Suresh Chandra Death: ಕೊರೊನಾದಿಂದ ಹಿರಿಯ ನಟ ಸುರೇಶ್​ ಚಂದ್ರ ನಿಧನ

ಸುರೇಶ್​ ಚಂದ್ರ ಅವರಿಗೆ ಕೊವಿಡ್​ ಕಾಣಿಸಿಕೊಂಡಿತ್ತು. ಹೀಗಾಗಿ, ಕೆಲವು ದಿನಗಳ ಹಿಂದೆ ಅವರನ್ನು ಬೆಂಗಳೂರಿನ ಜಯನಗರದಲ್ಲಿರುವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

Suresh Chandra Death: ಕೊರೊನಾದಿಂದ ಹಿರಿಯ ನಟ ಸುರೇಶ್​ ಚಂದ್ರ  ನಿಧನ
ಸುರೇಶ್​ ಚಂದ್ರ
Follow us
|

Updated on: Jun 11, 2021 | 3:11 PM

ಚಿತ್ರರಂಗದಲ್ಲಿ ಈಗಾಗಲೇ ಸಾಕಷ್ಟು ಜನರನ್ನು ಕೊರೊನಾ ವೈರಸ್​ ಬಲಿ ತೆಗೆದುಕೊಂಡಿದೆ. ಇದರ ಅಟ್ಟಹಾಸ ಸದ್ಯಕ್ಕೆ ಮುಗಿಯುವ ರೀತಿಯಲ್ಲಿ ಕಾಣುತ್ತಿಲ್ಲ. ಈಗ ಕೊರೊನಾದಿಂದ ಪತ್ರಕರ್ತ, ಹಿರಿಯ ನಟ ಸುರೇಶ್​ ಚಂದ್ರ ಅವರು ನಿಧನರಾಗಿದ್ದಾರೆ.

ಸುರೇಶ್​ ಚಂದ್ರ ಅವರಿಗೆ ಕೊವಿಡ್​ ಕಾಣಿಸಿಕೊಂಡಿತ್ತು. ಹೀಗಾಗಿ, ಕೆಲವು ದಿನಗಳ ಹಿಂದೆ ಅವರನ್ನು ಬೆಂಗಳೂರಿನ ಜಯನಗರದಲ್ಲಿರುವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಈಗ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಸುರೇಶ್​ ಚಂದ್ರ ಅವರು ಸಿನಿಮಾ ಪತ್ರಿಕೋದ್ಯಮದಲ್ಲಿದ್ದರು. ಹೀಗಾಗಿ, ಅವರಿಗೆ ಸ್ಟಾರ್​ ನಟರ ಜತೆ ಒಡನಾಟ ಉತ್ತಮವಾಗಿತ್ತು. ‘ಚೆಲುವಿನ ಚಿತ್ತಾರ’ ಸಿನಿಮಾದಲ್ಲಿ ನಟಿಸುವಂತೆ ನಿರ್ದೇಶಕ ಎಸ್​. ನಾರಾಯಣ್​ ಕೋರಿದ್ದರು. ಈ ಚಿತ್ರದ ಮೂಲಕ ಅವರು ಸಿನಿಮಾ ರಂಗಕ್ಕೆ ಕಾಲಿಟ್ಟರು. ಅಲ್ಲಿಂದ ಇಲ್ಲಿವರೆಗೆ ಸುಮಾರು 50ಕ್ಕೂ ಅಧಿಕ ಚಿತ್ರಗಳಲ್ಲಿ ಸುರೇಶ್​ ಚಂದ್ರ ನಟಿಸಿದ್ದಾರೆ. ಅವರ ನಿಧನಕ್ಕೆ ಅನೇಕರು ಸಂತಾಪ ಸೂಚಿಸಿದ್ದಾರೆ.

ಸೆಲೆಬ್ರಿಟಿಗಳ ವಲಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ಪ್ರತಿದಿನ ಒಬ್ಬರಲ್ಲ ಒಬ್ಬರು ಕೊವಿಡ್​ಗೆ ಬಲಿಯಾಗುತ್ತಲೇ ಇದ್ದಾರೆ. ಬಾಲಿವುಡ್ ನಟ ರಾಹುಲ್ ವೋಹ್ರಾ, ತೆಲುಗು ನಟ ಟಿಎನ್ಆರ್, ತಮಿಳು ನಟ ಪಾಂಡು, ಕಾಲಿವುಡ್ ನಿರ್ದೇಶಕ ಕೆ.ವಿ. ಆನಂದ್, ಕನ್ನಡದ ಖ್ಯಾತ ನಿರ್ಮಾಪಕ ಕೋಟಿ ರಾಮು, ಯುವ ನಟ- ನಿರ್ಮಾಪಕ ಡಿ.ಎಸ್. ಮಂಜುನಾಥ್, ಕಾರ್ಯಕಾರಿ ನಿರ್ಮಾಪಕ ರಾಜಶೇಖರ್, ಪೋಸ್ಟರ್ ಡಿಸೈನರ್ ಮಸ್ತಾನ್, ಪುಟ್ಟಣ್ಣ ಕಣಗಾಲ್ ಪುತ್ರ ರಾಮು, ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಮುಂತಾದವರನ್ನು ಈ ಮಹಾಮಾರಿ ಬಲಿ ಪಡೆದುಕೊಂಡಿದೆ.

ಇದನ್ನೂ ಓದಿ:

Koti Ramu: ಕೋಟಿ ರಾಮು ನಿಧನದ ಬಳಿಕ ಮೊದಲ ಬಾರಿ ಮೌನ ಮುರಿದ ಪತ್ನಿ ಮಾಲಾಶ್ರೀ

ತಾಜಾ ಸುದ್ದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ