AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಚನೆ ಆರೋಪ; ಸ್ಯಾಂಡಲ್​ವುಡ್​ ನಿರ್ಮಾಪಕನಿಗೆ 5 ಕೋಟಿ ದಂಡ, ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್​

2.90 ಕೋಟಿ ರೂಪಾಯಿ ಹಣವನ್ನು ಸುಧಾಕರ್​ ಹಾಸನದ ಉದ್ಯಮಿಯಿಂದ ಸಾಲವಾಗಿ ತೆಗೆದುಕೊಂಡಿದ್ದರು.  ಬಡಾವಣೆ ನಿರ್ಮಾಣ ಮಾಡುವುದಾಗಿ ಇಷ್ಟು ದೊಡ್ಡ ಮೊತ್ತದ ಹಣವನ್ನು ಸುಧಾಕರ್ ಪಡೆದುಕೊಂಡಿದ್ದರು.

ವಂಚನೆ ಆರೋಪ; ಸ್ಯಾಂಡಲ್​ವುಡ್​ ನಿರ್ಮಾಪಕನಿಗೆ 5 ಕೋಟಿ ದಂಡ, ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್​
ಸಾಂದರ್ಭಿಕ ಚಿತ್ರ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 01, 2021 | 2:39 PM

Share

ಸ್ಯಾಂಡಲ್​ವುಡ್​ನಲ್ಲಿ ‘ ‘ಕಥಾ ವಿಚಿತ್ರ’, ‘ಹುಲಿ ದುರ್ಗ’ ಮೊದಲಾದ ಚಿತ್ರಗಳನ್ನು ನಿರ್ಮಿಸಿರುವ ನಿರ್ಮಾಪಕ ಕೆ. ಸುಧಾಕರ್ ವಿರುದ್ಧ ವಂಚನೆ ಆರೋಪ ಕೇಳಿ ಬಂದಿತ್ತು. ಇದು ಕೋರ್ಟ್​ನಲ್ಲಿ ಸಾಬೀತಾಗಿತ್ತು. ಇದನ್ನು ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ಸುಧಾಕರ್​ ಪ್ರಶ್ನಿಸಿದ್ದರು. ಆದರೆ, ಈಗ ಈ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಈ ಹಿನ್ನೆಲೆಯಲ್ಲಿ ಸುಧಾಕರ್​ ಐದು ಕೋಟಿ ಪರಿಹಾರ ನೀಡುವುದರ ಜತೆಗೆ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಿದೆ.

2.90 ಕೋಟಿ ರೂಪಾಯಿ ಹಣವನ್ನು ಸುಧಾಕರ್​ ಹಾಸನದ ಉದ್ಯಮಿಯಿಂದ ಸಾಲವಾಗಿ ತೆಗೆದುಕೊಂಡಿದ್ದರು.  ಬಡಾವಣೆ ನಿರ್ಮಾಣ ಮಾಡುವುದಾಗಿ ಇಷ್ಟು ದೊಡ್ಡ ಮೊತ್ತದ ಹಣವನ್ನು ಸುಧಾಕರ್ ಪಡೆದುಕೊಂಡಿದ್ದರು. ಆದರೆ, ಅವರು ಈ ಹಣವನ್ನು ಹೂಡಿಕೆ ಮಾಡಿದ್ದು ಸಿನಿಮಾ ಮೇಲೆ. ಆದರೆ, ಯಾವ ಸಿನಿಮಾವೂ ಕೈ ಹಿಡಿಯಲಿಲ್ಲ.

ಕೆಲ ತಿಂಗಳ ನಂತರ ಸುಧಾಕರ್​ ಬಳಿ ಹಣ ಹಿಂದಿರುಗಿಸುವಂತೆ ಉದ್ಯಮಿ ಕೇಳಿದ್ದರು. ಆದರೆ, ಹಣ ನೀಡದೇ ಸುಧಾಕರ್ ಸತಾಯಿಸಿದ್ದರು. ಕೊನೆಗೆ ಈ ಪ್ರಕರಣದಲ್ಲಿ ರಾಜಿ ಮಾತುಕತೆ ನಡೆದಿತ್ತು. ಈ ವೇಳೆ ಉದ್ಯಮಿಗೆ ಸುಧಾಕರ್​ ಚೆಕ್​ ನೀಡಿದ್ದರು. ಈ ಚೆಕ್​ ಬ್ಯಾಂಕ್​ಗೆ ಹಾಕಿದಾಗ ಬೌನ್ಸ್ ಆಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತ ಉದ್ಯಮಿ, ಪರಿಹಾರಕ್ಕಾಗಿ ಹಾಸನದ ನಾಲ್ಕನೇ ಜೆ‌ಎಂಎಫ್​ಸಿ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. 2020ರ ಜನವರಿ 27ರಂದು ಈ ಪ್ರಕರಣವನ್ನು ವಿಚಾರಣೆ ನಡೆಸಿದ ಕೋರ್ಟ್ ಸುಧಾಕರ್​ಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ, ಐದು ಕೋಟಿ ಪರಿಹಾರ ನೀಡಲು ಆದೇಶ ಹೊರಡಿಸಿತ್ತು. ಈ ಆದೇಶ ಪ್ರಶ್ನಿಸಿ ಸುಧಾಕರ್​ ಜಿಲ್ಲಾ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಅವರ ಮೇಲ್ಮನವಿ ವಜಾಗೊಳಿಸಿದ ನ್ಯಾಯಾಲಯ ಶಿಕ್ಷೆ ಖಾಯಂ ಮಾಡಿದೆ. ಈಗ ಸುಧಾಕರ್​ ಶಿಕ್ಷೆ ಅನುಭವಿಸುವುದರ ಜತೆಗೆ ಐದು ಕೋಟಿ ಪರಿಹಾರವನ್ನು ಉದ್ಯಮಿಗೆ ನೀಡಬೇಕಿದೆ.

ಇದನ್ನೂ ಓದಿ: ಭಾನುವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವ ಸ್ಪರ್ಧಿ ಇವರೇನಾ?

ಬಿಗ್​ ಬಾಸ್​ ಎಲಿಮಿನೇಷನ್​ನಲ್ಲಿ ಟ್ವಿಸ್ಟ್​; ಶನಿವಾರವೇ ಹೊರ ಬಿದ್ದ ಶುಭಾ ಪೂಂಜಾ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ