AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಾಪಕ ಸೌಂದರ್ಯ ಜಗದೀಶ್​ ಪುತ್ರ ಸ್ನೇಹಿತ್​ ಪುಂಡಾಟ ಕೇಸ್​ನಲ್ಲಿ ರಾಜಿಗೆ ಪ್ರಯತ್ನಿಸಿದ ಸ್ಟಾರ್​ ನಟ?

Soundarya Jagadish: ಸ್ನೇಹಿತ್​ನಿಂದ ಹಲ್ಲೆಗೆ ಒಳಗಾಗಿರುವ ರಜತ್​ ಮತ್ತು ಮಂಜುಳಾ ಪುರುಷೋತ್ತಮ್​ ಅವರಿಗೆ ಫೋನ್​ ಕರೆ ಹೋಗಿದೆ. ಕನ್ನಡದ ಓರ್ವ ಸ್ಟಾರ್​ ನಟ ಮತ್ತು ಓರ್ವ ಸ್ಟಾರ್​ ನಿರ್ಮಾಪಕ ಕರೆ ಮಾಡಿ ರಾಜಿ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ನಿರ್ಮಾಪಕ ಸೌಂದರ್ಯ ಜಗದೀಶ್​ ಪುತ್ರ ಸ್ನೇಹಿತ್​ ಪುಂಡಾಟ ಕೇಸ್​ನಲ್ಲಿ ರಾಜಿಗೆ ಪ್ರಯತ್ನಿಸಿದ ಸ್ಟಾರ್​ ನಟ?
ಸ್ನೇಹಿತ್​
TV9 Web
| Edited By: |

Updated on:Oct 25, 2021 | 2:45 PM

Share

Soundarya Jagadish | ನಿರ್ಮಾಪಕ ಸೌಂದರ್ಯ ಜಗದೀಶ್​ ಪುತ್ರ ಸ್ನೇಹಿತ್ ಅವರು ಈಸ್ಟ್ ವೆಸ್ಟ್ ಗ್ರೂಪ್ ಮಾಲೀಕ ರಜತ್ ಅವರ ಮನೆಗೆ ನುಗ್ಗಿ ಹಲ್ಲೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಅಪ್​ಡೇಟ್​ ಸಿಕ್ಕಿದೆ. 10 ಜನ ಬೌನ್ಸರ್ಸ್​ ಜೊತೆ ಬಂದು ಸ್ನೇಹಿತ್​ ಪುಂಡಾಟ ನಡೆಸಿದ್ದರು. ಆದರೆ ಈವರೆಗೂ ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ. ಕೇವಲ ನೋಟೀಸ್​ ನೀಡಲಾಗಿದೆ. ಇದರ ನಡುವೆ ಕೇಸ್​ನಲ್ಲಿ ರಾಜಿ ಮಾಡಿಸಲು ಸ್ಯಾಂಡಲ್​ವುಡ್​ನ ಸ್ಟಾರ್​ ನಟ ಹಾಗೂ ನಿರ್ಮಾಪಕರು ಪ್ರಯತ್ನ ಮಾಡುತ್ತಿದ್ದಾರೆ ಎಂಬ ಮಾಹಿತಿ ಹೇಳಿಬಂದಿದೆ.

ಸ್ನೇಹಿತ್​ನಿಂದ ಹಲ್ಲೆಗೆ ಒಳಗಾಗಿರುವ ರಜತ್​ ಮತ್ತು ಮಂಜುಳಾ ಪುರುಷೋತ್ತಮ್​ ಅವರಿಗೆ ಫೋನ್​ ಕರೆ ಹೋಗಿದೆ. ಕನ್ನಡದ ಓರ್ವ ಸ್ಟಾರ್​ ನಟ ಮತ್ತು ಓರ್ವ ಸ್ಟಾರ್​ ನಿರ್ಮಾಪಕ ಕರೆ ಮಾಡಿ ರಾಜಿ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಸ್ನೇಹಿತ್​ ಬಂಧನ ಆಗದಂತೆ ತಡೆಯಲು ಪ್ರಭಾವ ಕೂಡ ಹೇರಲಾಗುತ್ತಿದೆ. ಈ ಕಾರಣದಿಂದ ತನಿಖೆ ಮೇಲೆ ಅನುಮಾನ ಮೂಡುವಂತಾಗಿದೆ. ಪೊಲೀಸರ ಮೇಲೂ ಪ್ರಭಾವಿ ವ್ಯಕ್ತಿಗಳು ಒತ್ತಡ ಹೇರುತ್ತಿದ್ದಾರಾ ಎಂಬ ಪ್ರಶ್ನೆ ಎದುರಾಗಿದೆ.

ತನಿಖೆ ಸಂಬಂಧ ಸೌಂದರ್ಯ ಜಗದೀಶ್​ ನಿವಾಸಕ್ಕೆ ಇಬ್ಬರು ಪೊಲೀಸರು ಭೇಟಿ ನೀಡಿದ್ದಾರೆ. ಮಹಾಲಕ್ಷ್ಮೀ ಲೇಔಟ್​ ಠಾಣೆಯ ಪೊಲೀಸ್ ಸಿಬ್ಬಂದಿ ಭೇಟಿ ನೀಡಿದಾಗ ಮನೆ ಬಾಗಿಲು ತೆಗೆಯದೆ ಹೈಡ್ರಾಮಾ ಮಾಡಲಾಗಿದೆ. ಕುಟುಂಬಸ್ಥರು ಕೆಲಹೊತ್ತು ಬಾಗಿಲು ತೆಗೆಯಲಿಲ್ಲ. ಹಲ್ಲೆಯಲ್ಲಿ ಜಗದೀಶ್​ ಮನೆ ಕೆಲಸದ ಭುವನಾ ಭಾಗಿಯಾಗಿದ್ದರು. ಅವರನ್ನು ಕೂಡ ವಿಚಾರಣೆಗೆ ಒಳಪಡಿಸಲಾಗುತ್ತಿದೆ.

ಸ್ನೇಹಿತ್​ ಹಾಗೂ ಅವರ ಗೆಳೆಯರು ಈ ರೀತಿ ಹಲ್ಲೆ ವಿಚಾರದಲ್ಲಿ ಸುದ್ದಿಯಾಗಿದ್ದು ಇದೇ ಮೊದಲೇನಲ್ಲ. ಈ ಹಿಂದೆಯೂ ಸ್ನೇಹಿತ್ ಮತ್ತು ಅವರ ಟೀಮ್ ಮೂರು ಬಾರಿ ಇದೇ ರೀತಿ ಹಲ್ಲೆ ಮಾಡಿತ್ತು. ಇದು ಸಣ್ಣ ವಿಚಾರ ಎಂದು ರಜತ್ ಕುಟುಂಬದವರು ಸುಮ್ಮನೆ ಇದ್ದರು. ಆದರೆ, ಇದು ಪದೇಪದೇ ಪುನರಾವರ್ತನೆ ಆಗುತ್ತಿರುವುದರಿಂದ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಇದನ್ನೂ ಓದಿ:

Snehith: ಹಲ್ಲೆ ಆರೋಪ; ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಸ್ನೇಹಿತ್ ಹಾಗೂ ಇತರರ ವಿರುದ್ಧ ಎಫ್​ಐಆರ್ ದಾಖಲು

ಸ್ಯಾಂಡಲ್​ವುಡ್​ ನಿರ್ಮಾಪಕನ ಮಗನ ಪುಂಡಾಟ? ಕಸ ಗುಡಿಸುವಾಗ ಧೂಳು ಬಿದ್ದಿದ್ದಕ್ಕೆ ರಕ್ತಬರುವಂತೆ ಹಲ್ಲೆ

Published On - 2:09 pm, Mon, 25 October 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್