AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಬಲಿಯಾದ ಮತ್ತೋರ್ವ ಸ್ಯಾಂಡಲ್​ವುಡ್​ ಯುವ ನಿರ್ಮಾಪಕ

ಪೇಟ್ರೋಮ್ಯಾಕ್ಸ್ ಸಿನಿಮಾಗೆ ರಾಜಶೇಖರ್​ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡಿದ್ದರು. ಈ ಸಿನಿಮಾ ಆಗಲು ಅವರ ಪಾತ್ರ ತುಂಬಾನೇ ದೊಡ್ಡದಿದೆ ಎಂದು ನೀನಾಸಂ ಸತೀಶ್​ ಅಭಿಪ್ರಾಯಪಟ್ಟಿದ್ದಾರೆ.

ಕೊರೊನಾಗೆ ಬಲಿಯಾದ ಮತ್ತೋರ್ವ ಸ್ಯಾಂಡಲ್​ವುಡ್​ ಯುವ ನಿರ್ಮಾಪಕ
ಮೃತ ರಾಜು
ರಾಜೇಶ್ ದುಗ್ಗುಮನೆ
|

Updated on:Apr 30, 2021 | 9:11 PM

Share

ಕೊರೊನಾಗೆ ಇಡೀ ದೇಶ ತತ್ತರಿಸಿದೆ. ಇದಕ್ಕೆ ಚಿತ್ರರಂಗ ಕೂಡ ಹೊರತಾಗಿಲ್ಲ. ಸಾಕಷ್ಟು ನಿರ್ದೇಶಕರು, ನಟರು ಹಾಗೂ ನಿರ್ಮಾಪಕರು ಕೊರೊನಾಗೆ ಬಲಿಯಾಗುತ್ತಿದ್ದಾರೆ. ಈಗ ಕನ್ನಡದ ಯುವ ನಿರ್ಮಾಪಕ ರಾಜಶೇಖರ್ ಕೊರೊನಾಗೆ ಬಲಿಯಾಗಿದ್ದಾರೆ. ಈ ಬಗ್ಗೆ ನಟ ನೀನಾಸಂ ಸತೀಶ್​ ಬೇಸರ ಹೊರ ಹಾಕಿದ್ದಾರೆ.

ಪೇಟ್ರೋಮ್ಯಾಕ್ಸ್ ಸಿನಿಮಾಗೆ ರಾಜಶೇಖರ್​ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡಿದ್ದರು. ಈ ಸಿನಿಮಾ ಆಗಲು ಅವರ ಪಾತ್ರ ತುಂಬಾನೇ ದೊಡ್ಡದಿದೆ ಎಂದು ನೀನಾಸಂ ಸತೀಶ್​ ಅಭಿಪ್ರಾಯಪಟ್ಟಿದ್ದಾರೆ.

ರಾಜು ಕನ್ನಡ ಚಿತ್ರರಂಗದಲ್ಲಿ ಬದುಕು ಕಟ್ಟುವ ಹಂತದಲ್ಲಿದ್ದ ಮಹತ್ವಾಕಾಂಕ್ಷಿ. ನಮ್ಮ ಪೇಟ್ರೋಮ್ಯಾಕ್ಸ್ ಚಿತ್ರ ಆಗಲು ಮುಖ್ಯವಾದ ವ್ಯಕ್ತಿ. ಅವರ ಜತೆ ಜಗಳ, ಪ್ರೀತಿ ಎಲ್ಲವೂ ಇತ್ತು. ಕಾರ್ಯಕಾರಿ ನಿರ್ಮಾಪಕರಾಗಿ 2 ತಿಂಗಳು ನಮ್ಮ ಜೊತೆಗಿದ್ದರು. ಪೆಟ್ರೋಮ್ಯಾಕ್ಸ್ ಗೆದ್ದು ಅದರ ಅದ್ದೂರಿ ಸಮಾರಂಭ ಮಾಡುವ ಕನಸು ಕಂಡಿದ್ದರು ಎಂದು ಸತೀಶ್​ ತಮ್ಮ ಬರಹ ಆರಂಭಿಸಿದ್ದಾರೆ.

ರಾಜು ಯಾವಾಗಲು ನಗುತ್ತ ಸೆಟ್ ಅಲ್ಲಿ ಕೂತಿರುತ್ತಿದ್ದನ್ನು ನೆನಪಿಸಿಕೊಂಡರೆ ಎದೆಗೆ ಭರ್ಜಿ ಚುಚ್ಚಿದಂತಾಗುತ್ತದೆ. ಮೈಸೂರಿನಲ್ಲಿ ರಾತ್ರಿಯೆಲ್ಲ ಜೊತೆಗಿದ್ದು, ಕಾರು ಹತ್ತಿಸಿ ನಾವು ಗೆಲ್ತೀವಿ. ನಡೆಯಿರಿ ನೆಮ್ಮದಿಯಾಗಿ ನಿದ್ದೆ ಮಾಡಿ ಎಂದು ಹೇಳಿ ರಾಜು ನೀನು ಚಿರನಿದ್ರೆಗೆ ಜಾರಿದ್ದು ತಪ್ಪಲ್ಲವೇ? ಅಂತಿಮ ನಮನ ಸಲ್ಲಿಸಲು ನನಗೆ ಮನಸ್ಸಾಗುತ್ತಿಲ್ಲ ಕ್ಷಮಿಸಿ ಎಂದಿದ್ದಾರೆ.

ನಟ ನೀನಾಸಂ ಸತೀಶ್​ ಗುರುವಾರ (ಎಪ್ರಿಲ್​ 29) ವಿಡಿಯೋ ಮಾಡಿ ಹಂಚಿಕೊಂಡಿದ್ದರು. ನನ್ನ ದೊಡ್ಡಮ್ಮ ಕೊರೊನಾದಿಂದ ಮೃತಪಟ್ಟಿದ್ದರು. ಆದರೆ, ಅವರ ಮುಖ ನೋಡಲು ನನಗೆ ಸಾಧ್ಯವಾಗಿಲ್ಲ. ಹೀಗಾಗಿ, ಕೊರೊನಾ ಬಗ್ಗೆ ಎಚ್ಚರದಿಂದ ಇರಿ ಎಂದು ಸತೀಶ್​ ಕೇಳಿಕೊಂಡಿದ್ದರು. ಅದಾದ ಬೆನ್ನಲ್ಲೇ ಅವರದೇ ಸಿನಿಮಾದ ಕಾರ್ಯಕಾರಿ ನಿರ್ಮಾಪಕ ಮೃತಪಟ್ಟಿದ್ದು ಬೇಸರ ಮೂಡಿಸಿದೆ.

ಇದನ್ನೂ ಓದಿ: ಕೊರೊನಾ ಸೋಂಕಿಗೆ ತುತ್ತಾಗಿದ್ದ ರನ್ನ, ಅಣ್ಣಯ್ಯ, ಬಿಂದಾಸ್ ಸಿನಿಮಾ ಖ್ಯಾತಿಯ ನಿರ್ಮಾಪಕ ಚಂದ್ರಶೇಖರ್​ ಇನ್ನಿಲ್ಲ

Published On - 9:08 pm, Fri, 30 April 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ