AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

250 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಸ್ಯಾಂಡಲ್​ವುಡ್​ ನಿರ್ಮಾಪಕ ಅರೆಸ್ಟ್

ಸಂಗೊಳ್ಳಿ ರಾಯಣ್ಣ ಸಹಕಾರ ಬ್ಯಾಂಕ್​ನ ಅವ್ಯವಹಾರ ಪ್ರಕರಣದಲ್ಲಿ ಇವರು ಸುಮಾರು 250 ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆ ಎನ್ನುವ ಆರೋಪ ಇದೆ. ಈ ಪ್ರಕರಣಕ್ಕೆ ಸಂಬಂದಿಸಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಪಿಎಂಎಲ್ಎ ಕಾಯಿದೆ ಅಡಿ ದೂರು ದಾಖಲಿಸಿದ್ದರು.

250 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಸ್ಯಾಂಡಲ್​ವುಡ್​ ನಿರ್ಮಾಪಕ ಅರೆಸ್ಟ್
ಆನಂದ್ ಅಪ್ಪುಗೋಳ್
TV9 Web
| Edited By: |

Updated on:Jan 06, 2022 | 8:27 PM

Share

ಕನ್ನಡ ಚಿತ್ರರಂಗದ ನಿರ್ಮಾಪಕ, ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಕೋಆಪರೇಟಿವ್ ಸೊಸೈಟಿಯ ಅಧ್ಯಕ್ಷ ಆನಂದ್ ಅಪ್ಪುಗೋಳ್ ಅವರನ್ನು ಇಡಿ ಅಧಿಕಾರಿಗಳು ಇಂದು (ಜನವರಿ 6) ಬಂಧಿಸಿದ್ದಾರೆ. ಸಂಗೊಳ್ಳಿ ರಾಯಣ್ಣ ಸಹಕಾರ ಬ್ಯಾಂಕ್​ನ ಅವ್ಯವಹಾರ ಪ್ರಕರಣದಲ್ಲಿ ಇವರು ಸುಮಾರು 250 ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆ ಎನ್ನುವ ಆರೋಪ ಇದೆ. ಈ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಪಿಎಂಎಲ್ಎ ಕಾಯಿದೆ ಅಡಿ ದೂರು ದಾಖಲಿಸಿದ್ದರು.

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರವನ್ನು ಆನಂದ್​ ನಿರ್ಮಾಣ ಮಾಡಿದ್ದರು. ಅವರು ಸಂಗೊಳ್ಳಿ ರಾಯಣ್ಣ ಸಹಕಾರ ಬ್ಯಾಂಕ್​ನ ಅಧ್ಯಕ್ಷರಾಗಿದ್ದಾರೆ. ಅವರು ಈ ಬ್ಯಾಂಕ್​ನಲ್ಲಿ ದೊಡ್ಡ ಮೊತ್ತದ ಅವ್ಯವಹಾರ ನಡೆಸಿರುವ ವಿಚಾರ ಬೆಳಕಿಗೆ ಬಂದಿದೆ. ಹೀಗಾಗಿ, ಆನಂದ್​ ಅವರನ್ನು ಅರೆಸ್ಟ್​ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಪ್ರಮುಖ ಆರೋಪ ಏನು?

ಸಂಗೊಳ್ಳಿ ರಾಯಣ್ಣ ಸೊಸೈಟಿ  ಬೆಳಗಾವಿಯಲ್ಲಿ ಪ್ರಮುಖ ಶಾಖೆ ಹೊಂದಿದೆ. ಇದರ ಜತೆಗೆ ಉಳಿದ ಕಡೆಗಳಲ್ಲೂ ಇದು ಶಾಖೆ ಹೊಂದಿದೆ. 26 ಸಾವಿರ ಜನರಿಂದ ಈ ಬ್ಯಾಂಕ್​ನವರು ಠೇವಣಿ ಸಂಗ್ರಹಿಸಿದ್ದರು. ಆನಂದ್ ಅಪ್ಪುಗೋಳ ಸೇರಿ ಸೊಸೈಟಿಯ 13 ಜನರು ಠೇವಣಿಯ ಹಣವನ್ನು ಸ್ವಂತಕ್ಕೆ ಬಳಸಿಕೊಂಡಿದ್ದರು ಎನ್ನುವುದು ಪ್ರಮುಖ ಆರೋಪ. ಇದಕ್ಕೆ ಸಂಬಂಧಿಸಿ ಜಿಲ್ಲಾ ನ್ಯಾಯಾಲಯದಲ್ಲಿ ಚಾರ್ಜ್​ಶೀಟ್​ ಸಲ್ಲಿಕೆ ಮಾಡಲಾಗಿತ್ತು. ಕೆಲ ವರ್ಷಗಳ ಹಿಂದೆ ಆನಂದ್​ ಅವರನ್ನು ಮುಂಬೈನಲ್ಲಿ ಬಂಧಿಸಲಾಗಿತ್ತು. ಆ ಬಳಿಕ ಅವರು ಹೊರ ಬಂದಿದ್ದರು. ಈಗ ಮತ್ತೆ ಅವರ ಬಂಧನ ನಡೆದಿದೆ.

ಇದನ್ನೂ ಓದಿ: ‘ಟ್ವಿಸ್ಟ್​ ಇಲ್ಲದೆ ‘ಜೊತೆ ಜೊತೆಯಲಿ’ ಧಾರಾವಾಹಿ ಇಲ್ಲ’; ಆರ್ಯವರ್ಧನ್ ಕ್ಯಾರೆಕ್ಟರ್ ಬದಲಾದ ಬಗ್ಗೆ ನಟ ಅನಿರುದ್ಧ ಮಾತು

Valimai Movie: ಅಜಿತ್​ ನಟನೆಯ ‘ವಲಿಮೈ’ ಚಿತ್ರದ ರಿಲೀಸ್​ ದಿನಾಂಕ ಮುಂದಕ್ಕೆ

Published On - 8:10 pm, Thu, 6 January 22

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?