Sign In

By signing in or creating an account, you agree with Associated Broadcasting Company's Terms & Conditions and Privacy Policy.

Surekha Death: ಕನ್ನಡ ಚಿತ್ರರಂಗದ ಹಿರಿಯ ನಟಿ ಸುರೇಖಾ ಹೃದಯಾಘಾತದಿಂದ ನಿಧನ

ಸುರೇಖಾ ಅವರಿಗೆ 66 ವರ್ಷ ವಯಸ್ಸಾಗಿತ್ತು. ಹೃದಯಾಘಾತವಾದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ಅವರು ಬದುಕುಳಿಯಲಿಲ್ಲ.

Surekha Death: ಕನ್ನಡ ಚಿತ್ರರಂಗದ ಹಿರಿಯ ನಟಿ ಸುರೇಖಾ ಹೃದಯಾಘಾತದಿಂದ ನಿಧನ
ಹಿರಿಯ ನಟಿ ಸುರೇಖಾ
Follow us
ಮದನ್​ ಕುಮಾರ್​
|

Updated on: Jun 06, 2021 | 12:06 PM

ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಜಯಾ ಅವರು ನಿಧನರಾದ ಸುದ್ದಿ ಕೇಳಿಬಂದ ಬೆನ್ನಲ್ಲೇ ಮತ್ತೋರ್ವ ಹಿರಿಯ ನಟಿ ಸುರೇಖಾ ಮೃತರಾಗಿದ್ದಾರೆ. ಡಾ. ರಾಜ್​ಕುಮಾರ್​ ಸೇರಿದಂತೆ ಅನೇಕ ಸ್ಟಾರ್​ ನಟರ ಜೊತೆ ನಟಿಸುವ ಮೂಲಕ ಜನಪ್ರಿಯರಾಗಿದ್ದ ಅವರು ಹಲವು ವರ್ಷಗಳ ಕಾಲ ಚಂದನವನದಲ್ಲಿ ಸಕ್ರಿಯರಾಗಿದ್ದರು. ಶನಿವಾರ (ಜೂ.5) ರಾತ್ರಿ 9.30ರ ಸುಮಾರಿಗೆ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಸುರೇಖಾ ಅವರಿಗೆ 66 ವರ್ಷ ವಯಸ್ಸಾಗಿತ್ತು. ಹೃದಯಾಘಾತವಾದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ಸುರೇಖಾ ಬದುಕುಳಿಯಲಿಲ್ಲ. ಬನಶಂಕರಿ ಚಿತಾಗಾರದಲ್ಲಿ ಇಂದು (ಜೂ.6) ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಸುರೇಖಾ ಭರತನಾಟ್ಯ ಮತ್ತು ಕೂಚುಪುಡಿ ನೃತ್ಯ ಕಲಾವಿದೆ ಆಗಿದ್ದರು. ಹಲವು ದೇಶಗಳಲ್ಲಿ ನೃತ್ಯ ಪ್ರದರ್ಶನ ನೀಡಿದ್ದ ಅವರಿಗೆ ಅಪಾರ ಅಭಿಮಾನಿಗಳಿದ್ದರು. ಡಾ. ರಾಜ್​ಕುಮಾರ್​ ಅವರ ಹಲವಾರು ಸಿನಿಮಾಗಳಲ್ಲಿ ಸುರೇಖಾ ನಟಿಸಿದ್ದರು. 150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಸುರೇಖಾ ಅಭಿನಯಿಸಿದ್ದರು. ಮಾಯಾ ಮನುಷ್ಯ, ನಾನು ಬಾಳಬೇಕು, ನಾನು ಅವನಿಲ್ಲೈ ಮುಂತಾದ ಸಿನಿಮಾಗಳಲ್ಲಿ ಅವರು ನಾಯಕಿ ಆಗಿದ್ದರು.

ಆಪರೇಷನ್ ಜಾಕ್ ಪಾಟ್​ನಲ್ಲಿ ಸಿಐಡಿ 999, ತ್ರಿಮೂರ್ತಿ, ಒಲವು ಗೆಲುವು, ಗಿರಿ ಕನ್ಯೆ, ಸಾಕ್ಷಾತ್ಕಾರ, ಕಸ್ತೂರಿ ನಿವಾಸ, ಹುಲಿಯ ಹಾಲಿನ ಮೇವು ಮುಂತಾದ ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದರು. ಶಿವಕನ್ಯೆ, ಕಾವೇರಿ, ಕೆಸರಿನ ಕಮಲ, ಬ್ಯಾಂಕರ್ ಮಾರ್ಗಯ್ಯ, ಆಲೆಮನೆ, ನಾಗರಹೊಳೆ, ತಾಯಿ ದೇವರು, ಭಕ್ತ ಸಿರಿಯಾಳ ಮುಂತಾದ ಚಿತ್ರಗಳಲ್ಲಿ ಸುರೇಖಾ ಮುಖ್ಯಭೂಮಿಕೆ ನಿಭಾಯಿಸಿದ್ದರು.

ಇದನ್ನೂ ಓದಿ:

ನಟಿ ಬಿ. ಜಯಾ ಮೃತದೇಹ ರಸ್ತೆ ಪಕ್ಕದಲ್ಲಿ ಯಾಕಿತ್ತು? ಕುಟುಂಬದವರಿಂದಲೇ ಸಿಕ್ತು ಸ್ಪಷ್ಟನೆ

Koti Ramu: ಕೋಟಿ ರಾಮು ನಿಧನದ ಬಳಿಕ ಮೊದಲ ಬಾರಿ ಮೌನ ಮುರಿದ ಪತ್ನಿ ಮಾಲಾಶ್ರೀ

ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ