AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uday Huttinagadde: ಚಂದನವನದಲ್ಲಿ ಗುರುತಿಸಿಕೊಂಡಿದ್ದ ಪ್ರತಿಭಾವಂತ ನಟ ಉದಯ್​ ಹುತ್ತಿನಗದ್ದೆ ನಿಧನ

Uday Huttinagadde Passes Away: ಕನ್ನಡ ಚಿತ್ರರಂಗದ ಹಿರಿಯ ನಟ ಉದಯ್ ಹುತ್ತಿನಗದ್ದೆ ಗುರುವಾರ ನಿಧನರಾಗಿದ್ದಾರೆ. ಹಲವು ಖ್ಯಾತ ಕಲಾವಿದರೊಂದಿಗೆ ಬಣ್ಣ ಹಚ್ಚಿದ್ದ ಅವರು ಪ್ರಸ್ತುತ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು.

Uday Huttinagadde: ಚಂದನವನದಲ್ಲಿ ಗುರುತಿಸಿಕೊಂಡಿದ್ದ ಪ್ರತಿಭಾವಂತ ನಟ ಉದಯ್​ ಹುತ್ತಿನಗದ್ದೆ ನಿಧನ
ಉದಯ್ ಹುತ್ತಿನಗದ್ದೆ
TV9 Web
| Edited By: |

Updated on: Jun 03, 2022 | 7:44 AM

Share

ಕನ್ನಡ ಚಿತ್ರರಂಗದ (Sandalwood) ಹಿರಿಯ ನಟ ಉದಯ್ ಹುತ್ತಿನಗದ್ದೆ (Uday Huttinagadde) ರಾಜಾಜಿನಗರದ ಅವರ ಮನೆಯಲ್ಲಿ ಗುರುವಾರ ನಿಧನರಾಗಿದ್ದಾರೆ. ಆನಂದ್ ರಾವ್ ಸರ್ಕಲ್ ಬಳಿ ಇರುವ ಉದಯ್ ವಿಡಿಯೋ (ಉದಯ್ ಕಲರ್ ಲ್ಯಾಬ್)ನಿಂದ ಪ್ರಸ್ತುತ ಅವರು ಹೆಸರುವಾಸಿಯಾಗಿದ್ದರು. ಚಿಕ್ಕಮಗಳೂರು ಜಿಲ್ಲೆಯ ಬಸರಿಕಟ್ಟೆ ಸಮೀಪದ ಹುತ್ತಿನಗದ್ದೆಯವರಾದ ಉದಯ್ ಹಲವಾರು ದಶಕಗಳಿಂದ ವೃತ್ತಿಪರ ಛಾಯಾಗ್ರಹಣ ಮತ್ತು ವಿಡಿಯೋಗ್ರಫಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಚಿತ್ರಗಳ ವಿಚಾರಕ್ಕೆ ಬಂದರೆ ಅವರು, ಡಾ.ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಅನಂತನಾಗ್, ಟೈಗರ್ ಪ್ರಭಾಕರ್ ಅವರೊಂದಿಗೆ ತೆರೆ ಹಂಚಿಕೊಂಡಿದ್ದರು. ‘ದೇವತಾ ಮನುಷ್ಯ’ ಚಿತ್ರದಲ್ಲಿ ರಾಜಕುಮಾರ್ ಅವರೊಂದಿಗೆ, ‘ಜಯಭೇರಿ’ಯಲ್ಲಿ ಅಂಬರೀಶ್ ಅವರೊಂದಿಗೆ, ‘ಉಂಡೂ ಹೋದ, ಕೊಂಡೂ ಹೋದ’ ಚಿತ್ರದಲ್ಲಿ ಅನಂತನಾಗ್ ಜೊತೆ ತೆರೆಹಂಚಿಕೊಂಡಿದ್ದರು.

‘ಆರಂಭ’ ಚಿತ್ರದ ಮೂಲಕ ಉದಯ್ ಅವರು ನಿರ್ಮಾಪಕರಾಗಿ ಹಾಗೂ ನಾಯಕರಾಗಿ ಚಂದನವನದಲ್ಲಿ ಗುರುತಿಸಿಕೊಂಡರು. ಮುಂದೆ ಅವರು ‘ಅಗ್ನಿಪರ್ವ’, ‘ಶುಭಮಿಲನ’, ‘ಉದ್ಭವ’, ‘ಶಿವಯೋಗಿ ಅಕ್ಕಮಹಾದೇವಿ’, ‘ಅಮೃತ ಬಿಂದು’ ಮೊದಲಾದ ಚಿತ್ರಗಳಲ್ಲಿ ನಟಿಸಿದ್ದರು. ನಂತರ ಚಿತ್ರರಂಗದಿಂದ ದೂರ ಉಳಿದಿದ್ದ ಅವರು ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು.

ಚಿಕ್ಕಮಗಳೂರು ಮೂಲದ ಉದಯ್ ಹುತ್ತಿನಗದ್ದೆ ಮೈಸೂರು ಹಾಗೂ ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡಿದ್ದರು. ‘ಅಭಿನಯ ತರಂಗ’ದಲ್ಲಿ ನಟನೆಯ ತರಬೇತಿ ಪಡೆದಿದ್ದರು. ಆ ಬಳಿಕ ಚಿತ್ರರಂಗಕ್ಕೆ ಕಲಾವಿದನಾಗಿ ಪದಾರ್ಪಣೆ ಮಾಡಿದ್ದರು. ಖ್ಯಾತ ನಾಮರೊಂದಿಗೆ ತೆರೆ ಹಂಚಿಕೊಂಡಿದ್ದರೂ ಕೂಡ ಅವರು ಕೆಲ ವರ್ಷಗಳ ನಂತರ ಚಿತ್ರರಂಗದಿಂದ ದೂರ ಉಳಿದರು.

ಇದನ್ನೂ ಓದಿ
Image
Adipurush budget: ಪ್ರಭಾಸ್ ನಟನೆಯ ‘ಆದಿಪುರುಷ್’ಗೆ ಬಾಹುಬಲಿಗಿಂತಲೂ ಹೆಚ್ಚು ದುಡ್ಡು ಸುರಿದ ನಿರ್ಮಾಪಕರು; ಅಚ್ಚರಿಯ ವಿಚಾರ ಬಹಿರಂಗ
Image
50ನೇ ದಿನ ‘ಕೆಜಿಎಫ್ 2’ ಎಷ್ಟು ಕಡೆಗಳಲ್ಲಿ ಪ್ರದರ್ಶನ ಕಾಣುತ್ತಿದೆ; ಇಲ್ಲಿದೆ ಮಾಹಿತಿ
Image
ಬೆಂಗಳೂರಲ್ಲಿ ಹೇಗಿತ್ತು ನೋಡಿ ಕಮಲ್ ಹಾಸನ್ ‘ವಿಕ್ರಮ್​’ ಸಿನಿಮಾ ಪ್ರಮೋಷನ್
Image
ನನ್ನ ಜತೆ ಅಲ್ಲು ಅರ್ಜುನ್ ಆದಷ್ಟು ಬೇಗ ಕೆಲಸ ಮಾಡಬೇಕು ಎಂದ ಅಕ್ಷಯ್ ಕುಮಾರ್

ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿಯಲ್ಲಿ ಪರಿಣತಿ ಹೊಂದಿದ್ದ ಉದಯ್​ ಅವರು ಬೆಂಗಳೂರಿನಲ್ಲಿ ಅದೇ ಉದ್ಯಮದಲ್ಲಿ ತೊಡಗಿಸಿಕೊಂಡು ಯಶಸ್ವಿಯಾದರು. ಚಿಕ್ಕಮಗಳೂರಿನಲ್ಲಿ ಕಾಫಿ ಎಸ್ಟೇಟ್ ಹೊಂದಿರುವ ಅವರು ಅದರಲ್ಲೂ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.

ತಮ್ಮ ಪ್ರತಿಭೆಯಿಂದ ಅಪಾರ ಜನಮನ್ನಣೆ ಗಳಿಸಿದ್ದ ಉದಯ್ ಅವರ ನಿಧನಕ್ಕೆ ಚಿತ್ರರಂಗ ಹಾಗೂ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ: ನೆರವೇರಿತು ಗಾಯಕ ಕೆಕೆ ಅಂತ್ಯಸಂಸ್ಕಾರ; ತಂದೆಗೆ ಗುಡ್ ​ಬೈ ಹೇಳಿದ ಪುತ್ರಿ ತಮಾರಾ

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ