AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬಸ್ಥರ ವಿರುದ್ಧ ದೂರು ನೀಡಿದ ಸ್ಯಾಂಡಲ್​ವುಡ್ ಹಿರಿಯ ನಟ ಅಶ್ವತ್ಥ್ ನಾರಾಯಣ

Actor Ashwath Narayan: ಸ್ಯಾಂಡಲ್​ವುಡ್ ಹಿರಿಯ ನಟ ಅಶ್ವತ್ಥ್ ನಾರಾಯಣ ಕುಟುಂಬದವರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ತಮ್ಮ ಕುಟುಂಬದವರು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಕುಟುಂಬಸ್ಥರ ವಿರುದ್ಧ ದೂರು ನೀಡಿದ ಸ್ಯಾಂಡಲ್​ವುಡ್ ಹಿರಿಯ ನಟ ಅಶ್ವತ್ಥ್ ನಾರಾಯಣ
ಸ್ಯಾಂಡಲ್​ವುಡ್ ಹಿರಿಯ ನಟ ಅಶ್ವತ್ಥ ನಾರಾಯಣ
TV9 Web
| Edited By: |

Updated on: Dec 15, 2021 | 1:31 PM

Share

ಬೆಂಗಳೂರು: ‘‘ನನ್ನ ಮಕ್ಕಳು ನನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ’’ ಎಂದು ಬೆಂಗಳೂರಿನಲ್ಲಿ ಸ್ಯಾಂಡಲ್​ವುಡ್ (sandalwood) ಹಿರಿಯ ನಟ ಅಶ್ವತ್ಥ್ ನಾರಾಯಣ (Actor Ashwath Narayan) ಆರೋಪ ಮಾಡಿದ್ದಾರೆ. ಕಳೆದ ಗುರುವಾರ ತಮ್ಮ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದರು ಎಂದೂ ಅವರು ಆರೋಪಿಸಿದ್ದಾರೆ. ಕಿರಿಯ ಮಗಳು ವಸುಂಧರಾ ಹಾಗೂ ಮಗ ಉದಯ್ ಕುಮಾರ್ ವಿರುದ್ಧ ಆರೋಪ ಮಾಡಿರುವ ನಟ ಅಶ್ವತ್ಥ್ ನಾರಾಯಣ, ‘‘ಹೆಂಡತಿಯ ಹೆಸರಲ್ಲಿ ಇದ್ದ ಜಾಗದಲ್ಲಿ ತಾನು ಮೂರು ಅಂತಸ್ಥಿನ ಮನೆ ಕಟ್ಟಿದ್ದೆ. ಆ ಮನೆಯನ್ನು ದಾನ ಪತ್ರ ಅಂತಮಾಡಿಸಿಕೊಂಡಿದ್ದಾರೆ. ತಮ್ಮನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಕಳೆದ ಗುರುವಾರ ಹಲ್ಲೆ ನಡೆಸಿ, ಬೆದರಿಕೆ ಹಾಕಿದ್ದಾರೆ. ತಮಗೆ ಸಹಾಯ ಬೇಕು’’ ಎಂದು ಕೋರಿಕೊಂಡಿದ್ದಾರೆ.

ನಟ ಅಶ್ವತ್ಥ್ ನಾರಾಯಣ ಅವರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತ್ನಿ, ಮಗ ಹಾಗೂ ಮೂರನೇ ಮಗಳ ವಿರುದ್ಧ ದೂರು ನೀಡಿದ್ದಾರೆ. ಬಸವೇಶ್ವರನಗರ ಠಾಣೆ (Basaveshwara Nagar police station) ಹಿರಿಯರ ಸಹಾಯವಾಣಿಯಲ್ಲಿ ದೂರು ನೀಡಲಾಗಿದ್ದು, ‘‘ಸರಿಯಾಗಿ ನೋಡಿಕೊಳ್ಳುತ್ತಿಲ್ಲ, ಹಲ್ಲೆ ಮಾಡಿದ್ದಾರೆಂದು’’ ಆರೋಪಿಸಲಾಗಿದೆ. ಎರಡನೇ ಮಗಳ ಜತೆ ಠಾಣೆಗೆ ತೆರಳಿ ಅಶ್ವತ್ಥ್ ನಾರಾಯಣ ಅವರು ದೂರು ನೀಡಿದ್ದಾರೆ.

ಇದನ್ನೂ ಓದಿ:

Raj Kundra: ಅಶ್ಲೀಲ ಚಿತ್ರ ಪ್ರಕರಣ; ರಾಜ್ ಕುಂದ್ರಾಗೆ ಬಂಧನದಿಂದ ತಾತ್ಕಾಲಿಕ ರಕ್ಷಣೆ ನೀಡಿದ ಸುಪ್ರೀಂ ಕೋರ್ಟ್

Katrina Kaif: ಮದುವೆಗೂ ಮುನ್ನ ವಿಕ್ಕಿ ಕೌಶಲ್​ಗೆ ಒಂದೇ ಒಂದು ಷರತ್ತು ವಿಧಿಸಿದ್ದರಂತೆ ಕತ್ರಿನಾ; ಏನದು?

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!