AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಾಪಕ ಸೌಂದರ್ಯ ಜಗದೀಶ್​ ಪುತ್ರ ಸ್ನೇಹಿತ್​ ಪುಂಡಾಟ ಕೇಸ್​ನಲ್ಲಿ ರಾಜಿಗೆ ಪ್ರಯತ್ನಿಸಿದ ಸ್ಟಾರ್​ ನಟ?

Soundarya Jagadish: ಸ್ನೇಹಿತ್​ನಿಂದ ಹಲ್ಲೆಗೆ ಒಳಗಾಗಿರುವ ರಜತ್​ ಮತ್ತು ಮಂಜುಳಾ ಪುರುಷೋತ್ತಮ್​ ಅವರಿಗೆ ಫೋನ್​ ಕರೆ ಹೋಗಿದೆ. ಕನ್ನಡದ ಓರ್ವ ಸ್ಟಾರ್​ ನಟ ಮತ್ತು ಓರ್ವ ಸ್ಟಾರ್​ ನಿರ್ಮಾಪಕ ಕರೆ ಮಾಡಿ ರಾಜಿ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ನಿರ್ಮಾಪಕ ಸೌಂದರ್ಯ ಜಗದೀಶ್​ ಪುತ್ರ ಸ್ನೇಹಿತ್​ ಪುಂಡಾಟ ಕೇಸ್​ನಲ್ಲಿ ರಾಜಿಗೆ ಪ್ರಯತ್ನಿಸಿದ ಸ್ಟಾರ್​ ನಟ?
ಸ್ನೇಹಿತ್​
TV9 Web
| Edited By: |

Updated on:Oct 25, 2021 | 2:45 PM

Share

Soundarya Jagadish | ನಿರ್ಮಾಪಕ ಸೌಂದರ್ಯ ಜಗದೀಶ್​ ಪುತ್ರ ಸ್ನೇಹಿತ್ ಅವರು ಈಸ್ಟ್ ವೆಸ್ಟ್ ಗ್ರೂಪ್ ಮಾಲೀಕ ರಜತ್ ಅವರ ಮನೆಗೆ ನುಗ್ಗಿ ಹಲ್ಲೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಅಪ್​ಡೇಟ್​ ಸಿಕ್ಕಿದೆ. 10 ಜನ ಬೌನ್ಸರ್ಸ್​ ಜೊತೆ ಬಂದು ಸ್ನೇಹಿತ್​ ಪುಂಡಾಟ ನಡೆಸಿದ್ದರು. ಆದರೆ ಈವರೆಗೂ ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ. ಕೇವಲ ನೋಟೀಸ್​ ನೀಡಲಾಗಿದೆ. ಇದರ ನಡುವೆ ಕೇಸ್​ನಲ್ಲಿ ರಾಜಿ ಮಾಡಿಸಲು ಸ್ಯಾಂಡಲ್​ವುಡ್​ನ ಸ್ಟಾರ್​ ನಟ ಹಾಗೂ ನಿರ್ಮಾಪಕರು ಪ್ರಯತ್ನ ಮಾಡುತ್ತಿದ್ದಾರೆ ಎಂಬ ಮಾಹಿತಿ ಹೇಳಿಬಂದಿದೆ.

ಸ್ನೇಹಿತ್​ನಿಂದ ಹಲ್ಲೆಗೆ ಒಳಗಾಗಿರುವ ರಜತ್​ ಮತ್ತು ಮಂಜುಳಾ ಪುರುಷೋತ್ತಮ್​ ಅವರಿಗೆ ಫೋನ್​ ಕರೆ ಹೋಗಿದೆ. ಕನ್ನಡದ ಓರ್ವ ಸ್ಟಾರ್​ ನಟ ಮತ್ತು ಓರ್ವ ಸ್ಟಾರ್​ ನಿರ್ಮಾಪಕ ಕರೆ ಮಾಡಿ ರಾಜಿ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಸ್ನೇಹಿತ್​ ಬಂಧನ ಆಗದಂತೆ ತಡೆಯಲು ಪ್ರಭಾವ ಕೂಡ ಹೇರಲಾಗುತ್ತಿದೆ. ಈ ಕಾರಣದಿಂದ ತನಿಖೆ ಮೇಲೆ ಅನುಮಾನ ಮೂಡುವಂತಾಗಿದೆ. ಪೊಲೀಸರ ಮೇಲೂ ಪ್ರಭಾವಿ ವ್ಯಕ್ತಿಗಳು ಒತ್ತಡ ಹೇರುತ್ತಿದ್ದಾರಾ ಎಂಬ ಪ್ರಶ್ನೆ ಎದುರಾಗಿದೆ.

ತನಿಖೆ ಸಂಬಂಧ ಸೌಂದರ್ಯ ಜಗದೀಶ್​ ನಿವಾಸಕ್ಕೆ ಇಬ್ಬರು ಪೊಲೀಸರು ಭೇಟಿ ನೀಡಿದ್ದಾರೆ. ಮಹಾಲಕ್ಷ್ಮೀ ಲೇಔಟ್​ ಠಾಣೆಯ ಪೊಲೀಸ್ ಸಿಬ್ಬಂದಿ ಭೇಟಿ ನೀಡಿದಾಗ ಮನೆ ಬಾಗಿಲು ತೆಗೆಯದೆ ಹೈಡ್ರಾಮಾ ಮಾಡಲಾಗಿದೆ. ಕುಟುಂಬಸ್ಥರು ಕೆಲಹೊತ್ತು ಬಾಗಿಲು ತೆಗೆಯಲಿಲ್ಲ. ಹಲ್ಲೆಯಲ್ಲಿ ಜಗದೀಶ್​ ಮನೆ ಕೆಲಸದ ಭುವನಾ ಭಾಗಿಯಾಗಿದ್ದರು. ಅವರನ್ನು ಕೂಡ ವಿಚಾರಣೆಗೆ ಒಳಪಡಿಸಲಾಗುತ್ತಿದೆ.

ಸ್ನೇಹಿತ್​ ಹಾಗೂ ಅವರ ಗೆಳೆಯರು ಈ ರೀತಿ ಹಲ್ಲೆ ವಿಚಾರದಲ್ಲಿ ಸುದ್ದಿಯಾಗಿದ್ದು ಇದೇ ಮೊದಲೇನಲ್ಲ. ಈ ಹಿಂದೆಯೂ ಸ್ನೇಹಿತ್ ಮತ್ತು ಅವರ ಟೀಮ್ ಮೂರು ಬಾರಿ ಇದೇ ರೀತಿ ಹಲ್ಲೆ ಮಾಡಿತ್ತು. ಇದು ಸಣ್ಣ ವಿಚಾರ ಎಂದು ರಜತ್ ಕುಟುಂಬದವರು ಸುಮ್ಮನೆ ಇದ್ದರು. ಆದರೆ, ಇದು ಪದೇಪದೇ ಪುನರಾವರ್ತನೆ ಆಗುತ್ತಿರುವುದರಿಂದ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಇದನ್ನೂ ಓದಿ:

Snehith: ಹಲ್ಲೆ ಆರೋಪ; ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಸ್ನೇಹಿತ್ ಹಾಗೂ ಇತರರ ವಿರುದ್ಧ ಎಫ್​ಐಆರ್ ದಾಖಲು

ಸ್ಯಾಂಡಲ್​ವುಡ್​ ನಿರ್ಮಾಪಕನ ಮಗನ ಪುಂಡಾಟ? ಕಸ ಗುಡಿಸುವಾಗ ಧೂಳು ಬಿದ್ದಿದ್ದಕ್ಕೆ ರಕ್ತಬರುವಂತೆ ಹಲ್ಲೆ

Published On - 2:09 pm, Mon, 25 October 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್