AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ನೆಪೋಟಿಸಂ ಹೇಳಿಕೆ ಬೆನ್ನಲ್ಲೇ ಶಿವಣ್ಣ ಖಡಕ್ ಉತ್ತರ

ಕನ್ನಡ ಚಿತ್ರರಂಗದಲ್ಲಿ ನೆಪೋಟಿಸಂ ಕುರಿತ ಚರ್ಚೆ ತೀವ್ರಗೊಂಡಿದೆ. ಸಂಚಿತ್ ಸಂಜೀವ್ ಅವರ ಚೊಚ್ಚಲ ಚಿತ್ರದ ನಂತರ, ಸುದೀಪ್ ಅವರು ಶಿವರಾಜ್‌ಕುಮಾರ್‌ಗೆ ನೆಪೋಟಿಸಂ ಪ್ರಶ್ನೆ ಏಕೆ ಕೇಳಲ್ಲ ಎಂದು ಪ್ರಶ್ನಿಸಿದ್ದರು. ಈಗ ಶಿವಣ್ಣ ಈ ಬಗ್ಗೆ ಖಡಕ್ ಪ್ರತಿಕ್ರಿಯೆ ನೀಡಿದ್ದು, ಅಂತಹ ಪ್ರಶ್ನೆ ಕೇಳಿದ್ದೇ ತಪ್ಪು ಎಂದಿದ್ದಾರೆ. ಚಿತ್ರರಂಗದಲ್ಲಿ ಯಾರ ಮಕ್ಕಳು ಬೇಕಾದರೂ ಕನಸು ಕಾಣಬಹುದು, ಎಲ್ಲರಿಗೂ ಅವಕಾಶವಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುದೀಪ್ ನೆಪೋಟಿಸಂ ಹೇಳಿಕೆ ಬೆನ್ನಲ್ಲೇ ಶಿವಣ್ಣ ಖಡಕ್ ಉತ್ತರ
ಶಿವಣ್ಣ-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Jun 08, 2026 | 6:59 AM

Share

ನೆಪೋಟಿಸಂ ಬಗ್ಗೆ ಬಾಲಿವುಡ್​​ನಲ್ಲಿ ಚರ್ಚೆ ಆದಷ್ಟು ಕನ್ನಡ ಚಿತ್ರರಂಗದಲ್ಲಿ ಆಗೋದಿಲ್ಲ. ಇಲ್ಲಿ ಟ್ಯಾಲೆಂಟ್ ಇದ್ದರೆ ಮಾತ್ರ ಅವಕಾಶಗಳು ಸಿಗುತ್ತವೆ. ಇತ್ತೀಚೆಗೆ ಸುದೀಪ್ ಅವರ ಅಳಿಯ ಸಂಚಿತ್ ಸಂಜೀವ್ ‘ಮ್ಯಾಂಗೋ ಪಚ್ಚ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಬೆನ್ನಲ್ಲೇ ನೆಪೋಟಿಸಂ ಹೇಳಿಕೆ ಚರ್ಚೆಗೆ ಬಂದಿತ್ತು. ಸುದೀಪ್​​ಗೆ ಈ ಬಗ್ಗೆ ಪ್ರಶ್ನೆ ಕೂಡ ಎದುರಾಯಿತು. ಆಗ ಕಿಚ್ಚ (Kichcha Sudeep) ‘ಶಿವರಾಜ್​​ಕುಮಾರ್​​ಗೆ ಈ ಪ್ರಶ್ನೆ ಏಕೆ ಕೇಳಲ್ಲ’ ಎಂದು ನೇರವಾಗಿ ಪ್ರಶ್ನೆ ಮಾಡಿದ್ದರು. ಇದೀಗ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ತಮ್ಮದೇ ಶೈಲಿಯಲ್ಲಿ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗೋಷ್ಠಿಯೊಂದರಲ್ಲಿ ಎದುರಾದ ಪ್ರಶ್ನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಶಿವಣ್ಣ, ‘ಆ ರೀತಿಯ ಪ್ರಶ್ನೆಯನ್ನು ಕೇಳಿದ್ದೇ ತಪ್ಪು’ ಎಂದು ನೇರವಾಗಿ ಹೇಳಿದ್ದಾರೆ.

‘ಮ್ಯಾಂಗೋ ಪಚ್ಚ’ ವಿಶೇಷ ಶೋ ನೋಡಿ ಬಂದ ಶಿವಣ್ಣ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪತ್ರಕರ್ತರೊಬ್ಬರು ಸುದೀಪ್ ಅವರ ಹೇಳಿಕೆಯನ್ನು ಉಲ್ಲೇಖಿಸಿ, ‘ನೆಪೋಟಿಸಂ ಪ್ರಶ್ನೆಯನ್ನು ಶಿವಣ್ಣ ಅವರಿಗೆ ಏಕೆ ಕೇಳಿಲ್ಲ ಎಂದು ಸುದೀಪ್ ಹೇಳಿದ್ದಾರೆ’ ಎಂಬ ಪ್ರಶ್ನೆಯನ್ನು ಶಿವಣ್ಣನಿಗೆ ಕೇಳಿದರು. ಈ ಪ್ರಶ್ನೆಗೆ ತಕ್ಷಣವೇ ಪ್ರತಿಕ್ರಿಯಿಸಿದ ಶಿವಣ್ಣ, ‘ನೀವು ಆ ಪ್ರಶ್ನೆಯನ್ನು ಏಕೆ ಕೇಳಿದ್ರಿ? ನಾನು ಆ ವಿಡಿಯೋ ನೋಡಿದ್ದೇನೆ. ಆದರೆ ನೀವು ಆ ಪ್ರಶ್ನೆಯನ್ನು ಏಕೆ ಕೇಳುತ್ತಿದ್ದೀರಿ? ಅದು ಕೇಳಬೇಕಾದ ಪ್ರಶ್ನೆಯೇ ಅಲ್ಲ’ ಎಂದು ಪತ್ರಕರ್ತರನ್ನು ತರಾಟೆಗೆ ತೆಗೆದುಕೊಂಡರು.

ಇದನ್ನೂ ಓದಿ: ನೆಪೋಟಿಸಂ ಇರೋದು ನಿಜ, ಅದರಿಂದಲೇ ನನಗೆ ಕೆಲಸ ಸಿಗುತ್ತಿದೆ: ಆಮಿರ್ ಖಾನ್ ಮಗನ ನೇರ ಮಾತು

ಯಾರ ಮಕ್ಕಳು ಬೇಕಾದರೂ ಕನಸು ಕಾಣಬಹುದು:

ಮುಂದುವರಿದು ಮಾತನಾಡಿದ ಶಿವಣ್ಣ, ‘ಚಿತ್ರರಂಗದಲ್ಲಿ ಕೇವಲ ಇವರ ಮಕ್ಕಳು ಅಥವಾ ಅವರ ಮಕ್ಕಳೇ ಬಂದು ಕನಸು ಕಾಣಬೇಕು ಎಂದೇನೂ ಇಲ್ಲ. ಪ್ರತಿಯೊಬ್ಬ ಮನುಷ್ಯನಿಗೂ, ಪ್ರತಿಯೊಬ್ಬ ಮಗುವಿಗೂ ಕನಸು ಕಾಣುವ ಹಕ್ಕಿದೆ. ಚಿತ್ರರಂಗಕ್ಕೆ ಯಾರ ಮಕ್ಕಳು ಬೇಕಾದರೂ ಬರಬಹುದು, ನೀವು ಕೂಡ ಬರಬಹುದು. ಎಲ್ಲರಿಗೂ ಇಲ್ಲಿ ಅವಕಾಶವಿದೆ’ ಎಂದು ನೆಪೋಟಿಸಂ ವಾದಕ್ಕೆ ತಕ್ಕ ಉತ್ತರ ನೀಡಿದರು.

ಶಿವಣ್ಣನ ‘ಗ್ರೇಟ್‌ನೆಸ್’ ಕೊಂಡಾಡಿದ ಕಿಚ್ಚ ಸುದೀಪ್:

ಶಿವಣ್ಣ ಅವರು ಪತ್ರಕರ್ತನಿಗೆ ಖಡಕ್ ಆಗಿ ಉತ್ತರಿಸುತ್ತಿದ್ದಾಗ ಪಕ್ಕದಲ್ಲೇ ನಿಂತಿದ್ದ ನಟ ಕಿಚ್ಚ ಸುದೀಪ್ ಅವರು ಮುಗುಳ್ನಗುತ್ತಿದ್ದರು. ಶಿವಣ್ಣ ಮಾತು ಮುಗಿಸುತ್ತಿದ್ದಂತೆ ಮೈಕ್ ಕೈಗೆತ್ತಿಕೊಂಡ ಸುದೀಪ್, ‘ಗ್ರೇಟ್‌ನೆಸ್ ಅಂದ್ರೆ ಏನು ಗೊತ್ತಾ? ಈ ಪ್ರಶ್ನೆಯನ್ನು ಶಿವಣ್ಣನಿಗೆ ಕೇಳಿದ್ರಲ್ಲ’ ಎಂದು ಸುದೀಪ್ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​