AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ಗೆ ಮತ್ತೊಂದು ಆಘಾತ; ಕನ್ನಡದ ಹಿರಿಯ ನಟ ರಾಜಾರಾಮ್​ ನಿಧನ

ಸ್ಯಾಂಡಲ್​ವುಡ್​ನಲ್ಲಿ ಒಬ್ಬರಾದ ಮೇಲೆ ಒಬ್ಬರು ನಿಧನ ಹೊಂದುತ್ತಿದ್ದಾರೆ. ಈಗ ಕನ್ನಡದ ಹಿರಿಯ ನಟ ರಾಜಾರಾಮ್​ ಮೃತಪಟ್ಟಿದ್ದಾರೆ. ಸೋಮವಾರ (ಮೇ 10) ಅವರು ನಿಧನ ಹೊಂದಿದ್ದಾರೆ. 

ಸ್ಯಾಂಡಲ್​ವುಡ್​ಗೆ ಮತ್ತೊಂದು ಆಘಾತ; ಕನ್ನಡದ ಹಿರಿಯ ನಟ ರಾಜಾರಾಮ್​ ನಿಧನ
ರಾಜಾರಾಮ್​
ರಾಜೇಶ್ ದುಗ್ಗುಮನೆ
|

Updated on:May 10, 2021 | 5:59 PM

Share

ಸ್ಯಾಂಡಲ್​ವುಡ್​ನಲ್ಲಿ ಒಬ್ಬರಾದ ಮೇಲೆ ಒಬ್ಬರು ನಿಧನ ಹೊಂದುತ್ತಿದ್ದಾರೆ. ಈಗ ಕನ್ನಡದ ಹಿರಿಯ ನಟ ರಾಜಾರಾಮ್​ ಮೃತಪಟ್ಟಿದ್ದಾರೆ. ಸೋಮವಾರ (ಮೇ 10) ಅವರು ನಿಧನ ಹೊಂದಿದ್ದಾರೆ. 

ಈ ವಿಚಾರವನ್ನು ನಟ ಸೃಜನ್​ ಲೋಕೇಶ್​ ಸಾಮಾಜಿಕ ಜಾಲತಾಣದಲ್ಲಿ ಖಚಿತಪಡಿಸಿದ್ದಾರೆ. ರಾಜಾರಾಮ್​ ಅಂಕಲ್​​ ನೀವು ನಮ್ಮನ್ನು ಬಿಟ್ಟು ತೆರಳಿರುವುದು ನಿಜಕ್ಕೂ ಬೇಸರವಾಗುತ್ತಿದೆ.  ನಿಮ್ಮನ್ನು ನಾವು ಮಿಸ್​ ಮಾಡಿಕೊಳ್ಳುತ್ತೇವೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.

ರಾಜಾರಾಮ್​ ಸಾವಿಗೆ ಕೊರೊನಾ ಕಾರಣ ಎನ್ನಲಾಗಿದೆ.  ಈ ವಿಚಾರ ಕುಟುಂಬದ ಕಡೆಯಿಂದ ಇನ್ನೂ ಅಧಿಕೃತವಾಗಿಲ್ಲ. ರಾಜಾರಾಮ್​ ಅವರಿಗೆ ವಯಸ್ಸಾಗಿತ್ತು. ಇತ್ತೀಚೆಗೆ ಅವರಿಗೆ ಕೊರೊನಾ ಸೋಂಕು ದೃಢವಾಗಿತ್ತು. ಹೀಗಾಗಿ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು. ಇಂದು (ಮೇ 10) ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ರಾಜಾರಾಮ್​ ಸಾವಿಗೆ ಕನ್ನಡ ಚಿತ್ರರಂಗದ ಸಾಕಷ್ಟು ಮಂದಿ ಸಂತಾಪ ಸೂಚಿಸಿದ್ದಾರೆ. ಕನ್ನಡದಲ್ಲಿ ಗಾಳಿಪಟ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ಅವರು ಪೋಷಕ ಪಾತ್ರ ನಿರ್ವಹಿಸಿದ್ದರು. ಧಾರಾವಾಹಿಗಳಲ್ಲೂ ಕೂಡ ರಾಜಾರಾಮ್​ ಬಣ್ಣ ಹಚ್ಚಿದ್ದಾರೆ.

ಸೆಲೆಬ್ರಿಟಿಗಳ ವಲಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ಪ್ರತಿದಿನ ಒಬ್ಬರಲ್ಲ ಒಬ್ಬರು ಕೊವಿಡ್​ಗೆ  ಬಲಿಯಾದರು. ಬಾಲಿವುಡ್​ ನಟ ರಾಹುಲ್ ವೋಹ್ರಾ, ತೆಲುಗು ನಟ ಟಿಎನ್​ಆರ್​, ತಮಿಳು ನಟ ಪಾಂಡು, ಕಾಲಿವುಡ್ ನಿರ್ದೇಶಕ ಕೆ.ವಿ. ಆನಂದ್, ಕನ್ನಡದ ಖ್ಯಾತ ನಿರ್ಮಾಪಕ ಕೋಟಿ ರಾಮು, ಯುವ ನಟ- ನಿರ್ಮಾಪಕ ಡಿ.ಎಸ್. ಮಂಜುನಾಥ್, ಕಾರ್ಯಕಾರಿ ನಿರ್ಮಾಪಕ ರಾಜಶೇಖರ್, ಪೋಸ್ಟರ್ ಡಿಸೈನರ್ ಮಸ್ತಾನ್, ಪುಟ್ಟಣ್ಣ ಕಣಗಾಲ್ ಪುತ್ರ ರಾಮು, ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಮುಂತಾದವರನ್ನು ಈ ಮಹಾಮಾರಿ ಬಲಿ ಪಡೆದುಕೊಂಡಿದೆ.

ಇದನ್ನೂ ಓದಿ: ನೀವಿಲ್ಲದೆ ನಾ ಬದುಕುವುದಾದರೂ ಹೇಗೆ; ಕೊರೊನಾದಿಂದ ಅಮ್ಮ- ಅಕ್ಕನನ್ನು ಕಳೆದುಕೊಂಡ ವೇದಾ ಕೃಷ್ಣಮೂರ್ತಿ ಭಾವನಾತ್ಮಕ ಸಂದೇಶ 

Published On - 5:44 pm, Mon, 10 May 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More