AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿಗೆ ತುತ್ತಾಗಿದ್ದ ರನ್ನ, ಅಣ್ಣಯ್ಯ, ಬಿಂದಾಸ್ ಸಿನಿಮಾ ಖ್ಯಾತಿಯ ನಿರ್ಮಾಪಕ ಚಂದ್ರಶೇಖರ್​ ಇನ್ನಿಲ್ಲ

ನಿಮಿಷಾಂಬ ಪ್ರೊಡಕ್ಷನ್ಸ್​ ನಿರ್ಮಾಪಕ ಚಂದ್ರಶೇಖರ್ ಇತ್ತೀಚೆಗಷ್ಟೇ ಮಂಜು ಮಾಂಡವ್ಯ ನಿರ್ದೇಶನದಲ್ಲಿ ಉಪೇಂದ್ರ ಅವರೊಂದಿಗೆ ಹೊಸ ಸಿನಿಮಾವೊಂದನ್ನು ಘೋಷಿಸಿದ್ದರು. ಆದರೆ, ಕೊರೊನಾ ಸೋಂಕಿಗೆ ತುತ್ತಾಗಿ ನಂತರ ಶ್ವಾಸಕೋಶದ ಸಮಸ್ಯೆ ಉಲ್ಬಣಗೊಂಡ ಕಾರಣ ಚಿಕಿತ್ಸೆ ಫಲಕಾರಿಯಾಗಿದೆ ಅರ್ಧದಾರಿಯಲ್ಲೇ ತಮ್ಮ ಪಯಣ ಮುಗಿಸಿದ್ದಾರೆ.

ಕೊರೊನಾ ಸೋಂಕಿಗೆ ತುತ್ತಾಗಿದ್ದ ರನ್ನ, ಅಣ್ಣಯ್ಯ, ಬಿಂದಾಸ್ ಸಿನಿಮಾ ಖ್ಯಾತಿಯ ನಿರ್ಮಾಪಕ ಚಂದ್ರಶೇಖರ್​ ಇನ್ನಿಲ್ಲ
ನಿರ್ಮಾಪಕ ಚಂದ್ರಶೇಖರ್
Skanda
| Edited By: |

Updated on: Apr 29, 2021 | 7:15 AM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಕನ್ನಡ ಚಿತ್ರರಂಗದ ಮೇಲೂ ಕೊರೊನಾ ಕರಿನೆರಳು ಬಿದ್ದು ಸೂತಕದ ಛಾಯೆ ಆವರಿಸಿದೆ. ರನ್ನ, ಅಣ್ಣಯ್ಯ, ಬಿಂದಾಸ್ ಸಿನಿಮಾ ಖ್ಯಾತಿಯ ನಿರ್ಮಾಪಕ ಚಂದ್ರಶೇಖರ್ ಅವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 23 ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡು ಮಣಿಪಾಲ್ ಸೆಂಟರ್ ಆಸ್ಪತ್ರೆಗೆ ದಾಖಲಾಗಿದ್ದ ಚಂದ್ರಶೇಖರ್ ಅವರಿಗೆ ಕೊರೊನಾ ವಾಸಿಯಾಗಿತ್ತಾದರೂ ಶ್ವಾಸಕೋಶದ ಸಮಸ್ಯೆ ಉಲ್ಬಣಗೊಂಡಿತ್ತು. ಪರಿಣಾಮವಾಗಿ ಇಂದು (ಏ.29) ಮುಂಜಾನೆ ಸುಮಾರು 3-4 ಗಂಟೆಯ ವೇಳೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ ಎಂದು ಮಾಹಿತಿ ಲಭಿಸಿದೆ.

ನಿಮಿಷಾಂಬ ಪ್ರೊಡಕ್ಷನ್ಸ್​ ನಿರ್ಮಾಪಕ ಚಂದ್ರಶೇಖರ್ ಇತ್ತೀಚೆಗಷ್ಟೇ ಮಂಜು ಮಾಂಡವ್ಯ ನಿರ್ದೇಶನದಲ್ಲಿ ಉಪೇಂದ್ರ ಅವರೊಂದಿಗೆ ಹೊಸ ಸಿನಿಮಾವೊಂದನ್ನು ಘೋಷಿಸಿದ್ದರು. ಆದರೆ, ಕೊರೊನಾ ಸೋಂಕಿಗೆ ತುತ್ತಾಗಿ ನಂತರ ಶ್ವಾಸಕೋಶದ ಸಮಸ್ಯೆ ಉಲ್ಬಣಗೊಂಡ ಕಾರಣ ಚಿಕಿತ್ಸೆ ಫಲಕಾರಿಯಾಗಿದೆ ಅರ್ಧದಾರಿಯಲ್ಲೇ ತಮ್ಮ ಪಯಣ ಮುಗಿಸಿದ್ದಾರೆ.

ಮೊನ್ನೆ ಮೊನ್ನೆಯಷ್ಟೇ ನಿರ್ಮಾಪಕ ಕೋಟಿ ರಾಮು ಸಹ ಕೊರೊನಾ ಸೋಂಕಿನಿಂದ ನಿಧನರಾಗಿದ್ದು ಅವರ ಸಾವಿನ ಬೆನ್ನಲ್ಲೇ ಕನ್ನಡ ಚಿತ್ರರಂಗದ ಮತ್ತೊಬ್ಬ ಅನ್ನದಾತನನ್ನು ಕೊವಿಡ್ ಕಿತ್ತುಕೊಂಡಿದೆ. ಕೊರೊನಾ ಸೋಂಕಿನ ಎರಡನೇ ಅಲೆ ಗಂಭೀರವಾಗಿದ್ದು ಸೋಂಕಿನ ತೀವ್ರತೆಯಿಂದ ಅನೇಕರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆಯುತ್ತಿದ್ದಾರೆ.

ಇದನ್ನೂ ಓದಿ: ನಟಿ ಮಾಲಾಶ್ರೀ ಪತಿ, ಖ್ಯಾತ ನಿರ್ಮಾಪಕ ಕೋಟಿ ರಾಮು ಕೊವಿಡ್​ಗೆ ಬಲಿ 

ಎಚ್ಚರ..ಗಾಳಿಯಲ್ಲೂ ಹರಡುತ್ತದೆ ಕೊರೊನಾ; ನೀವು ಸೋಂಕಿನಿಂದ ಪಾರಾಗಲು ತಪ್ಪದೆ ಈ ಮುನ್ನೆಚ್ಚರಿಕಾ ಕ್ರಮ ವಹಿಸಿ

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ