Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಚಿತ್ರರಂಗದ ಹಿರಿಯ ನಟ ಟಿ ತಿಮ್ಮಯ್ಯ ನಿಧನ

ಚಲಿಸುವ ಮೋಡಗಳು, ಪ್ರತಿಧ್ವನಿ, ಬಂಧನ, ಬೆಂಕಿಯ ಬಾಲೆ, ಕಾಮನ ಬಿಲ್ಲು ಸೇರಿದಂತೆ ಕನ್ನಡ ಹಲವು ಕ್ಲಾಸಿಕ್ ಸಿನಿಮಾಗಳಲ್ಲಿ ನಟಿಸಿರುವ ಹಿರಿಯ ನಟ ಟಿ ತಿಮ್ಮಯ್ಯ ಅವರು ಇಂದು (ನವೆಂಬರ್ 16) ನಿಧನ ಹೊಂದಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ನಟ ಟಿ ತಿಮ್ಮಯ್ಯ ನಿಧನ
Follow us
ಮಂಜುನಾಥ ಸಿ.
|

Updated on:Nov 16, 2024 | 7:45 PM

ಡಾ ರಾಜ್​ಕುಮಾರ್, ವಿಷ್ಣುವರ್ಧನ್ ಸೇರಿದಂತೆ ಕನ್ನಡದ ಹಲವು ಹಿರಿಯ ನಟರೊಡನೆ ನಟಿಸಿದ್ದ ಹಿರಿಯ ಕಲಾವಿದರ ಡಿ ತಿಮ್ಮಯ್ಯ ಅವರು ಇಂದು (ನವೆಂಬರ್ 16) ನಿಧನ ಹೊಂದಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು, ಇವರಿಗೆ 4 ಜನ ಮಕ್ಕಳು, ಹೆಸರಾಂತ ನಿರ್ದೇಶಕರಾದ ದೊರೈ ಭಗವಾನ್, ಸುನೀಲ್ ಕುಮಾರ್ ದೇಸಾಯಿ, ಭಾರ್ಗವ, ಸಂಗೀತಂ ಶ್ರೀನಿವಾಸ್ ರಾವ್, ಕೆವಿ ಜಯರಾಮ್ ಮತ್ತು ಅನೇಕರೊಂದಿಗೆ ಕೆಲಸ ಮಾಡಿದ್ದಾರೆ.

ಚೆಲಿಸುವ ಮೋಡಗಳು, ಪ್ರತಿಧ್ವನಿ, ಬಂಧನ, ಬೆಂಕಿಯ ಬಾಲೆ, ಕಾಮನ ಬಿಲ್ಲು, ಪರಮೇಶಿ ಪ್ರೇಮ ಪ್ರಸಂಗ, ಜ್ವಾಲಾಮುಖಿ, ಭಾಗ್ಯದ ಲಕ್ಷ್ಮಿ ಬಾರಮ್ಮ , ಕರ್ಣ, ಈ ಜೀವ ನಿನಗಾಗಿ, ಕುರುಕ್ಷೇತ್ರ, ನಿಶ್ರ್ಕರ್ಷ, ಬೆಳದಿಂಗಳ ಬಾಲೆ ಚಿತ್ರಗಳಲ್ಲಿ ನಟಿಸಿದ್ದರು. ನಾಳೆ ಮಧ್ಯಾಹ್ನ 12 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ.

ರಂಗಭೂಮಿ ಮೂಲಕ ನಟನೆ ಆರಂಭಿಸಿದ ತಿಮ್ಮಯ್ಯನವರು ಚಿತ್ರರಂಗದ ಸೆಳೆತಕ್ಕೆ ಸಿಕ್ಕಿ ಸಿನಿಮಾಗಳಲ್ಲಿ ನಟಿಸಲು ಆರಂಭಿಸಿದರು. 80 ರ ದಶಕದಲ್ಲಿ ನಟನೆ ಆರಂಭಿಸಿದ ತಿಮ್ಮಯ್ಯನವರು ಸುಮಾರು ಮೂರು ದಶಕಕ್ಕೂ ಹೆಚ್ಚು ಕಾಲ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಕಳೆದ ಹಲ ವರ್ಷಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದಾಗಿ ಚಿತ್ರರಂಗದಿಂದ ದೂರ ಉಳಿಸಿದ್ದರು ತಿಮ್ಮಯ್ಯ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:35 pm, Sat, 16 November 24

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ