AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ಗೆ ಮತ್ತೊಂದು ಆಘಾತ; ಕನ್ನಡದ ಹಿರಿಯ ನಟ ರಾಜಾರಾಮ್​ ನಿಧನ

ಸ್ಯಾಂಡಲ್​ವುಡ್​ನಲ್ಲಿ ಒಬ್ಬರಾದ ಮೇಲೆ ಒಬ್ಬರು ನಿಧನ ಹೊಂದುತ್ತಿದ್ದಾರೆ. ಈಗ ಕನ್ನಡದ ಹಿರಿಯ ನಟ ರಾಜಾರಾಮ್​ ಮೃತಪಟ್ಟಿದ್ದಾರೆ. ಸೋಮವಾರ (ಮೇ 10) ಅವರು ನಿಧನ ಹೊಂದಿದ್ದಾರೆ. 

ಸ್ಯಾಂಡಲ್​ವುಡ್​ಗೆ ಮತ್ತೊಂದು ಆಘಾತ; ಕನ್ನಡದ ಹಿರಿಯ ನಟ ರಾಜಾರಾಮ್​ ನಿಧನ
ರಾಜಾರಾಮ್​
ರಾಜೇಶ್ ದುಗ್ಗುಮನೆ
|

Updated on:May 10, 2021 | 5:59 PM

Share

ಸ್ಯಾಂಡಲ್​ವುಡ್​ನಲ್ಲಿ ಒಬ್ಬರಾದ ಮೇಲೆ ಒಬ್ಬರು ನಿಧನ ಹೊಂದುತ್ತಿದ್ದಾರೆ. ಈಗ ಕನ್ನಡದ ಹಿರಿಯ ನಟ ರಾಜಾರಾಮ್​ ಮೃತಪಟ್ಟಿದ್ದಾರೆ. ಸೋಮವಾರ (ಮೇ 10) ಅವರು ನಿಧನ ಹೊಂದಿದ್ದಾರೆ. 

ಈ ವಿಚಾರವನ್ನು ನಟ ಸೃಜನ್​ ಲೋಕೇಶ್​ ಸಾಮಾಜಿಕ ಜಾಲತಾಣದಲ್ಲಿ ಖಚಿತಪಡಿಸಿದ್ದಾರೆ. ರಾಜಾರಾಮ್​ ಅಂಕಲ್​​ ನೀವು ನಮ್ಮನ್ನು ಬಿಟ್ಟು ತೆರಳಿರುವುದು ನಿಜಕ್ಕೂ ಬೇಸರವಾಗುತ್ತಿದೆ.  ನಿಮ್ಮನ್ನು ನಾವು ಮಿಸ್​ ಮಾಡಿಕೊಳ್ಳುತ್ತೇವೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.

ರಾಜಾರಾಮ್​ ಸಾವಿಗೆ ಕೊರೊನಾ ಕಾರಣ ಎನ್ನಲಾಗಿದೆ.  ಈ ವಿಚಾರ ಕುಟುಂಬದ ಕಡೆಯಿಂದ ಇನ್ನೂ ಅಧಿಕೃತವಾಗಿಲ್ಲ. ರಾಜಾರಾಮ್​ ಅವರಿಗೆ ವಯಸ್ಸಾಗಿತ್ತು. ಇತ್ತೀಚೆಗೆ ಅವರಿಗೆ ಕೊರೊನಾ ಸೋಂಕು ದೃಢವಾಗಿತ್ತು. ಹೀಗಾಗಿ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು. ಇಂದು (ಮೇ 10) ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ರಾಜಾರಾಮ್​ ಸಾವಿಗೆ ಕನ್ನಡ ಚಿತ್ರರಂಗದ ಸಾಕಷ್ಟು ಮಂದಿ ಸಂತಾಪ ಸೂಚಿಸಿದ್ದಾರೆ. ಕನ್ನಡದಲ್ಲಿ ಗಾಳಿಪಟ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ಅವರು ಪೋಷಕ ಪಾತ್ರ ನಿರ್ವಹಿಸಿದ್ದರು. ಧಾರಾವಾಹಿಗಳಲ್ಲೂ ಕೂಡ ರಾಜಾರಾಮ್​ ಬಣ್ಣ ಹಚ್ಚಿದ್ದಾರೆ.

ಸೆಲೆಬ್ರಿಟಿಗಳ ವಲಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ಪ್ರತಿದಿನ ಒಬ್ಬರಲ್ಲ ಒಬ್ಬರು ಕೊವಿಡ್​ಗೆ  ಬಲಿಯಾದರು. ಬಾಲಿವುಡ್​ ನಟ ರಾಹುಲ್ ವೋಹ್ರಾ, ತೆಲುಗು ನಟ ಟಿಎನ್​ಆರ್​, ತಮಿಳು ನಟ ಪಾಂಡು, ಕಾಲಿವುಡ್ ನಿರ್ದೇಶಕ ಕೆ.ವಿ. ಆನಂದ್, ಕನ್ನಡದ ಖ್ಯಾತ ನಿರ್ಮಾಪಕ ಕೋಟಿ ರಾಮು, ಯುವ ನಟ- ನಿರ್ಮಾಪಕ ಡಿ.ಎಸ್. ಮಂಜುನಾಥ್, ಕಾರ್ಯಕಾರಿ ನಿರ್ಮಾಪಕ ರಾಜಶೇಖರ್, ಪೋಸ್ಟರ್ ಡಿಸೈನರ್ ಮಸ್ತಾನ್, ಪುಟ್ಟಣ್ಣ ಕಣಗಾಲ್ ಪುತ್ರ ರಾಮು, ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಮುಂತಾದವರನ್ನು ಈ ಮಹಾಮಾರಿ ಬಲಿ ಪಡೆದುಕೊಂಡಿದೆ.

ಇದನ್ನೂ ಓದಿ: ನೀವಿಲ್ಲದೆ ನಾ ಬದುಕುವುದಾದರೂ ಹೇಗೆ; ಕೊರೊನಾದಿಂದ ಅಮ್ಮ- ಅಕ್ಕನನ್ನು ಕಳೆದುಕೊಂಡ ವೇದಾ ಕೃಷ್ಣಮೂರ್ತಿ ಭಾವನಾತ್ಮಕ ಸಂದೇಶ 

Published On - 5:44 pm, Mon, 10 May 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ