AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಾಪಕ ಸೌಂದರ್ಯ ಜಗದೀಶ್​ ಪುತ್ರ ಸ್ನೇಹಿತ್​ ಪುಂಡಾಟ ಕೇಸ್​ನಲ್ಲಿ ರಾಜಿಗೆ ಪ್ರಯತ್ನಿಸಿದ ಸ್ಟಾರ್​ ನಟ?

Soundarya Jagadish: ಸ್ನೇಹಿತ್​ನಿಂದ ಹಲ್ಲೆಗೆ ಒಳಗಾಗಿರುವ ರಜತ್​ ಮತ್ತು ಮಂಜುಳಾ ಪುರುಷೋತ್ತಮ್​ ಅವರಿಗೆ ಫೋನ್​ ಕರೆ ಹೋಗಿದೆ. ಕನ್ನಡದ ಓರ್ವ ಸ್ಟಾರ್​ ನಟ ಮತ್ತು ಓರ್ವ ಸ್ಟಾರ್​ ನಿರ್ಮಾಪಕ ಕರೆ ಮಾಡಿ ರಾಜಿ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ನಿರ್ಮಾಪಕ ಸೌಂದರ್ಯ ಜಗದೀಶ್​ ಪುತ್ರ ಸ್ನೇಹಿತ್​ ಪುಂಡಾಟ ಕೇಸ್​ನಲ್ಲಿ ರಾಜಿಗೆ ಪ್ರಯತ್ನಿಸಿದ ಸ್ಟಾರ್​ ನಟ?
ಸ್ನೇಹಿತ್​
TV9 Web
| Edited By: |

Updated on:Oct 25, 2021 | 2:45 PM

Share

Soundarya Jagadish | ನಿರ್ಮಾಪಕ ಸೌಂದರ್ಯ ಜಗದೀಶ್​ ಪುತ್ರ ಸ್ನೇಹಿತ್ ಅವರು ಈಸ್ಟ್ ವೆಸ್ಟ್ ಗ್ರೂಪ್ ಮಾಲೀಕ ರಜತ್ ಅವರ ಮನೆಗೆ ನುಗ್ಗಿ ಹಲ್ಲೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಅಪ್​ಡೇಟ್​ ಸಿಕ್ಕಿದೆ. 10 ಜನ ಬೌನ್ಸರ್ಸ್​ ಜೊತೆ ಬಂದು ಸ್ನೇಹಿತ್​ ಪುಂಡಾಟ ನಡೆಸಿದ್ದರು. ಆದರೆ ಈವರೆಗೂ ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ. ಕೇವಲ ನೋಟೀಸ್​ ನೀಡಲಾಗಿದೆ. ಇದರ ನಡುವೆ ಕೇಸ್​ನಲ್ಲಿ ರಾಜಿ ಮಾಡಿಸಲು ಸ್ಯಾಂಡಲ್​ವುಡ್​ನ ಸ್ಟಾರ್​ ನಟ ಹಾಗೂ ನಿರ್ಮಾಪಕರು ಪ್ರಯತ್ನ ಮಾಡುತ್ತಿದ್ದಾರೆ ಎಂಬ ಮಾಹಿತಿ ಹೇಳಿಬಂದಿದೆ.

ಸ್ನೇಹಿತ್​ನಿಂದ ಹಲ್ಲೆಗೆ ಒಳಗಾಗಿರುವ ರಜತ್​ ಮತ್ತು ಮಂಜುಳಾ ಪುರುಷೋತ್ತಮ್​ ಅವರಿಗೆ ಫೋನ್​ ಕರೆ ಹೋಗಿದೆ. ಕನ್ನಡದ ಓರ್ವ ಸ್ಟಾರ್​ ನಟ ಮತ್ತು ಓರ್ವ ಸ್ಟಾರ್​ ನಿರ್ಮಾಪಕ ಕರೆ ಮಾಡಿ ರಾಜಿ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಸ್ನೇಹಿತ್​ ಬಂಧನ ಆಗದಂತೆ ತಡೆಯಲು ಪ್ರಭಾವ ಕೂಡ ಹೇರಲಾಗುತ್ತಿದೆ. ಈ ಕಾರಣದಿಂದ ತನಿಖೆ ಮೇಲೆ ಅನುಮಾನ ಮೂಡುವಂತಾಗಿದೆ. ಪೊಲೀಸರ ಮೇಲೂ ಪ್ರಭಾವಿ ವ್ಯಕ್ತಿಗಳು ಒತ್ತಡ ಹೇರುತ್ತಿದ್ದಾರಾ ಎಂಬ ಪ್ರಶ್ನೆ ಎದುರಾಗಿದೆ.

ತನಿಖೆ ಸಂಬಂಧ ಸೌಂದರ್ಯ ಜಗದೀಶ್​ ನಿವಾಸಕ್ಕೆ ಇಬ್ಬರು ಪೊಲೀಸರು ಭೇಟಿ ನೀಡಿದ್ದಾರೆ. ಮಹಾಲಕ್ಷ್ಮೀ ಲೇಔಟ್​ ಠಾಣೆಯ ಪೊಲೀಸ್ ಸಿಬ್ಬಂದಿ ಭೇಟಿ ನೀಡಿದಾಗ ಮನೆ ಬಾಗಿಲು ತೆಗೆಯದೆ ಹೈಡ್ರಾಮಾ ಮಾಡಲಾಗಿದೆ. ಕುಟುಂಬಸ್ಥರು ಕೆಲಹೊತ್ತು ಬಾಗಿಲು ತೆಗೆಯಲಿಲ್ಲ. ಹಲ್ಲೆಯಲ್ಲಿ ಜಗದೀಶ್​ ಮನೆ ಕೆಲಸದ ಭುವನಾ ಭಾಗಿಯಾಗಿದ್ದರು. ಅವರನ್ನು ಕೂಡ ವಿಚಾರಣೆಗೆ ಒಳಪಡಿಸಲಾಗುತ್ತಿದೆ.

ಸ್ನೇಹಿತ್​ ಹಾಗೂ ಅವರ ಗೆಳೆಯರು ಈ ರೀತಿ ಹಲ್ಲೆ ವಿಚಾರದಲ್ಲಿ ಸುದ್ದಿಯಾಗಿದ್ದು ಇದೇ ಮೊದಲೇನಲ್ಲ. ಈ ಹಿಂದೆಯೂ ಸ್ನೇಹಿತ್ ಮತ್ತು ಅವರ ಟೀಮ್ ಮೂರು ಬಾರಿ ಇದೇ ರೀತಿ ಹಲ್ಲೆ ಮಾಡಿತ್ತು. ಇದು ಸಣ್ಣ ವಿಚಾರ ಎಂದು ರಜತ್ ಕುಟುಂಬದವರು ಸುಮ್ಮನೆ ಇದ್ದರು. ಆದರೆ, ಇದು ಪದೇಪದೇ ಪುನರಾವರ್ತನೆ ಆಗುತ್ತಿರುವುದರಿಂದ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಇದನ್ನೂ ಓದಿ:

Snehith: ಹಲ್ಲೆ ಆರೋಪ; ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಸ್ನೇಹಿತ್ ಹಾಗೂ ಇತರರ ವಿರುದ್ಧ ಎಫ್​ಐಆರ್ ದಾಖಲು

ಸ್ಯಾಂಡಲ್​ವುಡ್​ ನಿರ್ಮಾಪಕನ ಮಗನ ಪುಂಡಾಟ? ಕಸ ಗುಡಿಸುವಾಗ ಧೂಳು ಬಿದ್ದಿದ್ದಕ್ಕೆ ರಕ್ತಬರುವಂತೆ ಹಲ್ಲೆ

Published On - 2:09 pm, Mon, 25 October 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!