ಸ್ಟಾರ್​ ನಟರ ಮುಖಾಮುಖಿ; ಈಗ ಚಿತ್ರರಂಗದಲ್ಲಿ ಹೊಂದಾಣಿಕೆ ಮುಖ್ಯ ಎಂದ ಶಿವರಾಜ್​ಕುಮಾರ್​

ಇದನ್ನು ಸ್ಟಾರ್ಸ್​ ವಾರ್ಸ್​ ಎಂದು ಕರೆಯಬೇಡಿ ಎಂದು ಚಿತ್ರತಂಡದವರೇ ಮನವಿ ಮಾಡಿದ್ದಾರೆ. ಆದಾಗ್ಯೂ ಇದನ್ನು ಸ್ಟಾರ್​ ವಾರ್​ ಎಂದೇ ಬಿಂಬಿಸಲಾಗುತ್ತಿದೆ. ಈ ವಿಚಾರದ ಬಗ್ಗೆ ಸೆಂಚ್ಯುರಿ ಸ್ಟಾರ್​ ಶಿವರಾಜ್​ಕುಮಾರ್​ ಪ್ರತಿಕ್ರಿಯೆ ನೀಡಿದ್ದಾರೆ.

ಸ್ಟಾರ್​ ನಟರ ಮುಖಾಮುಖಿ; ಈಗ ಚಿತ್ರರಂಗದಲ್ಲಿ ಹೊಂದಾಣಿಕೆ ಮುಖ್ಯ ಎಂದ ಶಿವರಾಜ್​ಕುಮಾರ್​
Follow us
| Updated By: ರಾಜೇಶ್ ದುಗ್ಗುಮನೆ

Updated on: Sep 27, 2021 | 4:03 PM

ಕೋಟ್ಯಂತರ ರೂಪಾಯಿ ಸುರಿದು ನಿರ್ಮಾಪಕರು ಸಿನಿಮಾ ಮಾಡಿರುತ್ತಾರೆ. ಆದರೆ, ಎರಡು ಸ್ಟಾರ್​ ಸಿನಿಮಾಗಳು ಒಂದೇ ದಿನ ತೆರೆಗೆ ಬಂದರೆ, ಇದರಿಂದ ನಷ್ಟವಾಗುವುದು ನಿರ್ಮಾಪಕರಿಗೆ. ಈಗ ಸ್ಯಾಂಡಲ್​ವುಡ್​ನಲ್ಲಿ ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಹಾಗೂ ದುನಿಯಾ ವಿಜಯ್​ ನಟನೆಯ ‘ಸಲಗ’ ಒಂದೇ ದಿನ ತೆರೆಗೆ ಬರುತ್ತಿದೆ. ಯಾವ ಸಿನಿಮಾ ನೋಡಬೇಕು ಎನ್ನುವ ಗೊಂದಲ ಪ್ರೇಕ್ಷಕರಿಗೂ ಉಂಟಾಗುತ್ತದೆ. ಇದನ್ನು ಸ್ಟಾರ್ಸ್​ ವಾರ್ಸ್​ ಎಂದು ಕರೆಯಬೇಡಿ ಎಂದು ಚಿತ್ರತಂಡದವರೇ ಮನವಿ ಮಾಡಿದ್ದಾರೆ. ಆದಾಗ್ಯೂ ಇದನ್ನು ಸ್ಟಾರ್​ ವಾರ್​ ಎಂದೇ ಬಿಂಬಿಸಲಾಗುತ್ತಿದೆ. ಈ ವಿಚಾರದ ಬಗ್ಗೆ ಸೆಂಚ್ಯುರಿ ಸ್ಟಾರ್​ ಶಿವರಾಜ್​ಕುಮಾರ್​ ಪ್ರತಿಕ್ರಿಯೆ ನೀಡಿದ್ದಾರೆ.

‘ಚಿತ್ರಮಂದಿರಗಳಲ್ಲಿ ಹೌಸ್​ಫುಲ್​ಗೆ ಅವಕಾಶ ನೀಡಿದ್ದಕ್ಕೆ ಸರ್ಕಾರಕ್ಕೆ ನಾನು ಧನ್ಯವಾದ ಹೇಳುತ್ತೇನೆ. ಕೊರೊನಾ ಬಳಿಕ ಸಾಕಷ್ಟು ಬದಲಾವಣೆ ಆಗಿದೆ. ನಮ್ಮ ಸಿನಿಮಾದ ರಿಲೀಸ್​ ಡೇಟ್​ ಎರಡು ಬಾರಿ ಮುಂದೂಡಲ್ಪಟ್ಟಿದೆ. ಈಗ ನಾವು ಅಕ್ಟೋಬರ್​ 29ರಂದು ತೆರೆಗೆ ಬರುತ್ತಿದ್ದೇವೆ’ ಎಂದರು ಶಿವರಾಜ್​ಕುಮಾರ್​.

ಇನ್ನು, ಎರಡು ದೊಡ್ಡ ನಟರ ಸಿನಿಮಾ ಒಟ್ಟಿಗೆ ತೆರೆಗೆ ಬರುತ್ತಿರುವ ಬಗ್ಗೆ ಅವರು ಮಾತನಾಡಿದ್ದಾರೆ. ‘ಯಾವುದೇ ಸಿನಿಮಾ ರಿಲೀಸ್ ಆಗಬೇಕೆಂದರೂ ಹೊಂದಾಣಿಕೆ ಇರಬೇಕು. ಸಲಗ ಮತ್ತು ‘ಕೋಟಿಗೊಬ್ಬ 3’ ಎರಡೂ ಚಿತ್ರಕ್ಕೂ ಒಳ್ಳೆಯದಾಗಬೇಕು. ಒಂದೇ ದಿನ ಬಂದರೆ ತೊಂದರೆಯೇ. ನಿರ್ಮಾಪಕರು ಮಾತಾಡಿಕೊಂಡು, ಬಗೆಹರಿಸಿಕೊಳ್ಳಬೇಕು’ ಎಂದರು ಶಿವರಾಜ್​ಕುಮಾರ್​.

‘ಬಹುಶಃ ಎರಡೂ ಸಿನಿಮಾ ಒಂದೇ ದಿನ ತೆರೆಗೆ ಬರಲಿದೆ. ನನ್ನ ಪ್ರಕಾರ ಒಂದು ಸಿನಿಮಾ ಮಾತ್ರ ತೆರೆಗೆ ಬಂದರೆ ಒಳ್ಳೆಯದು. ಸಾಕಷ್ಟು ಸಿನಿಮಾಗಳು ರಿಲೀಸ್​​ಗೆ ರೆಡಿ ಇವೆ. ಯಾರೇ ಬರುವುದಾದರೂ ಮಾತನಾಡಿಕೊಂಡು ಬರಲಿ. ಈಗ ಚಿತ್ರರಂಗದಲ್ಲಿ ಹೊಂದಾಣಿ ಮುಖ್ಯ’ ಎಂದಿದ್ದಾರೆ ಶಿವಣ್ಣ.

ಇದನ್ನೂ ಓದಿ: ದುಬೈನಲ್ಲಿ ಕಿಚ್ಚ; ಬುರ್ಜ್​ ಖಲೀಫಾ ಫೋಟೋ ಹಾಕಿ ‘ವಿಕ್ರಾಂತ್​ ರೋಣ’ ಟೈಟಲ್​ ಲಾಂಚ್​ ನೆನಪಿಸಿಕೊಂಡ ಸುದೀಪ್​

‘ಬರಲಿ ನೋಡೋಣ, ಇನ್ನೇನು ಮಾಡೋಕೆ ಆಗಲ್ಲ’; ಸ್ಟಾರ್ ಮುಖಾಮುಖಿಗೆ ‘ಕೋಟಿಗೊಬ್ಬ 3’ ಪ್ರೊಡ್ಯೂಸರ್​ ರೆಡಿ

ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?