AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಾರ್​ ನಟರ ಮುಖಾಮುಖಿ; ಈಗ ಚಿತ್ರರಂಗದಲ್ಲಿ ಹೊಂದಾಣಿಕೆ ಮುಖ್ಯ ಎಂದ ಶಿವರಾಜ್​ಕುಮಾರ್​

ಇದನ್ನು ಸ್ಟಾರ್ಸ್​ ವಾರ್ಸ್​ ಎಂದು ಕರೆಯಬೇಡಿ ಎಂದು ಚಿತ್ರತಂಡದವರೇ ಮನವಿ ಮಾಡಿದ್ದಾರೆ. ಆದಾಗ್ಯೂ ಇದನ್ನು ಸ್ಟಾರ್​ ವಾರ್​ ಎಂದೇ ಬಿಂಬಿಸಲಾಗುತ್ತಿದೆ. ಈ ವಿಚಾರದ ಬಗ್ಗೆ ಸೆಂಚ್ಯುರಿ ಸ್ಟಾರ್​ ಶಿವರಾಜ್​ಕುಮಾರ್​ ಪ್ರತಿಕ್ರಿಯೆ ನೀಡಿದ್ದಾರೆ.

ಸ್ಟಾರ್​ ನಟರ ಮುಖಾಮುಖಿ; ಈಗ ಚಿತ್ರರಂಗದಲ್ಲಿ ಹೊಂದಾಣಿಕೆ ಮುಖ್ಯ ಎಂದ ಶಿವರಾಜ್​ಕುಮಾರ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 27, 2021 | 4:03 PM

ಕೋಟ್ಯಂತರ ರೂಪಾಯಿ ಸುರಿದು ನಿರ್ಮಾಪಕರು ಸಿನಿಮಾ ಮಾಡಿರುತ್ತಾರೆ. ಆದರೆ, ಎರಡು ಸ್ಟಾರ್​ ಸಿನಿಮಾಗಳು ಒಂದೇ ದಿನ ತೆರೆಗೆ ಬಂದರೆ, ಇದರಿಂದ ನಷ್ಟವಾಗುವುದು ನಿರ್ಮಾಪಕರಿಗೆ. ಈಗ ಸ್ಯಾಂಡಲ್​ವುಡ್​ನಲ್ಲಿ ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಹಾಗೂ ದುನಿಯಾ ವಿಜಯ್​ ನಟನೆಯ ‘ಸಲಗ’ ಒಂದೇ ದಿನ ತೆರೆಗೆ ಬರುತ್ತಿದೆ. ಯಾವ ಸಿನಿಮಾ ನೋಡಬೇಕು ಎನ್ನುವ ಗೊಂದಲ ಪ್ರೇಕ್ಷಕರಿಗೂ ಉಂಟಾಗುತ್ತದೆ. ಇದನ್ನು ಸ್ಟಾರ್ಸ್​ ವಾರ್ಸ್​ ಎಂದು ಕರೆಯಬೇಡಿ ಎಂದು ಚಿತ್ರತಂಡದವರೇ ಮನವಿ ಮಾಡಿದ್ದಾರೆ. ಆದಾಗ್ಯೂ ಇದನ್ನು ಸ್ಟಾರ್​ ವಾರ್​ ಎಂದೇ ಬಿಂಬಿಸಲಾಗುತ್ತಿದೆ. ಈ ವಿಚಾರದ ಬಗ್ಗೆ ಸೆಂಚ್ಯುರಿ ಸ್ಟಾರ್​ ಶಿವರಾಜ್​ಕುಮಾರ್​ ಪ್ರತಿಕ್ರಿಯೆ ನೀಡಿದ್ದಾರೆ.

‘ಚಿತ್ರಮಂದಿರಗಳಲ್ಲಿ ಹೌಸ್​ಫುಲ್​ಗೆ ಅವಕಾಶ ನೀಡಿದ್ದಕ್ಕೆ ಸರ್ಕಾರಕ್ಕೆ ನಾನು ಧನ್ಯವಾದ ಹೇಳುತ್ತೇನೆ. ಕೊರೊನಾ ಬಳಿಕ ಸಾಕಷ್ಟು ಬದಲಾವಣೆ ಆಗಿದೆ. ನಮ್ಮ ಸಿನಿಮಾದ ರಿಲೀಸ್​ ಡೇಟ್​ ಎರಡು ಬಾರಿ ಮುಂದೂಡಲ್ಪಟ್ಟಿದೆ. ಈಗ ನಾವು ಅಕ್ಟೋಬರ್​ 29ರಂದು ತೆರೆಗೆ ಬರುತ್ತಿದ್ದೇವೆ’ ಎಂದರು ಶಿವರಾಜ್​ಕುಮಾರ್​.

ಇನ್ನು, ಎರಡು ದೊಡ್ಡ ನಟರ ಸಿನಿಮಾ ಒಟ್ಟಿಗೆ ತೆರೆಗೆ ಬರುತ್ತಿರುವ ಬಗ್ಗೆ ಅವರು ಮಾತನಾಡಿದ್ದಾರೆ. ‘ಯಾವುದೇ ಸಿನಿಮಾ ರಿಲೀಸ್ ಆಗಬೇಕೆಂದರೂ ಹೊಂದಾಣಿಕೆ ಇರಬೇಕು. ಸಲಗ ಮತ್ತು ‘ಕೋಟಿಗೊಬ್ಬ 3’ ಎರಡೂ ಚಿತ್ರಕ್ಕೂ ಒಳ್ಳೆಯದಾಗಬೇಕು. ಒಂದೇ ದಿನ ಬಂದರೆ ತೊಂದರೆಯೇ. ನಿರ್ಮಾಪಕರು ಮಾತಾಡಿಕೊಂಡು, ಬಗೆಹರಿಸಿಕೊಳ್ಳಬೇಕು’ ಎಂದರು ಶಿವರಾಜ್​ಕುಮಾರ್​.

‘ಬಹುಶಃ ಎರಡೂ ಸಿನಿಮಾ ಒಂದೇ ದಿನ ತೆರೆಗೆ ಬರಲಿದೆ. ನನ್ನ ಪ್ರಕಾರ ಒಂದು ಸಿನಿಮಾ ಮಾತ್ರ ತೆರೆಗೆ ಬಂದರೆ ಒಳ್ಳೆಯದು. ಸಾಕಷ್ಟು ಸಿನಿಮಾಗಳು ರಿಲೀಸ್​​ಗೆ ರೆಡಿ ಇವೆ. ಯಾರೇ ಬರುವುದಾದರೂ ಮಾತನಾಡಿಕೊಂಡು ಬರಲಿ. ಈಗ ಚಿತ್ರರಂಗದಲ್ಲಿ ಹೊಂದಾಣಿ ಮುಖ್ಯ’ ಎಂದಿದ್ದಾರೆ ಶಿವಣ್ಣ.

ಇದನ್ನೂ ಓದಿ: ದುಬೈನಲ್ಲಿ ಕಿಚ್ಚ; ಬುರ್ಜ್​ ಖಲೀಫಾ ಫೋಟೋ ಹಾಕಿ ‘ವಿಕ್ರಾಂತ್​ ರೋಣ’ ಟೈಟಲ್​ ಲಾಂಚ್​ ನೆನಪಿಸಿಕೊಂಡ ಸುದೀಪ್​

‘ಬರಲಿ ನೋಡೋಣ, ಇನ್ನೇನು ಮಾಡೋಕೆ ಆಗಲ್ಲ’; ಸ್ಟಾರ್ ಮುಖಾಮುಖಿಗೆ ‘ಕೋಟಿಗೊಬ್ಬ 3’ ಪ್ರೊಡ್ಯೂಸರ್​ ರೆಡಿ

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್