನಿವಾರ (ಏಪ್ರಿಲ್​ 18) 17,489 ಜನರಿಗೆ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11,41,998ಕ್ಕೆ (11.41 ಲಕ್ಷ) ಏರಿಕೆಯಾಗಿದೆ. ರಾಜ್ಯದಲ್ಲಿಂದು ಒಂದೇ ದಿನ ಕೊರೊನಾಗೆ 80 ಜನರ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 13,270 ಜನರು ಸಾವನ್ನಪ್ಪಿದ್ದಾರೆ. ಸೋಂಕಿತರ ಪೈಕಿ 10,09,549 ಜನರು ಗುಣಮುಖರಾಗಿ ಡಿಸ್​ಚಾರ್ಜ್​ ಆಗಿದ್ದಾರೆ. 1,19,160 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ:  Corona Deaths In Karnataka : ಕರ್ನಾಟಕದಲ್ಲಿ ಕೊರೊನಾ ಸೋಂಕಿನಿಂದ 78 ಜನರ ಸಾವು.!

ಕರ್ನಾಟಕದಲ್ಲಿ ಸಮುದಾಯಕ್ಕೆ ಕೊರೊನಾ ಸೋಂಕು: ಡಾ.ಕೆ.ಸುಧಾಕರ್

Published On - 5:25 pm, Sun, 18 April 21

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ