AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಬಲಿಯಾದ ಮತ್ತೋರ್ವ ಸ್ಯಾಂಡಲ್​ವುಡ್​ ಯುವ ನಿರ್ಮಾಪಕ

ಪೇಟ್ರೋಮ್ಯಾಕ್ಸ್ ಸಿನಿಮಾಗೆ ರಾಜಶೇಖರ್​ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡಿದ್ದರು. ಈ ಸಿನಿಮಾ ಆಗಲು ಅವರ ಪಾತ್ರ ತುಂಬಾನೇ ದೊಡ್ಡದಿದೆ ಎಂದು ನೀನಾಸಂ ಸತೀಶ್​ ಅಭಿಪ್ರಾಯಪಟ್ಟಿದ್ದಾರೆ.

ಕೊರೊನಾಗೆ ಬಲಿಯಾದ ಮತ್ತೋರ್ವ ಸ್ಯಾಂಡಲ್​ವುಡ್​ ಯುವ ನಿರ್ಮಾಪಕ
ಮೃತ ರಾಜು
ರಾಜೇಶ್ ದುಗ್ಗುಮನೆ
|

Updated on:Apr 30, 2021 | 9:11 PM

Share

ಕೊರೊನಾಗೆ ಇಡೀ ದೇಶ ತತ್ತರಿಸಿದೆ. ಇದಕ್ಕೆ ಚಿತ್ರರಂಗ ಕೂಡ ಹೊರತಾಗಿಲ್ಲ. ಸಾಕಷ್ಟು ನಿರ್ದೇಶಕರು, ನಟರು ಹಾಗೂ ನಿರ್ಮಾಪಕರು ಕೊರೊನಾಗೆ ಬಲಿಯಾಗುತ್ತಿದ್ದಾರೆ. ಈಗ ಕನ್ನಡದ ಯುವ ನಿರ್ಮಾಪಕ ರಾಜಶೇಖರ್ ಕೊರೊನಾಗೆ ಬಲಿಯಾಗಿದ್ದಾರೆ. ಈ ಬಗ್ಗೆ ನಟ ನೀನಾಸಂ ಸತೀಶ್​ ಬೇಸರ ಹೊರ ಹಾಕಿದ್ದಾರೆ.

ಪೇಟ್ರೋಮ್ಯಾಕ್ಸ್ ಸಿನಿಮಾಗೆ ರಾಜಶೇಖರ್​ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡಿದ್ದರು. ಈ ಸಿನಿಮಾ ಆಗಲು ಅವರ ಪಾತ್ರ ತುಂಬಾನೇ ದೊಡ್ಡದಿದೆ ಎಂದು ನೀನಾಸಂ ಸತೀಶ್​ ಅಭಿಪ್ರಾಯಪಟ್ಟಿದ್ದಾರೆ.

ರಾಜು ಕನ್ನಡ ಚಿತ್ರರಂಗದಲ್ಲಿ ಬದುಕು ಕಟ್ಟುವ ಹಂತದಲ್ಲಿದ್ದ ಮಹತ್ವಾಕಾಂಕ್ಷಿ. ನಮ್ಮ ಪೇಟ್ರೋಮ್ಯಾಕ್ಸ್ ಚಿತ್ರ ಆಗಲು ಮುಖ್ಯವಾದ ವ್ಯಕ್ತಿ. ಅವರ ಜತೆ ಜಗಳ, ಪ್ರೀತಿ ಎಲ್ಲವೂ ಇತ್ತು. ಕಾರ್ಯಕಾರಿ ನಿರ್ಮಾಪಕರಾಗಿ 2 ತಿಂಗಳು ನಮ್ಮ ಜೊತೆಗಿದ್ದರು. ಪೆಟ್ರೋಮ್ಯಾಕ್ಸ್ ಗೆದ್ದು ಅದರ ಅದ್ದೂರಿ ಸಮಾರಂಭ ಮಾಡುವ ಕನಸು ಕಂಡಿದ್ದರು ಎಂದು ಸತೀಶ್​ ತಮ್ಮ ಬರಹ ಆರಂಭಿಸಿದ್ದಾರೆ.

ರಾಜು ಯಾವಾಗಲು ನಗುತ್ತ ಸೆಟ್ ಅಲ್ಲಿ ಕೂತಿರುತ್ತಿದ್ದನ್ನು ನೆನಪಿಸಿಕೊಂಡರೆ ಎದೆಗೆ ಭರ್ಜಿ ಚುಚ್ಚಿದಂತಾಗುತ್ತದೆ. ಮೈಸೂರಿನಲ್ಲಿ ರಾತ್ರಿಯೆಲ್ಲ ಜೊತೆಗಿದ್ದು, ಕಾರು ಹತ್ತಿಸಿ ನಾವು ಗೆಲ್ತೀವಿ. ನಡೆಯಿರಿ ನೆಮ್ಮದಿಯಾಗಿ ನಿದ್ದೆ ಮಾಡಿ ಎಂದು ಹೇಳಿ ರಾಜು ನೀನು ಚಿರನಿದ್ರೆಗೆ ಜಾರಿದ್ದು ತಪ್ಪಲ್ಲವೇ? ಅಂತಿಮ ನಮನ ಸಲ್ಲಿಸಲು ನನಗೆ ಮನಸ್ಸಾಗುತ್ತಿಲ್ಲ ಕ್ಷಮಿಸಿ ಎಂದಿದ್ದಾರೆ.

ನಟ ನೀನಾಸಂ ಸತೀಶ್​ ಗುರುವಾರ (ಎಪ್ರಿಲ್​ 29) ವಿಡಿಯೋ ಮಾಡಿ ಹಂಚಿಕೊಂಡಿದ್ದರು. ನನ್ನ ದೊಡ್ಡಮ್ಮ ಕೊರೊನಾದಿಂದ ಮೃತಪಟ್ಟಿದ್ದರು. ಆದರೆ, ಅವರ ಮುಖ ನೋಡಲು ನನಗೆ ಸಾಧ್ಯವಾಗಿಲ್ಲ. ಹೀಗಾಗಿ, ಕೊರೊನಾ ಬಗ್ಗೆ ಎಚ್ಚರದಿಂದ ಇರಿ ಎಂದು ಸತೀಶ್​ ಕೇಳಿಕೊಂಡಿದ್ದರು. ಅದಾದ ಬೆನ್ನಲ್ಲೇ ಅವರದೇ ಸಿನಿಮಾದ ಕಾರ್ಯಕಾರಿ ನಿರ್ಮಾಪಕ ಮೃತಪಟ್ಟಿದ್ದು ಬೇಸರ ಮೂಡಿಸಿದೆ.

ಇದನ್ನೂ ಓದಿ: ಕೊರೊನಾ ಸೋಂಕಿಗೆ ತುತ್ತಾಗಿದ್ದ ರನ್ನ, ಅಣ್ಣಯ್ಯ, ಬಿಂದಾಸ್ ಸಿನಿಮಾ ಖ್ಯಾತಿಯ ನಿರ್ಮಾಪಕ ಚಂದ್ರಶೇಖರ್​ ಇನ್ನಿಲ್ಲ

Published On - 9:08 pm, Fri, 30 April 21

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ