AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘100 ಕೋಟಿ ರೂ. ಅಲ್ಲ ಎಂದಿದ್ದರೆ ನಾನು ಈ ಕೆಲಸ ಮಾಡ್ತಿರಲಿಲ್ಲ’; ಚೇತನ್​ ಸಿನಿಮಾ ಬಗ್ಗೆ ರಮ್ಯಾ ಮಾತು

Ramya Divya Spandana: ಚೇತನ್ ಕುಮಾರ್​​ ಅಭಿನಯಿಸಿರುವ ‘100 ಕ್ರೋರ್ಸ್​’ ಸಿನಿಮಾದ ಟೀಸರ್​ ಲಾಂಚ್​​ ಆಗುತ್ತಿದೆ. ಇದನ್ನು ‘ಸ್ಯಾಂಡಲ್​ವುಡ್​ ಕ್ವೀನ್​’ ರಮ್ಯಾ ಅವರು ರಿಲೀಸ್​ ಮಾಡಲಿದ್ದಾರೆ ಎಂಬುದು ವಿಶೇಷ.

‘100 ಕೋಟಿ ರೂ. ಅಲ್ಲ ಎಂದಿದ್ದರೆ ನಾನು ಈ ಕೆಲಸ ಮಾಡ್ತಿರಲಿಲ್ಲ’; ಚೇತನ್​ ಸಿನಿಮಾ ಬಗ್ಗೆ ರಮ್ಯಾ ಮಾತು
ಚೇತನ್​ ಕುಮಾರ್, ರಮ್ಯಾ
TV9 Web
| Edited By: |

Updated on: Dec 23, 2021 | 8:38 AM

Share

ನಟಿ ರಮ್ಯಾ (Ramya Divya Spandana) ಅವರು ನಟನೆಯಿಂದ ದೂರು ಉಳಿದುಕೊಂಡಿದ್ದರೂ ಕೂಡ ಕನ್ನಡ ಚಿತ್ರರಂಗದ ಅನೇಕರ ಜೊತೆ ಸಂಪರ್ಕ ಹೊಂದಿದ್ದಾರೆ. ಅನೇಕ ಸೆಲೆಬ್ರಿಟಿಗಳ ಜೊತೆ ಅವರ ಒಡನಾಟ ಮುಂದುವರಿದಿದೆ. ಇತ್ತೀಚೆಗೆ ಅವರು ಹಲವು ಸಿನಿಮಾಗಳ ಕುರಿತು ಮಾತನಾಡುತ್ತಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ಕನ್ನಡ ಸಿನಿಮಾಗಳ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಈಗ ‘ಆ ದಿನಗಳು’ ಖ್ಯಾತಿಯ ನಟ ಚೇತನ್ ಕುಮಾರ್ (Chetan Kumar)​​ ಅವರ ಹೊಸ ಸಿನಿಮಾ ‘100 ಕ್ರೋರ್ಸ್​’ (100 Crores Movie) ಚಿತ್ರಕ್ಕೆ ಅವರು ಸಾಥ್​ ನೀಡಿದ್ದಾರೆ. ಈ ಚಿತ್ರದ ಟೀಸರ್​ ಬಿಡುಗಡೆ ಮಾಡಲು ಅವರು ಒಪ್ಪಿಕೊಂಡಿದ್ದಾರೆ. 

ಸಾಮಾಜಿಕ ಹೋರಾಟ ಮತ್ತು ಸಿನಿಮಾ ಎರಡೂ ಕ್ಷೇತ್ರದಲ್ಲಿ ಸಕ್ರಿಯವಾಗಿರುವವರು ನಟ ಚೇತನ್ ಕುಮಾರ್​​. ಸಿನಿಮಾಗಳ ಆಯ್ಕೆಯಲ್ಲಿ ಅವರು ತುಂಬ ಚ್ಯೂಸಿ. ಅವರು ಅಭಿನಯಿಸಿರುವ ‘100 ಕ್ರೋರ್ಸ್​’ ಸಿನಿಮಾದ ಟೀಸರ್​ ಲಾಂಚ್​​ ಈಗ ಆಗುತ್ತಿದೆ. ಡಿ.24ರಂದು ಬೆಳಗ್ಗೆ 9 ಗಂಟೆಗೆ ಟೀಸರ್​ ಬಿಡುಗಡೆ ಆಗಲಿದೆ. ಇದನ್ನು ‘ಸ್ಯಾಂಡಲ್​ವುಡ್​ ಕ್ವೀನ್​’ ರಮ್ಯಾ ಅವರು ರಿಲೀಸ್​ ಮಾಡಲಿದ್ದಾರೆ ಎಂಬುದು ವಿಶೇಷ. ಈ ವಿಚಾರವನ್ನು ಚೇತನ್​ ಅವರು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

ಟೀಸರ್​ ಬಿಡುಗಡೆ ಕುರಿತು ಚೇತನ್​ ಮಾಡಿರುವ ಪೋಸ್ಟ್​ ಅನ್ನು ರಮ್ಯಾ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ‘100 ಕೋಟಿ ರೂಪಾಯಿಗೋಸ್ಕರ ಅಲ್ಲ ಎಂದಿದ್ದರೆ ನಾನು ಈ ಕೆಲಸ ಮಾಡುತ್ತಿರಲಿಲ್ಲ. ಸುಮ್ಮನೆ ತಮಾಷೆಗೆ ಹಾಗಂದೆ! ಚೇತನ್​ ಅವರೇ, ನಿಮಗಾಗಿ ಏನು ಬೇಕಾದರೂ ಮಾಡುತ್ತೇನೆ’ ಎಂದು ರಮ್ಯಾ ಬರೆದುಕೊಂಡಿದ್ದಾರೆ.

ಕನ್ನಡ ಚಿತ್ರಗಳಿಗೆ ರಮ್ಯಾ ಪ್ರೋತ್ಸಾಹ:

ಕನ್ನಡದಲ್ಲಿ ರಿಲೀಸ್​ ಆಗುತ್ತಿರುವ ಚಿತ್ರಗಳ ಬಗ್ಗೆ ರಮ್ಯಾ ಅವರು ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಈ ವಾರ (ಡಿ.24) ನಿಖಿಲ್​ ಕುಮಾರಸ್ವಾಮಿ ನಟನೆಯ ‘ರೈಡರ್​’ ಮತ್ತು ಡಾಲಿ ಧನಂಜಯ ಅಭಿನಯದ ‘ಬಡವ ರಾಸ್ಕಲ್​’ ಚಿತ್ರಗಳು ತೆರೆಕಾಣುತ್ತಿವೆ. ಆ ಸಿನಿಮಾಗಳಿಗೆ ರಮ್ಯಾ ಶುಭ ಕೋರಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ರಮ್ಯಾ ಆಕ್ಟೀವ್​ ಆಗಿದ್ದಾರೆ. ಇನ್​ಸ್ಟಾಗ್ರಾಮ್​ ಮೂಲಕ ಅವರು ಅವರು ಅಭಿಮಾನಿಗಳಿಗೆ ಆಗಾಗ ಅಪ್​ಡೇಟ್​ ನೀಡುತ್ತ ಇರುತ್ತಾರೆ. ಅವರು ಇನ್​ಸ್ಟಾಗ್ರಾಮ್ ಸ್ಟೋರಿ ಮೂಲಕ ‘ರೈಡರ್​’ ಮತ್ತು ‘ಬಡವ ರಾಸ್ಕಲ್​’ ಚಿತ್ರಗಳ ಮೇಲೆ ತಮಗೆ ಎಷ್ಟು ನಿರೀಕ್ಷೆ ಇದೆ ಎಂಬುದನ್ನು ತಿಳಿಸಿದ್ದಾರೆ. ‘ರೈಡರ್’​ ಚಿತ್ರದ ಟೀಸರ್​ ಹಂಚಿಕೊಂಡು ನಿಖಿಲ್​ ಕುಮಾರಸ್ವಾಮಿ ಅವರಿಗೆ ರಮ್ಯಾ ಶುಭ ಕೋರಿದ್ದಾರೆ. ಅದೇ ರೀತಿ ‘ಬಡವ ರಾಸ್ಕಲ್​’ ಚಿತ್ರದ ಪೋಸ್ಟರ್​ ಶೇರ್​ ಮಾಡಿಕೊಂಡಿರುವ ಅವರು ಇಡೀ ತಂಡಕ್ಕೆ ಆಲ್​ ದಿ ಬೆಸ್ಟ್​ ಹೇಳಿದ್ದಾರೆ. ಧನಂಜಯ ಅವರಿಗೆ ರಮ್ಯಾ ಕಡೆಯಿಂದ ಈ ರೀತಿ ಪ್ರೋತ್ಸಾಹ ಮತ್ತು ಮೆಚ್ಚುಗೆಯ ಮಾತುಗಳು ಸಿಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ‘ರತ್ನನ್​ ಪ್ರಪಂಚ’ ಸಿನಿಮಾ ಬಿಡುಗಡೆ ಆದಾಗಲೂ ಅವರು ಪ್ರೀತಿ ತೋರಿಸಿದ್ದರು.

ಇದನ್ನೂ ಓದಿ:

ರಮ್ಯಾ ಜನ್ಮದಿನ; ‘ಸ್ಯಾಂಡಲ್​ವುಡ್​ ಕ್ವೀನ್​’ 39ನೇ ವರ್ಷದ ಹುಟ್ಟುಹಬ್ಬಕ್ಕೆ ಶುಭಾಶಯಗಳ ಸುರಿಮಳೆ

ಹಿಂದುತ್ವ ಮತ್ತು ಹಿಂದೂಯಿಸಂ ನಡುವಿನ ವ್ಯತ್ಯಾಸ ತಿಳಿಸಿದ ರಮ್ಯಾ; ವಾಸ್ತವ ವಿವರಿಸಿ ಬೇಸರ ವ್ಯಕ್ತಪಡಿಸಿದ ನಟಿ

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?