AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಚನೆ ಆರೋಪ; ಸ್ಯಾಂಡಲ್​ವುಡ್​ ನಿರ್ಮಾಪಕನಿಗೆ 5 ಕೋಟಿ ದಂಡ, ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್​

2.90 ಕೋಟಿ ರೂಪಾಯಿ ಹಣವನ್ನು ಸುಧಾಕರ್​ ಹಾಸನದ ಉದ್ಯಮಿಯಿಂದ ಸಾಲವಾಗಿ ತೆಗೆದುಕೊಂಡಿದ್ದರು.  ಬಡಾವಣೆ ನಿರ್ಮಾಣ ಮಾಡುವುದಾಗಿ ಇಷ್ಟು ದೊಡ್ಡ ಮೊತ್ತದ ಹಣವನ್ನು ಸುಧಾಕರ್ ಪಡೆದುಕೊಂಡಿದ್ದರು.

ವಂಚನೆ ಆರೋಪ; ಸ್ಯಾಂಡಲ್​ವುಡ್​ ನಿರ್ಮಾಪಕನಿಗೆ 5 ಕೋಟಿ ದಂಡ, ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್​
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 01, 2021 | 2:39 PM

Share

ಸ್ಯಾಂಡಲ್​ವುಡ್​ನಲ್ಲಿ ‘ ‘ಕಥಾ ವಿಚಿತ್ರ’, ‘ಹುಲಿ ದುರ್ಗ’ ಮೊದಲಾದ ಚಿತ್ರಗಳನ್ನು ನಿರ್ಮಿಸಿರುವ ನಿರ್ಮಾಪಕ ಕೆ. ಸುಧಾಕರ್ ವಿರುದ್ಧ ವಂಚನೆ ಆರೋಪ ಕೇಳಿ ಬಂದಿತ್ತು. ಇದು ಕೋರ್ಟ್​ನಲ್ಲಿ ಸಾಬೀತಾಗಿತ್ತು. ಇದನ್ನು ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ಸುಧಾಕರ್​ ಪ್ರಶ್ನಿಸಿದ್ದರು. ಆದರೆ, ಈಗ ಈ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಈ ಹಿನ್ನೆಲೆಯಲ್ಲಿ ಸುಧಾಕರ್​ ಐದು ಕೋಟಿ ಪರಿಹಾರ ನೀಡುವುದರ ಜತೆಗೆ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಿದೆ.

2.90 ಕೋಟಿ ರೂಪಾಯಿ ಹಣವನ್ನು ಸುಧಾಕರ್​ ಹಾಸನದ ಉದ್ಯಮಿಯಿಂದ ಸಾಲವಾಗಿ ತೆಗೆದುಕೊಂಡಿದ್ದರು.  ಬಡಾವಣೆ ನಿರ್ಮಾಣ ಮಾಡುವುದಾಗಿ ಇಷ್ಟು ದೊಡ್ಡ ಮೊತ್ತದ ಹಣವನ್ನು ಸುಧಾಕರ್ ಪಡೆದುಕೊಂಡಿದ್ದರು. ಆದರೆ, ಅವರು ಈ ಹಣವನ್ನು ಹೂಡಿಕೆ ಮಾಡಿದ್ದು ಸಿನಿಮಾ ಮೇಲೆ. ಆದರೆ, ಯಾವ ಸಿನಿಮಾವೂ ಕೈ ಹಿಡಿಯಲಿಲ್ಲ.

ಕೆಲ ತಿಂಗಳ ನಂತರ ಸುಧಾಕರ್​ ಬಳಿ ಹಣ ಹಿಂದಿರುಗಿಸುವಂತೆ ಉದ್ಯಮಿ ಕೇಳಿದ್ದರು. ಆದರೆ, ಹಣ ನೀಡದೇ ಸುಧಾಕರ್ ಸತಾಯಿಸಿದ್ದರು. ಕೊನೆಗೆ ಈ ಪ್ರಕರಣದಲ್ಲಿ ರಾಜಿ ಮಾತುಕತೆ ನಡೆದಿತ್ತು. ಈ ವೇಳೆ ಉದ್ಯಮಿಗೆ ಸುಧಾಕರ್​ ಚೆಕ್​ ನೀಡಿದ್ದರು. ಈ ಚೆಕ್​ ಬ್ಯಾಂಕ್​ಗೆ ಹಾಕಿದಾಗ ಬೌನ್ಸ್ ಆಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತ ಉದ್ಯಮಿ, ಪರಿಹಾರಕ್ಕಾಗಿ ಹಾಸನದ ನಾಲ್ಕನೇ ಜೆ‌ಎಂಎಫ್​ಸಿ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. 2020ರ ಜನವರಿ 27ರಂದು ಈ ಪ್ರಕರಣವನ್ನು ವಿಚಾರಣೆ ನಡೆಸಿದ ಕೋರ್ಟ್ ಸುಧಾಕರ್​ಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ, ಐದು ಕೋಟಿ ಪರಿಹಾರ ನೀಡಲು ಆದೇಶ ಹೊರಡಿಸಿತ್ತು. ಈ ಆದೇಶ ಪ್ರಶ್ನಿಸಿ ಸುಧಾಕರ್​ ಜಿಲ್ಲಾ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಅವರ ಮೇಲ್ಮನವಿ ವಜಾಗೊಳಿಸಿದ ನ್ಯಾಯಾಲಯ ಶಿಕ್ಷೆ ಖಾಯಂ ಮಾಡಿದೆ. ಈಗ ಸುಧಾಕರ್​ ಶಿಕ್ಷೆ ಅನುಭವಿಸುವುದರ ಜತೆಗೆ ಐದು ಕೋಟಿ ಪರಿಹಾರವನ್ನು ಉದ್ಯಮಿಗೆ ನೀಡಬೇಕಿದೆ.

ಇದನ್ನೂ ಓದಿ: ಭಾನುವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವ ಸ್ಪರ್ಧಿ ಇವರೇನಾ?

ಬಿಗ್​ ಬಾಸ್​ ಎಲಿಮಿನೇಷನ್​ನಲ್ಲಿ ಟ್ವಿಸ್ಟ್​; ಶನಿವಾರವೇ ಹೊರ ಬಿದ್ದ ಶುಭಾ ಪೂಂಜಾ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ