AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿಗೆ ತುತ್ತಾಗಿದ್ದ ರನ್ನ, ಅಣ್ಣಯ್ಯ, ಬಿಂದಾಸ್ ಸಿನಿಮಾ ಖ್ಯಾತಿಯ ನಿರ್ಮಾಪಕ ಚಂದ್ರಶೇಖರ್​ ಇನ್ನಿಲ್ಲ

ನಿಮಿಷಾಂಬ ಪ್ರೊಡಕ್ಷನ್ಸ್​ ನಿರ್ಮಾಪಕ ಚಂದ್ರಶೇಖರ್ ಇತ್ತೀಚೆಗಷ್ಟೇ ಮಂಜು ಮಾಂಡವ್ಯ ನಿರ್ದೇಶನದಲ್ಲಿ ಉಪೇಂದ್ರ ಅವರೊಂದಿಗೆ ಹೊಸ ಸಿನಿಮಾವೊಂದನ್ನು ಘೋಷಿಸಿದ್ದರು. ಆದರೆ, ಕೊರೊನಾ ಸೋಂಕಿಗೆ ತುತ್ತಾಗಿ ನಂತರ ಶ್ವಾಸಕೋಶದ ಸಮಸ್ಯೆ ಉಲ್ಬಣಗೊಂಡ ಕಾರಣ ಚಿಕಿತ್ಸೆ ಫಲಕಾರಿಯಾಗಿದೆ ಅರ್ಧದಾರಿಯಲ್ಲೇ ತಮ್ಮ ಪಯಣ ಮುಗಿಸಿದ್ದಾರೆ.

ಕೊರೊನಾ ಸೋಂಕಿಗೆ ತುತ್ತಾಗಿದ್ದ ರನ್ನ, ಅಣ್ಣಯ್ಯ, ಬಿಂದಾಸ್ ಸಿನಿಮಾ ಖ್ಯಾತಿಯ ನಿರ್ಮಾಪಕ ಚಂದ್ರಶೇಖರ್​ ಇನ್ನಿಲ್ಲ
ನಿರ್ಮಾಪಕ ಚಂದ್ರಶೇಖರ್
Skanda
| Edited By: |

Updated on: Apr 29, 2021 | 7:15 AM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಕನ್ನಡ ಚಿತ್ರರಂಗದ ಮೇಲೂ ಕೊರೊನಾ ಕರಿನೆರಳು ಬಿದ್ದು ಸೂತಕದ ಛಾಯೆ ಆವರಿಸಿದೆ. ರನ್ನ, ಅಣ್ಣಯ್ಯ, ಬಿಂದಾಸ್ ಸಿನಿಮಾ ಖ್ಯಾತಿಯ ನಿರ್ಮಾಪಕ ಚಂದ್ರಶೇಖರ್ ಅವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 23 ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡು ಮಣಿಪಾಲ್ ಸೆಂಟರ್ ಆಸ್ಪತ್ರೆಗೆ ದಾಖಲಾಗಿದ್ದ ಚಂದ್ರಶೇಖರ್ ಅವರಿಗೆ ಕೊರೊನಾ ವಾಸಿಯಾಗಿತ್ತಾದರೂ ಶ್ವಾಸಕೋಶದ ಸಮಸ್ಯೆ ಉಲ್ಬಣಗೊಂಡಿತ್ತು. ಪರಿಣಾಮವಾಗಿ ಇಂದು (ಏ.29) ಮುಂಜಾನೆ ಸುಮಾರು 3-4 ಗಂಟೆಯ ವೇಳೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ ಎಂದು ಮಾಹಿತಿ ಲಭಿಸಿದೆ.

ನಿಮಿಷಾಂಬ ಪ್ರೊಡಕ್ಷನ್ಸ್​ ನಿರ್ಮಾಪಕ ಚಂದ್ರಶೇಖರ್ ಇತ್ತೀಚೆಗಷ್ಟೇ ಮಂಜು ಮಾಂಡವ್ಯ ನಿರ್ದೇಶನದಲ್ಲಿ ಉಪೇಂದ್ರ ಅವರೊಂದಿಗೆ ಹೊಸ ಸಿನಿಮಾವೊಂದನ್ನು ಘೋಷಿಸಿದ್ದರು. ಆದರೆ, ಕೊರೊನಾ ಸೋಂಕಿಗೆ ತುತ್ತಾಗಿ ನಂತರ ಶ್ವಾಸಕೋಶದ ಸಮಸ್ಯೆ ಉಲ್ಬಣಗೊಂಡ ಕಾರಣ ಚಿಕಿತ್ಸೆ ಫಲಕಾರಿಯಾಗಿದೆ ಅರ್ಧದಾರಿಯಲ್ಲೇ ತಮ್ಮ ಪಯಣ ಮುಗಿಸಿದ್ದಾರೆ.

ಮೊನ್ನೆ ಮೊನ್ನೆಯಷ್ಟೇ ನಿರ್ಮಾಪಕ ಕೋಟಿ ರಾಮು ಸಹ ಕೊರೊನಾ ಸೋಂಕಿನಿಂದ ನಿಧನರಾಗಿದ್ದು ಅವರ ಸಾವಿನ ಬೆನ್ನಲ್ಲೇ ಕನ್ನಡ ಚಿತ್ರರಂಗದ ಮತ್ತೊಬ್ಬ ಅನ್ನದಾತನನ್ನು ಕೊವಿಡ್ ಕಿತ್ತುಕೊಂಡಿದೆ. ಕೊರೊನಾ ಸೋಂಕಿನ ಎರಡನೇ ಅಲೆ ಗಂಭೀರವಾಗಿದ್ದು ಸೋಂಕಿನ ತೀವ್ರತೆಯಿಂದ ಅನೇಕರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆಯುತ್ತಿದ್ದಾರೆ.

ಇದನ್ನೂ ಓದಿ: ನಟಿ ಮಾಲಾಶ್ರೀ ಪತಿ, ಖ್ಯಾತ ನಿರ್ಮಾಪಕ ಕೋಟಿ ರಾಮು ಕೊವಿಡ್​ಗೆ ಬಲಿ 

ಎಚ್ಚರ..ಗಾಳಿಯಲ್ಲೂ ಹರಡುತ್ತದೆ ಕೊರೊನಾ; ನೀವು ಸೋಂಕಿನಿಂದ ಪಾರಾಗಲು ತಪ್ಪದೆ ಈ ಮುನ್ನೆಚ್ಚರಿಕಾ ಕ್ರಮ ವಹಿಸಿ

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?