AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಚನೆ ಆರೋಪ; ಸ್ಯಾಂಡಲ್​ವುಡ್​ ನಿರ್ಮಾಪಕನಿಗೆ 5 ಕೋಟಿ ದಂಡ, ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್​

2.90 ಕೋಟಿ ರೂಪಾಯಿ ಹಣವನ್ನು ಸುಧಾಕರ್​ ಹಾಸನದ ಉದ್ಯಮಿಯಿಂದ ಸಾಲವಾಗಿ ತೆಗೆದುಕೊಂಡಿದ್ದರು.  ಬಡಾವಣೆ ನಿರ್ಮಾಣ ಮಾಡುವುದಾಗಿ ಇಷ್ಟು ದೊಡ್ಡ ಮೊತ್ತದ ಹಣವನ್ನು ಸುಧಾಕರ್ ಪಡೆದುಕೊಂಡಿದ್ದರು.

ವಂಚನೆ ಆರೋಪ; ಸ್ಯಾಂಡಲ್​ವುಡ್​ ನಿರ್ಮಾಪಕನಿಗೆ 5 ಕೋಟಿ ದಂಡ, ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್​
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 01, 2021 | 2:39 PM

Share

ಸ್ಯಾಂಡಲ್​ವುಡ್​ನಲ್ಲಿ ‘ ‘ಕಥಾ ವಿಚಿತ್ರ’, ‘ಹುಲಿ ದುರ್ಗ’ ಮೊದಲಾದ ಚಿತ್ರಗಳನ್ನು ನಿರ್ಮಿಸಿರುವ ನಿರ್ಮಾಪಕ ಕೆ. ಸುಧಾಕರ್ ವಿರುದ್ಧ ವಂಚನೆ ಆರೋಪ ಕೇಳಿ ಬಂದಿತ್ತು. ಇದು ಕೋರ್ಟ್​ನಲ್ಲಿ ಸಾಬೀತಾಗಿತ್ತು. ಇದನ್ನು ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ಸುಧಾಕರ್​ ಪ್ರಶ್ನಿಸಿದ್ದರು. ಆದರೆ, ಈಗ ಈ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಈ ಹಿನ್ನೆಲೆಯಲ್ಲಿ ಸುಧಾಕರ್​ ಐದು ಕೋಟಿ ಪರಿಹಾರ ನೀಡುವುದರ ಜತೆಗೆ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಿದೆ.

2.90 ಕೋಟಿ ರೂಪಾಯಿ ಹಣವನ್ನು ಸುಧಾಕರ್​ ಹಾಸನದ ಉದ್ಯಮಿಯಿಂದ ಸಾಲವಾಗಿ ತೆಗೆದುಕೊಂಡಿದ್ದರು.  ಬಡಾವಣೆ ನಿರ್ಮಾಣ ಮಾಡುವುದಾಗಿ ಇಷ್ಟು ದೊಡ್ಡ ಮೊತ್ತದ ಹಣವನ್ನು ಸುಧಾಕರ್ ಪಡೆದುಕೊಂಡಿದ್ದರು. ಆದರೆ, ಅವರು ಈ ಹಣವನ್ನು ಹೂಡಿಕೆ ಮಾಡಿದ್ದು ಸಿನಿಮಾ ಮೇಲೆ. ಆದರೆ, ಯಾವ ಸಿನಿಮಾವೂ ಕೈ ಹಿಡಿಯಲಿಲ್ಲ.

ಕೆಲ ತಿಂಗಳ ನಂತರ ಸುಧಾಕರ್​ ಬಳಿ ಹಣ ಹಿಂದಿರುಗಿಸುವಂತೆ ಉದ್ಯಮಿ ಕೇಳಿದ್ದರು. ಆದರೆ, ಹಣ ನೀಡದೇ ಸುಧಾಕರ್ ಸತಾಯಿಸಿದ್ದರು. ಕೊನೆಗೆ ಈ ಪ್ರಕರಣದಲ್ಲಿ ರಾಜಿ ಮಾತುಕತೆ ನಡೆದಿತ್ತು. ಈ ವೇಳೆ ಉದ್ಯಮಿಗೆ ಸುಧಾಕರ್​ ಚೆಕ್​ ನೀಡಿದ್ದರು. ಈ ಚೆಕ್​ ಬ್ಯಾಂಕ್​ಗೆ ಹಾಕಿದಾಗ ಬೌನ್ಸ್ ಆಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತ ಉದ್ಯಮಿ, ಪರಿಹಾರಕ್ಕಾಗಿ ಹಾಸನದ ನಾಲ್ಕನೇ ಜೆ‌ಎಂಎಫ್​ಸಿ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. 2020ರ ಜನವರಿ 27ರಂದು ಈ ಪ್ರಕರಣವನ್ನು ವಿಚಾರಣೆ ನಡೆಸಿದ ಕೋರ್ಟ್ ಸುಧಾಕರ್​ಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ, ಐದು ಕೋಟಿ ಪರಿಹಾರ ನೀಡಲು ಆದೇಶ ಹೊರಡಿಸಿತ್ತು. ಈ ಆದೇಶ ಪ್ರಶ್ನಿಸಿ ಸುಧಾಕರ್​ ಜಿಲ್ಲಾ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಅವರ ಮೇಲ್ಮನವಿ ವಜಾಗೊಳಿಸಿದ ನ್ಯಾಯಾಲಯ ಶಿಕ್ಷೆ ಖಾಯಂ ಮಾಡಿದೆ. ಈಗ ಸುಧಾಕರ್​ ಶಿಕ್ಷೆ ಅನುಭವಿಸುವುದರ ಜತೆಗೆ ಐದು ಕೋಟಿ ಪರಿಹಾರವನ್ನು ಉದ್ಯಮಿಗೆ ನೀಡಬೇಕಿದೆ.

ಇದನ್ನೂ ಓದಿ: ಭಾನುವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವ ಸ್ಪರ್ಧಿ ಇವರೇನಾ?

ಬಿಗ್​ ಬಾಸ್​ ಎಲಿಮಿನೇಷನ್​ನಲ್ಲಿ ಟ್ವಿಸ್ಟ್​; ಶನಿವಾರವೇ ಹೊರ ಬಿದ್ದ ಶುಭಾ ಪೂಂಜಾ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ