AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಾಪಕ ಸೌಂದರ್ಯ ಜಗದೀಶ್​ ಪುತ್ರ ಸ್ನೇಹಿತ್​ ಪುಂಡಾಟ ಕೇಸ್​ನಲ್ಲಿ ರಾಜಿಗೆ ಪ್ರಯತ್ನಿಸಿದ ಸ್ಟಾರ್​ ನಟ?

Soundarya Jagadish: ಸ್ನೇಹಿತ್​ನಿಂದ ಹಲ್ಲೆಗೆ ಒಳಗಾಗಿರುವ ರಜತ್​ ಮತ್ತು ಮಂಜುಳಾ ಪುರುಷೋತ್ತಮ್​ ಅವರಿಗೆ ಫೋನ್​ ಕರೆ ಹೋಗಿದೆ. ಕನ್ನಡದ ಓರ್ವ ಸ್ಟಾರ್​ ನಟ ಮತ್ತು ಓರ್ವ ಸ್ಟಾರ್​ ನಿರ್ಮಾಪಕ ಕರೆ ಮಾಡಿ ರಾಜಿ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ನಿರ್ಮಾಪಕ ಸೌಂದರ್ಯ ಜಗದೀಶ್​ ಪುತ್ರ ಸ್ನೇಹಿತ್​ ಪುಂಡಾಟ ಕೇಸ್​ನಲ್ಲಿ ರಾಜಿಗೆ ಪ್ರಯತ್ನಿಸಿದ ಸ್ಟಾರ್​ ನಟ?
ಸ್ನೇಹಿತ್​
TV9 Web
| Edited By: |

Updated on:Oct 25, 2021 | 2:45 PM

Share

Soundarya Jagadish | ನಿರ್ಮಾಪಕ ಸೌಂದರ್ಯ ಜಗದೀಶ್​ ಪುತ್ರ ಸ್ನೇಹಿತ್ ಅವರು ಈಸ್ಟ್ ವೆಸ್ಟ್ ಗ್ರೂಪ್ ಮಾಲೀಕ ರಜತ್ ಅವರ ಮನೆಗೆ ನುಗ್ಗಿ ಹಲ್ಲೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಅಪ್​ಡೇಟ್​ ಸಿಕ್ಕಿದೆ. 10 ಜನ ಬೌನ್ಸರ್ಸ್​ ಜೊತೆ ಬಂದು ಸ್ನೇಹಿತ್​ ಪುಂಡಾಟ ನಡೆಸಿದ್ದರು. ಆದರೆ ಈವರೆಗೂ ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ. ಕೇವಲ ನೋಟೀಸ್​ ನೀಡಲಾಗಿದೆ. ಇದರ ನಡುವೆ ಕೇಸ್​ನಲ್ಲಿ ರಾಜಿ ಮಾಡಿಸಲು ಸ್ಯಾಂಡಲ್​ವುಡ್​ನ ಸ್ಟಾರ್​ ನಟ ಹಾಗೂ ನಿರ್ಮಾಪಕರು ಪ್ರಯತ್ನ ಮಾಡುತ್ತಿದ್ದಾರೆ ಎಂಬ ಮಾಹಿತಿ ಹೇಳಿಬಂದಿದೆ.

ಸ್ನೇಹಿತ್​ನಿಂದ ಹಲ್ಲೆಗೆ ಒಳಗಾಗಿರುವ ರಜತ್​ ಮತ್ತು ಮಂಜುಳಾ ಪುರುಷೋತ್ತಮ್​ ಅವರಿಗೆ ಫೋನ್​ ಕರೆ ಹೋಗಿದೆ. ಕನ್ನಡದ ಓರ್ವ ಸ್ಟಾರ್​ ನಟ ಮತ್ತು ಓರ್ವ ಸ್ಟಾರ್​ ನಿರ್ಮಾಪಕ ಕರೆ ಮಾಡಿ ರಾಜಿ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಸ್ನೇಹಿತ್​ ಬಂಧನ ಆಗದಂತೆ ತಡೆಯಲು ಪ್ರಭಾವ ಕೂಡ ಹೇರಲಾಗುತ್ತಿದೆ. ಈ ಕಾರಣದಿಂದ ತನಿಖೆ ಮೇಲೆ ಅನುಮಾನ ಮೂಡುವಂತಾಗಿದೆ. ಪೊಲೀಸರ ಮೇಲೂ ಪ್ರಭಾವಿ ವ್ಯಕ್ತಿಗಳು ಒತ್ತಡ ಹೇರುತ್ತಿದ್ದಾರಾ ಎಂಬ ಪ್ರಶ್ನೆ ಎದುರಾಗಿದೆ.

ತನಿಖೆ ಸಂಬಂಧ ಸೌಂದರ್ಯ ಜಗದೀಶ್​ ನಿವಾಸಕ್ಕೆ ಇಬ್ಬರು ಪೊಲೀಸರು ಭೇಟಿ ನೀಡಿದ್ದಾರೆ. ಮಹಾಲಕ್ಷ್ಮೀ ಲೇಔಟ್​ ಠಾಣೆಯ ಪೊಲೀಸ್ ಸಿಬ್ಬಂದಿ ಭೇಟಿ ನೀಡಿದಾಗ ಮನೆ ಬಾಗಿಲು ತೆಗೆಯದೆ ಹೈಡ್ರಾಮಾ ಮಾಡಲಾಗಿದೆ. ಕುಟುಂಬಸ್ಥರು ಕೆಲಹೊತ್ತು ಬಾಗಿಲು ತೆಗೆಯಲಿಲ್ಲ. ಹಲ್ಲೆಯಲ್ಲಿ ಜಗದೀಶ್​ ಮನೆ ಕೆಲಸದ ಭುವನಾ ಭಾಗಿಯಾಗಿದ್ದರು. ಅವರನ್ನು ಕೂಡ ವಿಚಾರಣೆಗೆ ಒಳಪಡಿಸಲಾಗುತ್ತಿದೆ.

ಸ್ನೇಹಿತ್​ ಹಾಗೂ ಅವರ ಗೆಳೆಯರು ಈ ರೀತಿ ಹಲ್ಲೆ ವಿಚಾರದಲ್ಲಿ ಸುದ್ದಿಯಾಗಿದ್ದು ಇದೇ ಮೊದಲೇನಲ್ಲ. ಈ ಹಿಂದೆಯೂ ಸ್ನೇಹಿತ್ ಮತ್ತು ಅವರ ಟೀಮ್ ಮೂರು ಬಾರಿ ಇದೇ ರೀತಿ ಹಲ್ಲೆ ಮಾಡಿತ್ತು. ಇದು ಸಣ್ಣ ವಿಚಾರ ಎಂದು ರಜತ್ ಕುಟುಂಬದವರು ಸುಮ್ಮನೆ ಇದ್ದರು. ಆದರೆ, ಇದು ಪದೇಪದೇ ಪುನರಾವರ್ತನೆ ಆಗುತ್ತಿರುವುದರಿಂದ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಇದನ್ನೂ ಓದಿ:

Snehith: ಹಲ್ಲೆ ಆರೋಪ; ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಸ್ನೇಹಿತ್ ಹಾಗೂ ಇತರರ ವಿರುದ್ಧ ಎಫ್​ಐಆರ್ ದಾಖಲು

ಸ್ಯಾಂಡಲ್​ವುಡ್​ ನಿರ್ಮಾಪಕನ ಮಗನ ಪುಂಡಾಟ? ಕಸ ಗುಡಿಸುವಾಗ ಧೂಳು ಬಿದ್ದಿದ್ದಕ್ಕೆ ರಕ್ತಬರುವಂತೆ ಹಲ್ಲೆ

Published On - 2:09 pm, Mon, 25 October 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ