AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actor Shivaram Death: ಹಿರಿಯ ನಟ ಶಿವರಾಂ ನಿಧನ: ಕೊನೆಗೂ ಈಡೇರಲಿಲ್ಲ ಅಭಿಮಾನಿಗಳ ಪ್ರಾರ್ಥನೆ

Actor Shivaram Passes Away: ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.

Actor Shivaram Death: ಹಿರಿಯ ನಟ ಶಿವರಾಂ ನಿಧನ: ಕೊನೆಗೂ ಈಡೇರಲಿಲ್ಲ ಅಭಿಮಾನಿಗಳ ಪ್ರಾರ್ಥನೆ
ನಟ ಶಿವರಾಂ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Dec 04, 2021 | 3:20 PM

Share

ಕನ್ನಡ ಚಿತ್ರರಂಗದ ಹಿರಿಯ ಚೇತನ ನಟ ಎಸ್​.ಶಿವರಾಂ (S. Shivaram) ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಕಿರುತೆರೆ ಹಾಗೂ ಹಿರಿತೆರೆಯ ಹಲವಾರು ಚಿತ್ರ ಹಾಗೂ ಸೀರಿಯಲ್​ಗಳಲ್ಲಿ ಅವರು ನಟಿಸಿದ್ದರು. ಇತ್ತೀಚೆಗೆ ಅವರಿಗೆ ಅಪಘಾತವಾಗಿ, ತಲೆಗೆ ಪೆಟ್ಟು ಬಿದ್ದಿತ್ತು. ವಯಸ್ಸಾದ ಕಾರಣ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

‘ನಮ್ಮ ತಂದೆ ಶಿವರಾಮ್​ರವರು ಇನ್ನು ನಮ್ಮ ಜತೆ ಇಲ್ಲ. ಶಿವರಾಮ್​ರವರು ಭಗವಂತನ ಪಾದ ಸೇರಿದ್ದಾರೆ. ಆಸ್ಪತ್ರೆ ವತಿಯಿಂದ ಎಲ್ಲಾ ರೀತಿ ಚಿಕಿತ್ಸೆ ನೀಡಿದ್ದಾರೆ. ಆದರೆ ಶಿವರಾಮ್​ರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ’ ಎಂದು ಅವರ ಮಗ ಲಕ್ಷ್ಮೀಶ್​ ಹೇಳಿದ್ದಾರೆ.

1938ರಲ್ಲಿ ಚೂಡಸಂದ್ರ ಹಳ್ಳಿಯಲ್ಲಿ ಜನಿಸಿದ್ದ ಎಸ್. ಶಿವರಾಂ, 6 ದಶಕಗಳ ಕಾಲ ನೂರಾರು ಚಿತ್ರಗಳಲ್ಲಿ ಅಭಿನಯಿಸಿದ್ದರು. ಚಿತ್ರರಂಗದಲ್ಲಿ ಅವರು ಶಿವರಾಮಣ್ಣ ಎಂದೇ ಎಲ್ಲರಿಗೂ ಪರಿಚಿತರಾಗಿದ್ದರು. ಪೋಷಕ ನಟನಾಗಿ, ಹಾಸ್ಯನಟನಾಗಿ ನಟಿಸಿದ್ದ ಅವರು, ನಿರ್ದೇಶಕ, ನಿರ್ಮಾಪಕರಾಗಿಯೂ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದರು. ಸೋದರ ರಾಮನಾಥನ್ ಜತೆ ಸೇರಿ ‘ರಾಶಿ ಬ್ರದರ್ಸ್‌’ ಸಿನಿಮಾ ಸಂಸ್ಥೆ ಸ್ಥಾಪಿಸಿ ಹಲವು ಚಿತ್ರ ನಿರ್ಮಿಸಿದ್ದರು. ಚಿತ್ರರಂಗದ ದಿಗ್ಗಜ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಜತೆಯೂ ಶಿವರಾಂ ಕೆಲಸ ಮಾಡಿದ್ದರು. ಹಲವು ದಿಗ್ಗಜ ನಟರೊಂದಿಗೆ ಶಿವರಾಂ ತೆರೆ ಹಂಚಿಕೊಂಡಿದ್ದರು.

ಬೆರೆತ ಜೀವ (1965), ಮಾವನ ಮಗಳು (1965), ದುಡ್ಡೇ ದೊಡ್ಡಪ್ಪ (1966), ಲಗ್ನಪತ್ರಿಕೆ (1967),  ಶರಪಂಜರ (1971), ಮುಕ್ತಿ(1971), ಭಲೇ ಅದೃಷ್ಟವೋ ಅದೃಷ್ಟ(1971), ಸಿಪಾಯಿ ರಾಮು (1972), ನಾಗರಹಾವು(1972), ನಾ ಮೆಚ್ಚಿದ ಹುಡುಗ (1972), ಹೃದಯಸಂಗಮ (1972), ಕಿಲಾಡಿ ಕಿಟ್ಟು (1978), ನಾನೊಬ್ಬ ಕಳ್ಳ (1979), ಹಾಲುಜೇನು (1982), ಪಲ್ಲವಿ ಅನುಪಲ್ಲವಿ (1983), ಭಜರಂಗಿ (2013), ಬಂಗಾರ s / O ಬಂಗಾರದ ಮನುಷ್ಯ (2017) ಮೊದಲಾದ ಸಿನಿಮಾಗಳಲ್ಲಿ ಶಿವರಾಂ ನಟಿಸಿದ್ದರು. ಮಕ್ಕಳ ಸೈನ್ಯ ಸೇರಿ ಅನೇಕ ಚಿತ್ರಗಳಲ್ಲಿ ಹಾಸ್ಯ ಪಾತ್ರಗಳಲ್ಲಿ ಬಣ್ಣ ಹಚ್ಚಿದ್ದರು. 1980ರಲ್ಲಿ ‘ಡ್ರೈವರ್ ಹನುಮಂತು’ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದರು.

ಇದನ್ನೂ ಓದಿ:

‘ತಮ್ಮನನ್ನು ಕಳೆದುಕೊಂಡು ತಿಂಗಳಾಗಿದೆ; ಮತ್ತೆ ದೇವರು ಯಾಕೆ ನೋವು ಕೊಡ್ತಾನೋ ಗೊತ್ತಿಲ್ಲ’: ಶಿವರಾಂ ಬಗ್ಗೆ ಶಿವಣ್ಣನ ಮಾತು

 ಹಿರಿಯ ನಟ ಶಿವರಾಂ​ ಅವರಿಗೆ ಆಗಿದ್ದೇನು? ಇಂಚಿಂಚೂ ವಿವರ ನೀಡಿದ ವೈದ್ಯರು

Published On - 2:24 pm, Sat, 4 December 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ